AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನ ಕಾರ್ಮಿಕರನ್ನು ಸತ್ಯಹರಿಶ್ಚಂದ್ರ ಬಳಗವೆಂದು ಹೊಸ ಹೆಸರು ನಾಮಕರಣ ಮಾಡಿದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಮಶಾನ ಕಾರ್ಮಿಕರ ಜೊತೆ ಇಂದು (ಜ.11) ಉಪಹಾರ ಸೇವಿಸಿದರು. ಈ ವೇಳೆ ಸ್ಮಶಾನ ಕಾರ್ಮಿಕರಿಗೆ ಸತ್ಯಹರಿಶ್ಚಂದ್ರ ಬಳಗವೆಂದು ಹೊಸ ಹೆಸರು ನಾಮಕರಣ ಮಾಡಿದರು.

ಸ್ಮಶಾನ ಕಾರ್ಮಿಕರನ್ನು ಸತ್ಯಹರಿಶ್ಚಂದ್ರ ಬಳಗವೆಂದು ಹೊಸ ಹೆಸರು ನಾಮಕರಣ ಮಾಡಿದ ಸಿಎಂ ಬೊಮ್ಮಾಯಿ
ಸ್ಮಶಾನ ಕಾರ್ಮಿಕರ ಜತೆ ಸಿಎಂ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 11, 2023 | 4:25 PM

ಬೆಂಗಳೂರು: ಸ್ಮಶಾನ ಕಾರ್ಮಿಕರಿಗೆ ( graveyard workers) ಸತ್ಯಹರಿಶ್ಚಂದ್ರ ಬಳಗದವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೊಸ ಹೆಸರು ನಾಮಕರಣ ಮಾಡಿದ್ದಾರೆ. ಇಂದು(ಜನವರಿ 11) ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ನಲ್ಲಿ ಸ್ಮಶಾನ ಕಾರ್ಮಿಕರ ಜತೆಗೆ ಬಸವರಾಜ ಬೊಮ್ಮಾಯಿ ಉಪಾಹಾರ ಸೇವಿಸಿದರು. ಈ ವೇಳೆ ಸ್ಮಶಾನ ಕಾರ್ಮಿಕರಿಗೆ ಸತ್ಯಹರಿಶ್ಚಂದ್ರ ಬಳಗದವರು ಎಂದು ನಾಮಕರಣ ಮಾಡಿದರು.

ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ನಲ್ಲಿ ಸ್ಮಶಾನ ಕಾರ್ಮಿಕರ ಜತೆಗೆ ಉಪಾಹಾರ ಸೇವಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಸತ್ತ ನಂತರ ಮುಕ್ತಿ ಕೊಡಿಸುವಂತಹ ಮಹತ್ತರ ಕಾರ್ಯವನ್ನು ಈ ಕೆಲಸಗಾರರು ನಿಭಾಯಿಸುತ್ತಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗಳು ಹೌದು. ಇನ್ಮುಂದೆ ಸ್ಮಶಾನ ಕಾರ್ಮಿಕರನ್ನು “ಸತ್ಯಹರಿಶ್ಚಂದ್ರ ಬಳಗದವರು” ಎಂದು ಸಂಬೋಧಿಸಬೇಕೆಂದು ಆದೇಶ ಹೊರಡಿಸಲು ಸೂಚನೆ ನೀಡುತ್ತೇನೆ ಎಂದು ಹೇಳಿದರು.

ಘನತೆ-ಗೌರವದ ಬದುಕು ಕಟ್ಟಿಕೊಡಲೆಂದು ಅವರ ಸೇವೆ ಕಾಯಂಗೊಳಿಸಲು ತೀರ್ಮಾನಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 117 ಸ್ಮಶಾನ ಕಾರ್ಮಿಕರ ಸೇವೆ ಕಾಯಂ ಮಾಡಲಾಗಿದ್ದು, ಉಳಿದ 30 ಸಿಬ್ಬಂದಿ ಕುಟುಂಬಕ್ಕೆ ಅನುಕಂಪದ ಉದ್ಯೋಗ ನೀಡಲಾಗುವುದು. ರಾಜ್ಯದ ಉಳಿದೆಡೆ 300 ಸ್ಮಶಾನ ಕಾರ್ಮಿಕರಿದ್ದು, ಅವರನ್ನು ಹಂತ ಹಂತವಾಗಿ ಕಾಯಂ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದ 11,113 ಪೌರ ಕಾರ್ಮಿಕರನ್ನು ನೌಕರರು ಎಂದು ಪರಿಗಣಿಸಿದ್ದು, ಉಳಿದ 40 ಸಾವಿರ ಪೌರ ಕಾರ್ಮಿಕರನ್ನು ಎರಡು ಹಂತಗಳಲ್ಲಿ ಕಾಯಂ ಮಾಡಲಾಗುವುದು ಎಂಬ ಭರವಸೆ ನೀಡಿದರು.

ಇನ್ನು ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು, ಇನ್ಮುಂದೆ ಸ್ಮಶಾನ ಕಾರ್ಮಿಕರನ್ನು “ಸತ್ಯಹರಿಶ್ಚಂದ್ರ ಬಳಗದವರು” ಎಂದು ಸಂಬೋಧಿಸಬೇಕೆಂದು ಆದೇಶ ಹೊರಡಿಸಲು ಸೂಚನೆ ನೀಡುತ್ತೇನೆ ಎಂದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ