AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನ ಕಾರ್ಮಿಕರನ್ನು ಸತ್ಯಹರಿಶ್ಚಂದ್ರ ಬಳಗವೆಂದು ಹೊಸ ಹೆಸರು ನಾಮಕರಣ ಮಾಡಿದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಮಶಾನ ಕಾರ್ಮಿಕರ ಜೊತೆ ಇಂದು (ಜ.11) ಉಪಹಾರ ಸೇವಿಸಿದರು. ಈ ವೇಳೆ ಸ್ಮಶಾನ ಕಾರ್ಮಿಕರಿಗೆ ಸತ್ಯಹರಿಶ್ಚಂದ್ರ ಬಳಗವೆಂದು ಹೊಸ ಹೆಸರು ನಾಮಕರಣ ಮಾಡಿದರು.

ಸ್ಮಶಾನ ಕಾರ್ಮಿಕರನ್ನು ಸತ್ಯಹರಿಶ್ಚಂದ್ರ ಬಳಗವೆಂದು ಹೊಸ ಹೆಸರು ನಾಮಕರಣ ಮಾಡಿದ ಸಿಎಂ ಬೊಮ್ಮಾಯಿ
ಸ್ಮಶಾನ ಕಾರ್ಮಿಕರ ಜತೆ ಸಿಎಂ
TV9 Web
| Edited By: |

Updated on: Jan 11, 2023 | 4:25 PM

Share

ಬೆಂಗಳೂರು: ಸ್ಮಶಾನ ಕಾರ್ಮಿಕರಿಗೆ ( graveyard workers) ಸತ್ಯಹರಿಶ್ಚಂದ್ರ ಬಳಗದವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೊಸ ಹೆಸರು ನಾಮಕರಣ ಮಾಡಿದ್ದಾರೆ. ಇಂದು(ಜನವರಿ 11) ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ನಲ್ಲಿ ಸ್ಮಶಾನ ಕಾರ್ಮಿಕರ ಜತೆಗೆ ಬಸವರಾಜ ಬೊಮ್ಮಾಯಿ ಉಪಾಹಾರ ಸೇವಿಸಿದರು. ಈ ವೇಳೆ ಸ್ಮಶಾನ ಕಾರ್ಮಿಕರಿಗೆ ಸತ್ಯಹರಿಶ್ಚಂದ್ರ ಬಳಗದವರು ಎಂದು ನಾಮಕರಣ ಮಾಡಿದರು.

ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ನಲ್ಲಿ ಸ್ಮಶಾನ ಕಾರ್ಮಿಕರ ಜತೆಗೆ ಉಪಾಹಾರ ಸೇವಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಸತ್ತ ನಂತರ ಮುಕ್ತಿ ಕೊಡಿಸುವಂತಹ ಮಹತ್ತರ ಕಾರ್ಯವನ್ನು ಈ ಕೆಲಸಗಾರರು ನಿಭಾಯಿಸುತ್ತಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗಳು ಹೌದು. ಇನ್ಮುಂದೆ ಸ್ಮಶಾನ ಕಾರ್ಮಿಕರನ್ನು “ಸತ್ಯಹರಿಶ್ಚಂದ್ರ ಬಳಗದವರು” ಎಂದು ಸಂಬೋಧಿಸಬೇಕೆಂದು ಆದೇಶ ಹೊರಡಿಸಲು ಸೂಚನೆ ನೀಡುತ್ತೇನೆ ಎಂದು ಹೇಳಿದರು.

ಘನತೆ-ಗೌರವದ ಬದುಕು ಕಟ್ಟಿಕೊಡಲೆಂದು ಅವರ ಸೇವೆ ಕಾಯಂಗೊಳಿಸಲು ತೀರ್ಮಾನಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 117 ಸ್ಮಶಾನ ಕಾರ್ಮಿಕರ ಸೇವೆ ಕಾಯಂ ಮಾಡಲಾಗಿದ್ದು, ಉಳಿದ 30 ಸಿಬ್ಬಂದಿ ಕುಟುಂಬಕ್ಕೆ ಅನುಕಂಪದ ಉದ್ಯೋಗ ನೀಡಲಾಗುವುದು. ರಾಜ್ಯದ ಉಳಿದೆಡೆ 300 ಸ್ಮಶಾನ ಕಾರ್ಮಿಕರಿದ್ದು, ಅವರನ್ನು ಹಂತ ಹಂತವಾಗಿ ಕಾಯಂ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದ 11,113 ಪೌರ ಕಾರ್ಮಿಕರನ್ನು ನೌಕರರು ಎಂದು ಪರಿಗಣಿಸಿದ್ದು, ಉಳಿದ 40 ಸಾವಿರ ಪೌರ ಕಾರ್ಮಿಕರನ್ನು ಎರಡು ಹಂತಗಳಲ್ಲಿ ಕಾಯಂ ಮಾಡಲಾಗುವುದು ಎಂಬ ಭರವಸೆ ನೀಡಿದರು.

ಇನ್ನು ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು, ಇನ್ಮುಂದೆ ಸ್ಮಶಾನ ಕಾರ್ಮಿಕರನ್ನು “ಸತ್ಯಹರಿಶ್ಚಂದ್ರ ಬಳಗದವರು” ಎಂದು ಸಂಬೋಧಿಸಬೇಕೆಂದು ಆದೇಶ ಹೊರಡಿಸಲು ಸೂಚನೆ ನೀಡುತ್ತೇನೆ ಎಂದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ