AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟರ್ ಬಡ್ಡಿ ಬಾಧೆ ತಪ್ಪಿಸಲು ಸ್ವನಿಧಿ ಯೋಜನೆ ಜಾರಿಗೊಳಿಸಿದ ಸಿಎಂ ಬೊಮ್ಮಾಯಿ: ಇದರಿಂದ ಬೀದಿ ಬದಿ ವ್ಯಾಪಾರಿಗಳಿಗೆ ಸಿಗಲಿದೆ ಭಾರೀ ಆಫರ್

ಈ ಯೋಜನೆಯಲ್ಲಿ ದುಡ್ಡು ಕೊಡುವುದಷ್ಟೇ ಅಲ್ಲಾ 7% ಸಬ್ಸಿಡಿ ಕೂಡ ಕೊಡಲಾಗುತ್ತೆ. ಅವರ ಅವರ ಏರಿಯಾದಲ್ಲಿ ಸಾಲ ಕೊಡಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. -ಸಿಎಂ ಬೊಮ್ಮಾಯಿ

ಮೀಟರ್ ಬಡ್ಡಿ ಬಾಧೆ ತಪ್ಪಿಸಲು ಸ್ವನಿಧಿ ಯೋಜನೆ ಜಾರಿಗೊಳಿಸಿದ ಸಿಎಂ ಬೊಮ್ಮಾಯಿ: ಇದರಿಂದ ಬೀದಿ ಬದಿ ವ್ಯಾಪಾರಿಗಳಿಗೆ ಸಿಗಲಿದೆ ಭಾರೀ ಆಫರ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಒಂದು ವರ್ಷ
TV9 Web
| Edited By: ಆಯೇಷಾ ಬಾನು|

Updated on: Jul 18, 2022 | 9:54 PM

Share

ಬೆಂಗಳೂರು: ಮೀಟರ್ ಬಡ್ಡಿಯಿಂದ ತಪ್ಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಸ್ವನಿಧಿ ಯೋಜನೆ(Svanidhi Scheme) ಜಾರಿ ಮಾಡಿದ್ದಾರೆ. ಇಂದು (ಜುಲೈ 18) ಪಾಲಿಕೆಯ ಡಾ.ರಾಜ್‌ಕುಮಾರ್ ಸಂಭಾಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವನಿಧಿ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಹಾಗೂ ನಿಗದಿತ ಅವಧಿಯಲ್ಲಿ ಬ್ಯಾಂಕ್ ಗಳ ಸಾಲ ಮರು ಪಾವತಿಸಿದ ಬೀದಿ ಬದಿ ವ್ಯಾಪಾರಿಗಳಿಗೆ ಸಿಎಂ ಗೌರವ ಸಲ್ಲಿಸಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಸ್ವನಿಧಿ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಒಟ್ಟು 9 ಸಾವಿರ ಫಲಾನುಭವಿಗಳಿಗೆ ಹಣಕಾಸಿನ ಸಹಕಾರ ಕೊಡಲಾಗುತ್ತೆ. ಮೀಟರ್ ಬಡ್ಡಿಯಿಂದ ತಪ್ಪಿಸಿ ಸರ್ಕಾರ ಸ್ವನಿಧಿ ಯೋಜನೆ ಮಾಡಿದ್ದಾರೆ. ಕೇಂದ್ರ ಸರ್ಕಾರದಿಂದ ಹಣ ಬರುತ್ತಿದೆ. ನಮ್ಮ ಪ್ರಧಾನಿಗಳು ಬಡಪರ ಕಾರ್ಯಕ್ರಮ ಮಾಡ್ತಾರೆ. ಬಡ ಹಣ್ಣುಮಕ್ಕಳಿಗೆ ಅನುಕೂಲವಾಗಲೆಂದು ಗ್ಯಾಸ್ ಯೋಜನೆ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಡವರ ಬಗ್ಗೆ ಸದಾ ಕಳಕಳಿ ಇರುತ್ತದೆ. ಕೆಳಹಂತದಲ್ಲಿ ದುಡಿಯುವರ ಕೈಯಲ್ಲಿ ದೇಶದ ಆರ್ಥಿಕತೆ ಇದೆ. ಒಂದು ಕಾಲದಲ್ಲಿ ದುಡ್ಡೆ ದೊಡ್ಡಪ್ಪ ಅನ್ನೋ ಕಾಲ ಇತ್ತು. ಈಗ ದುಡಿಮೆ ಮಾಡುವವರೆ ದೊಡ್ಡಪ್ಪ ಹಾಗಾಗಿ ದುಡಿಮೆ ಮಾಡಬೇಕು. ನಿಮ್ಮ ದುಡಿಮೆಯನ್ನ ಪೂಜೆ ಮಾಡಿ. ಮಹಾಲಕ್ಷ್ಮಿ ಒಲಿಯುತ್ತಾಳೆ.

ಈ ಯೋಜನೆಯಲ್ಲಿ ದುಡ್ಡು ಕೊಡುವುದಷ್ಟೇ ಅಲ್ಲಾ 7% ಸಬ್ಸಿಡಿ ಕೂಡ ಕೊಡಲಾಗುತ್ತೆ. ಅವರ ಅವರ ಏರಿಯಾದಲ್ಲಿ ಸಾಲ ಕೊಡಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಮುಂದಿನ ದಿನ ರಾಜ್ಯ ಸರ್ಕಾರದಿಂದಲೂ ಬೀದಿ ಬದಿ ವ್ಯಾಪಾರಿಗಳಿಗೆ ಹೊಸ ಯೋಜನೆ ಮಾಡಲಾಗುತ್ತೆ. ಈ ಯೋಜನೆಯಿಂದ ಲಕ್ಷಾಂತರ ಜನರಿಗೆ ಕೆಲಸ ಸಿಗುತ್ತೆ. ಈ ಯೋಜನೆ ಮೊದಲು ಬಾಂಗ್ಲಾ ದೇಶದಲ್ಲಿ ಪ್ರಾರಂಭ ಮಾಡಿದ್ರು. ಬೀದಿ ವ್ಯಾಪಾರಿಗಳ ಕೈ ಭೂಮಿ ನೋಡಬೇಕು ಹೊರತು ಆಕಾಶ ನೋಡಬಾರದು. ನಿಮ್ಮ ಬೇಕು ಬೇಡಗಳನ್ನ ನೀವೇ ನಿರ್ಧರಿಸಿದ್ರೆ ಸ್ವಾವಲಂಭಿಗಳು ಆಗುತ್ತೀರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ