AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟರ್ ಬಡ್ಡಿ ಬಾಧೆ ತಪ್ಪಿಸಲು ಸ್ವನಿಧಿ ಯೋಜನೆ ಜಾರಿಗೊಳಿಸಿದ ಸಿಎಂ ಬೊಮ್ಮಾಯಿ: ಇದರಿಂದ ಬೀದಿ ಬದಿ ವ್ಯಾಪಾರಿಗಳಿಗೆ ಸಿಗಲಿದೆ ಭಾರೀ ಆಫರ್

ಈ ಯೋಜನೆಯಲ್ಲಿ ದುಡ್ಡು ಕೊಡುವುದಷ್ಟೇ ಅಲ್ಲಾ 7% ಸಬ್ಸಿಡಿ ಕೂಡ ಕೊಡಲಾಗುತ್ತೆ. ಅವರ ಅವರ ಏರಿಯಾದಲ್ಲಿ ಸಾಲ ಕೊಡಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. -ಸಿಎಂ ಬೊಮ್ಮಾಯಿ

ಮೀಟರ್ ಬಡ್ಡಿ ಬಾಧೆ ತಪ್ಪಿಸಲು ಸ್ವನಿಧಿ ಯೋಜನೆ ಜಾರಿಗೊಳಿಸಿದ ಸಿಎಂ ಬೊಮ್ಮಾಯಿ: ಇದರಿಂದ ಬೀದಿ ಬದಿ ವ್ಯಾಪಾರಿಗಳಿಗೆ ಸಿಗಲಿದೆ ಭಾರೀ ಆಫರ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಒಂದು ವರ್ಷ
TV9 Web
| Updated By: ಆಯೇಷಾ ಬಾನು|

Updated on: Jul 18, 2022 | 9:54 PM

Share

ಬೆಂಗಳೂರು: ಮೀಟರ್ ಬಡ್ಡಿಯಿಂದ ತಪ್ಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಸ್ವನಿಧಿ ಯೋಜನೆ(Svanidhi Scheme) ಜಾರಿ ಮಾಡಿದ್ದಾರೆ. ಇಂದು (ಜುಲೈ 18) ಪಾಲಿಕೆಯ ಡಾ.ರಾಜ್‌ಕುಮಾರ್ ಸಂಭಾಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವನಿಧಿ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಹಾಗೂ ನಿಗದಿತ ಅವಧಿಯಲ್ಲಿ ಬ್ಯಾಂಕ್ ಗಳ ಸಾಲ ಮರು ಪಾವತಿಸಿದ ಬೀದಿ ಬದಿ ವ್ಯಾಪಾರಿಗಳಿಗೆ ಸಿಎಂ ಗೌರವ ಸಲ್ಲಿಸಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಸ್ವನಿಧಿ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಒಟ್ಟು 9 ಸಾವಿರ ಫಲಾನುಭವಿಗಳಿಗೆ ಹಣಕಾಸಿನ ಸಹಕಾರ ಕೊಡಲಾಗುತ್ತೆ. ಮೀಟರ್ ಬಡ್ಡಿಯಿಂದ ತಪ್ಪಿಸಿ ಸರ್ಕಾರ ಸ್ವನಿಧಿ ಯೋಜನೆ ಮಾಡಿದ್ದಾರೆ. ಕೇಂದ್ರ ಸರ್ಕಾರದಿಂದ ಹಣ ಬರುತ್ತಿದೆ. ನಮ್ಮ ಪ್ರಧಾನಿಗಳು ಬಡಪರ ಕಾರ್ಯಕ್ರಮ ಮಾಡ್ತಾರೆ. ಬಡ ಹಣ್ಣುಮಕ್ಕಳಿಗೆ ಅನುಕೂಲವಾಗಲೆಂದು ಗ್ಯಾಸ್ ಯೋಜನೆ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಡವರ ಬಗ್ಗೆ ಸದಾ ಕಳಕಳಿ ಇರುತ್ತದೆ. ಕೆಳಹಂತದಲ್ಲಿ ದುಡಿಯುವರ ಕೈಯಲ್ಲಿ ದೇಶದ ಆರ್ಥಿಕತೆ ಇದೆ. ಒಂದು ಕಾಲದಲ್ಲಿ ದುಡ್ಡೆ ದೊಡ್ಡಪ್ಪ ಅನ್ನೋ ಕಾಲ ಇತ್ತು. ಈಗ ದುಡಿಮೆ ಮಾಡುವವರೆ ದೊಡ್ಡಪ್ಪ ಹಾಗಾಗಿ ದುಡಿಮೆ ಮಾಡಬೇಕು. ನಿಮ್ಮ ದುಡಿಮೆಯನ್ನ ಪೂಜೆ ಮಾಡಿ. ಮಹಾಲಕ್ಷ್ಮಿ ಒಲಿಯುತ್ತಾಳೆ.

ಈ ಯೋಜನೆಯಲ್ಲಿ ದುಡ್ಡು ಕೊಡುವುದಷ್ಟೇ ಅಲ್ಲಾ 7% ಸಬ್ಸಿಡಿ ಕೂಡ ಕೊಡಲಾಗುತ್ತೆ. ಅವರ ಅವರ ಏರಿಯಾದಲ್ಲಿ ಸಾಲ ಕೊಡಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಮುಂದಿನ ದಿನ ರಾಜ್ಯ ಸರ್ಕಾರದಿಂದಲೂ ಬೀದಿ ಬದಿ ವ್ಯಾಪಾರಿಗಳಿಗೆ ಹೊಸ ಯೋಜನೆ ಮಾಡಲಾಗುತ್ತೆ. ಈ ಯೋಜನೆಯಿಂದ ಲಕ್ಷಾಂತರ ಜನರಿಗೆ ಕೆಲಸ ಸಿಗುತ್ತೆ. ಈ ಯೋಜನೆ ಮೊದಲು ಬಾಂಗ್ಲಾ ದೇಶದಲ್ಲಿ ಪ್ರಾರಂಭ ಮಾಡಿದ್ರು. ಬೀದಿ ವ್ಯಾಪಾರಿಗಳ ಕೈ ಭೂಮಿ ನೋಡಬೇಕು ಹೊರತು ಆಕಾಶ ನೋಡಬಾರದು. ನಿಮ್ಮ ಬೇಕು ಬೇಡಗಳನ್ನ ನೀವೇ ನಿರ್ಧರಿಸಿದ್ರೆ ಸ್ವಾವಲಂಭಿಗಳು ಆಗುತ್ತೀರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್