AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನ ಕಾರ್ಮಿಕರನ್ನು ಸತ್ಯಹರಿಶ್ಚಂದ್ರ ಬಳಗವೆಂದು ಹೊಸ ಹೆಸರು ನಾಮಕರಣ ಮಾಡಿದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಮಶಾನ ಕಾರ್ಮಿಕರ ಜೊತೆ ಇಂದು (ಜ.11) ಉಪಹಾರ ಸೇವಿಸಿದರು. ಈ ವೇಳೆ ಸ್ಮಶಾನ ಕಾರ್ಮಿಕರಿಗೆ ಸತ್ಯಹರಿಶ್ಚಂದ್ರ ಬಳಗವೆಂದು ಹೊಸ ಹೆಸರು ನಾಮಕರಣ ಮಾಡಿದರು.

ಸ್ಮಶಾನ ಕಾರ್ಮಿಕರನ್ನು ಸತ್ಯಹರಿಶ್ಚಂದ್ರ ಬಳಗವೆಂದು ಹೊಸ ಹೆಸರು ನಾಮಕರಣ ಮಾಡಿದ ಸಿಎಂ ಬೊಮ್ಮಾಯಿ
ಸ್ಮಶಾನ ಕಾರ್ಮಿಕರ ಜತೆ ಸಿಎಂ
TV9 Web
| Edited By: |

Updated on: Jan 11, 2023 | 4:25 PM

Share

ಬೆಂಗಳೂರು: ಸ್ಮಶಾನ ಕಾರ್ಮಿಕರಿಗೆ ( graveyard workers) ಸತ್ಯಹರಿಶ್ಚಂದ್ರ ಬಳಗದವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೊಸ ಹೆಸರು ನಾಮಕರಣ ಮಾಡಿದ್ದಾರೆ. ಇಂದು(ಜನವರಿ 11) ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ನಲ್ಲಿ ಸ್ಮಶಾನ ಕಾರ್ಮಿಕರ ಜತೆಗೆ ಬಸವರಾಜ ಬೊಮ್ಮಾಯಿ ಉಪಾಹಾರ ಸೇವಿಸಿದರು. ಈ ವೇಳೆ ಸ್ಮಶಾನ ಕಾರ್ಮಿಕರಿಗೆ ಸತ್ಯಹರಿಶ್ಚಂದ್ರ ಬಳಗದವರು ಎಂದು ನಾಮಕರಣ ಮಾಡಿದರು.

ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ನಲ್ಲಿ ಸ್ಮಶಾನ ಕಾರ್ಮಿಕರ ಜತೆಗೆ ಉಪಾಹಾರ ಸೇವಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಸತ್ತ ನಂತರ ಮುಕ್ತಿ ಕೊಡಿಸುವಂತಹ ಮಹತ್ತರ ಕಾರ್ಯವನ್ನು ಈ ಕೆಲಸಗಾರರು ನಿಭಾಯಿಸುತ್ತಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗಳು ಹೌದು. ಇನ್ಮುಂದೆ ಸ್ಮಶಾನ ಕಾರ್ಮಿಕರನ್ನು “ಸತ್ಯಹರಿಶ್ಚಂದ್ರ ಬಳಗದವರು” ಎಂದು ಸಂಬೋಧಿಸಬೇಕೆಂದು ಆದೇಶ ಹೊರಡಿಸಲು ಸೂಚನೆ ನೀಡುತ್ತೇನೆ ಎಂದು ಹೇಳಿದರು.

ಘನತೆ-ಗೌರವದ ಬದುಕು ಕಟ್ಟಿಕೊಡಲೆಂದು ಅವರ ಸೇವೆ ಕಾಯಂಗೊಳಿಸಲು ತೀರ್ಮಾನಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 117 ಸ್ಮಶಾನ ಕಾರ್ಮಿಕರ ಸೇವೆ ಕಾಯಂ ಮಾಡಲಾಗಿದ್ದು, ಉಳಿದ 30 ಸಿಬ್ಬಂದಿ ಕುಟುಂಬಕ್ಕೆ ಅನುಕಂಪದ ಉದ್ಯೋಗ ನೀಡಲಾಗುವುದು. ರಾಜ್ಯದ ಉಳಿದೆಡೆ 300 ಸ್ಮಶಾನ ಕಾರ್ಮಿಕರಿದ್ದು, ಅವರನ್ನು ಹಂತ ಹಂತವಾಗಿ ಕಾಯಂ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದ 11,113 ಪೌರ ಕಾರ್ಮಿಕರನ್ನು ನೌಕರರು ಎಂದು ಪರಿಗಣಿಸಿದ್ದು, ಉಳಿದ 40 ಸಾವಿರ ಪೌರ ಕಾರ್ಮಿಕರನ್ನು ಎರಡು ಹಂತಗಳಲ್ಲಿ ಕಾಯಂ ಮಾಡಲಾಗುವುದು ಎಂಬ ಭರವಸೆ ನೀಡಿದರು.

ಇನ್ನು ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು, ಇನ್ಮುಂದೆ ಸ್ಮಶಾನ ಕಾರ್ಮಿಕರನ್ನು “ಸತ್ಯಹರಿಶ್ಚಂದ್ರ ಬಳಗದವರು” ಎಂದು ಸಂಬೋಧಿಸಬೇಕೆಂದು ಆದೇಶ ಹೊರಡಿಸಲು ಸೂಚನೆ ನೀಡುತ್ತೇನೆ ಎಂದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?