AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟರ್ ಬಡ್ಡಿ ಬಾಧೆ ತಪ್ಪಿಸಲು ಸ್ವನಿಧಿ ಯೋಜನೆ ಜಾರಿಗೊಳಿಸಿದ ಸಿಎಂ ಬೊಮ್ಮಾಯಿ: ಇದರಿಂದ ಬೀದಿ ಬದಿ ವ್ಯಾಪಾರಿಗಳಿಗೆ ಸಿಗಲಿದೆ ಭಾರೀ ಆಫರ್

ಈ ಯೋಜನೆಯಲ್ಲಿ ದುಡ್ಡು ಕೊಡುವುದಷ್ಟೇ ಅಲ್ಲಾ 7% ಸಬ್ಸಿಡಿ ಕೂಡ ಕೊಡಲಾಗುತ್ತೆ. ಅವರ ಅವರ ಏರಿಯಾದಲ್ಲಿ ಸಾಲ ಕೊಡಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. -ಸಿಎಂ ಬೊಮ್ಮಾಯಿ

ಮೀಟರ್ ಬಡ್ಡಿ ಬಾಧೆ ತಪ್ಪಿಸಲು ಸ್ವನಿಧಿ ಯೋಜನೆ ಜಾರಿಗೊಳಿಸಿದ ಸಿಎಂ ಬೊಮ್ಮಾಯಿ: ಇದರಿಂದ ಬೀದಿ ಬದಿ ವ್ಯಾಪಾರಿಗಳಿಗೆ ಸಿಗಲಿದೆ ಭಾರೀ ಆಫರ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಒಂದು ವರ್ಷ
TV9 Web
| Edited By: |

Updated on: Jul 18, 2022 | 9:54 PM

Share

ಬೆಂಗಳೂರು: ಮೀಟರ್ ಬಡ್ಡಿಯಿಂದ ತಪ್ಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಸ್ವನಿಧಿ ಯೋಜನೆ(Svanidhi Scheme) ಜಾರಿ ಮಾಡಿದ್ದಾರೆ. ಇಂದು (ಜುಲೈ 18) ಪಾಲಿಕೆಯ ಡಾ.ರಾಜ್‌ಕುಮಾರ್ ಸಂಭಾಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವನಿಧಿ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಹಾಗೂ ನಿಗದಿತ ಅವಧಿಯಲ್ಲಿ ಬ್ಯಾಂಕ್ ಗಳ ಸಾಲ ಮರು ಪಾವತಿಸಿದ ಬೀದಿ ಬದಿ ವ್ಯಾಪಾರಿಗಳಿಗೆ ಸಿಎಂ ಗೌರವ ಸಲ್ಲಿಸಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಸ್ವನಿಧಿ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಒಟ್ಟು 9 ಸಾವಿರ ಫಲಾನುಭವಿಗಳಿಗೆ ಹಣಕಾಸಿನ ಸಹಕಾರ ಕೊಡಲಾಗುತ್ತೆ. ಮೀಟರ್ ಬಡ್ಡಿಯಿಂದ ತಪ್ಪಿಸಿ ಸರ್ಕಾರ ಸ್ವನಿಧಿ ಯೋಜನೆ ಮಾಡಿದ್ದಾರೆ. ಕೇಂದ್ರ ಸರ್ಕಾರದಿಂದ ಹಣ ಬರುತ್ತಿದೆ. ನಮ್ಮ ಪ್ರಧಾನಿಗಳು ಬಡಪರ ಕಾರ್ಯಕ್ರಮ ಮಾಡ್ತಾರೆ. ಬಡ ಹಣ್ಣುಮಕ್ಕಳಿಗೆ ಅನುಕೂಲವಾಗಲೆಂದು ಗ್ಯಾಸ್ ಯೋಜನೆ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಡವರ ಬಗ್ಗೆ ಸದಾ ಕಳಕಳಿ ಇರುತ್ತದೆ. ಕೆಳಹಂತದಲ್ಲಿ ದುಡಿಯುವರ ಕೈಯಲ್ಲಿ ದೇಶದ ಆರ್ಥಿಕತೆ ಇದೆ. ಒಂದು ಕಾಲದಲ್ಲಿ ದುಡ್ಡೆ ದೊಡ್ಡಪ್ಪ ಅನ್ನೋ ಕಾಲ ಇತ್ತು. ಈಗ ದುಡಿಮೆ ಮಾಡುವವರೆ ದೊಡ್ಡಪ್ಪ ಹಾಗಾಗಿ ದುಡಿಮೆ ಮಾಡಬೇಕು. ನಿಮ್ಮ ದುಡಿಮೆಯನ್ನ ಪೂಜೆ ಮಾಡಿ. ಮಹಾಲಕ್ಷ್ಮಿ ಒಲಿಯುತ್ತಾಳೆ.

ಈ ಯೋಜನೆಯಲ್ಲಿ ದುಡ್ಡು ಕೊಡುವುದಷ್ಟೇ ಅಲ್ಲಾ 7% ಸಬ್ಸಿಡಿ ಕೂಡ ಕೊಡಲಾಗುತ್ತೆ. ಅವರ ಅವರ ಏರಿಯಾದಲ್ಲಿ ಸಾಲ ಕೊಡಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಮುಂದಿನ ದಿನ ರಾಜ್ಯ ಸರ್ಕಾರದಿಂದಲೂ ಬೀದಿ ಬದಿ ವ್ಯಾಪಾರಿಗಳಿಗೆ ಹೊಸ ಯೋಜನೆ ಮಾಡಲಾಗುತ್ತೆ. ಈ ಯೋಜನೆಯಿಂದ ಲಕ್ಷಾಂತರ ಜನರಿಗೆ ಕೆಲಸ ಸಿಗುತ್ತೆ. ಈ ಯೋಜನೆ ಮೊದಲು ಬಾಂಗ್ಲಾ ದೇಶದಲ್ಲಿ ಪ್ರಾರಂಭ ಮಾಡಿದ್ರು. ಬೀದಿ ವ್ಯಾಪಾರಿಗಳ ಕೈ ಭೂಮಿ ನೋಡಬೇಕು ಹೊರತು ಆಕಾಶ ನೋಡಬಾರದು. ನಿಮ್ಮ ಬೇಕು ಬೇಡಗಳನ್ನ ನೀವೇ ನಿರ್ಧರಿಸಿದ್ರೆ ಸ್ವಾವಲಂಭಿಗಳು ಆಗುತ್ತೀರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ