AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಕಾನಮಿ ಅಂದ್ರೆ ಹಣವಲ್ಲ, ಜನರ ಬದುಕಿನ ದುಡಿಮೆಯೇ ಎಕಾನಮಿ ನಿರ್ಧಾರ ಮಾಡುತ್ತದೆ; ಜಿಎಸ್‌ಟಿ ದಿನಾಚರಣೆ ವೇಳೆ ಸಿಎಂ ಬೊಮ್ಮಾಯಿ ಅರ್ಥವತ್ತಾದ ಮಾತು

ಕರ್ನಾಟಕ ಜಿಎಸ್ಟಿ ನಿರ್ವಹಣೆ ವಿಚಾರದಲ್ಲಿ ಅತ್ಯಂತ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ ಯಾವುದೇ ಪ್ರಯೋಗ ಯಶಸ್ವಿಯಾದರೆ ಉಳಿದೆಲ್ಲ ಕಡೆ ಅದನ್ನು ವಿಸ್ತರಿಸುವುದಾಗಿ ಕೇಂದ್ರ ಸರ್ಕಾರದ ಅಧಿಕಾರಿಗಳು ನಮಗೆ ಹೇಳುತ್ತಿದ್ದರು.

ಎಕಾನಮಿ ಅಂದ್ರೆ ಹಣವಲ್ಲ, ಜನರ ಬದುಕಿನ ದುಡಿಮೆಯೇ ಎಕಾನಮಿ ನಿರ್ಧಾರ ಮಾಡುತ್ತದೆ; ಜಿಎಸ್‌ಟಿ ದಿನಾಚರಣೆ ವೇಳೆ ಸಿಎಂ ಬೊಮ್ಮಾಯಿ ಅರ್ಥವತ್ತಾದ ಮಾತು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: ಆಯೇಷಾ ಬಾನು|

Updated on: Jul 01, 2022 | 6:50 PM

Share

ಬೆಂಗಳೂರು: ಜಿಎಸ್‌ಟಿ(GST) ಮಂಡಳಿ ದಿನಾಚರಣೆ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಚಾಲನೆ ನೀಡಿದ್ದಾರೆ. ಹಾಗೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಉತ್ತಮ ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಇನ್ನು GST ಮಂಡಳಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಜಿಎಸ್ಟಿ ಪ್ರಾರಂಭವಾಗಿ ಐದು ವರ್ಷ ಆಗಿದೆ. 10 ವರ್ಷ ಇದರ ಬಗ್ಗೆ ಚರ್ಚೆ ಆಗಿದೆ. ಹಲವು ಬಾರಿ ಜಿಎಸ್ಟಿ ಬಿಲ್ ಮಂಡನೆ ಮಾಡಿ ವಾಪಸ್ ತೆಗೆದುಕೊಂಡಿದ್ದು ಆಗಿದೆ. ಅರುಣ್ ಜೇಟ್ಲಿ ಇದ್ದಾಗ ಎಲ್ಲ ರಾಜ್ಯಗಳ ಜೊತೆಗೆ ಚರ್ಚೆ ಮಾಡಿ ಜಾರಿಗೆ ತಂದರು. ಜಿಎಸ್ಟಿ ಯಾರಿಗೂ ಹೊರೆಯಾಗದೆ ಬೇರೆ ಬೇರೆ ಹಂತದಲ್ಲಿ ತೆರಿಗೆ ಹಾಕಬೇಕು ಎಂಬ ಕಾರಣಕ್ಕೆ ಚರ್ಚೆಯಾಗಿದೆ. ಯಾರಿಗೂ ತೆರಿಗೆ ಹೊರೆ ಆಗಬಾರದು ಎಂಬ ಉದ್ದೇಶವಿದೆ. ಕರ್ನಾಟಕ ಜಿಎಸ್ಟಿ ನಿರ್ವಹಣೆ ವಿಚಾರದಲ್ಲಿ ಅತ್ಯಂತ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ ಯಾವುದೇ ಪ್ರಯೋಗ ಯಶಸ್ವಿಯಾದರೆ ಉಳಿದೆಲ್ಲ ಕಡೆ ಅದನ್ನು ವಿಸ್ತರಿಸುವುದಾಗಿ ಕೇಂದ್ರ ಸರ್ಕಾರದ ಅಧಿಕಾರಿಗಳು ನಮಗೆ ಹೇಳುತ್ತಿದ್ದರು ಎಂದರು. ಇದನ್ನೂ ಓದಿ: Viral Video: ಕೊಳದಲ್ಲಿ ಸರಳ ರೇಖೆ ಎಳೆದ ಬಾತುಕೋಳಿ, ನೆಟ್ಟಿಗರ ಮನಸ್ಸನ್ನು ಪ್ರಶಾಂತಗೊಳಿಸುವಂತಿದೆ ಈ ವಿಡಿಯೋ

ಕೋವಿಡ್ ಆಗ ತಾನೇ ಮುಗಿದ ಸಂದರ್ಭದಲ್ಲಿ ನನಗೆ ಚಾಲೆಂಜಿಂಗ್ ಆಗಿತ್ತು. ಆದರೆ ಟಾರ್ಗೆಟ್ ಮೀರಿ 15 ಸಾವಿರ ಕೋಟಿ ನಾವು ಜಿಎಸ್ಟಿ ಸಂಗ್ರಹ ಮಾಡಿದ್ದೇವೆ. ರಾಜ್ಯದ ಬೆಳವಣಿಗೆಗೆ ಬಹಳ ದೊಡ್ಡ ಕೊಡುಗೆ ವಾಣಿಜ್ಯ ತೆರಿಗೆ ಇಲಾಖೆ ಮಾಡುತ್ತಿದೆ. ಎಕಾನಮಿ ಅಂದ್ರೆ ಹಣವಲ್ಲ, ಜನರ ಬದುಕಿನ ದುಡಿಮೆಯೇ ಎಕಾನಮಿ ನಿರ್ಧಾರ ಮಾಡುತ್ತದೆ ಎಂದು ಬೊಮ್ಮಾಯಿ ಹೇಳಿದ್ರು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ