AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನ ಕಾರ್ಮಿಕರನ್ನು ಸತ್ಯಹರಿಶ್ಚಂದ್ರ ಬಳಗವೆಂದು ಹೊಸ ಹೆಸರು ನಾಮಕರಣ ಮಾಡಿದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಮಶಾನ ಕಾರ್ಮಿಕರ ಜೊತೆ ಇಂದು (ಜ.11) ಉಪಹಾರ ಸೇವಿಸಿದರು. ಈ ವೇಳೆ ಸ್ಮಶಾನ ಕಾರ್ಮಿಕರಿಗೆ ಸತ್ಯಹರಿಶ್ಚಂದ್ರ ಬಳಗವೆಂದು ಹೊಸ ಹೆಸರು ನಾಮಕರಣ ಮಾಡಿದರು.

ಸ್ಮಶಾನ ಕಾರ್ಮಿಕರನ್ನು ಸತ್ಯಹರಿಶ್ಚಂದ್ರ ಬಳಗವೆಂದು ಹೊಸ ಹೆಸರು ನಾಮಕರಣ ಮಾಡಿದ ಸಿಎಂ ಬೊಮ್ಮಾಯಿ
ಸ್ಮಶಾನ ಕಾರ್ಮಿಕರ ಜತೆ ಸಿಎಂ
TV9 Web
| Edited By: |

Updated on: Jan 11, 2023 | 4:25 PM

Share

ಬೆಂಗಳೂರು: ಸ್ಮಶಾನ ಕಾರ್ಮಿಕರಿಗೆ ( graveyard workers) ಸತ್ಯಹರಿಶ್ಚಂದ್ರ ಬಳಗದವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೊಸ ಹೆಸರು ನಾಮಕರಣ ಮಾಡಿದ್ದಾರೆ. ಇಂದು(ಜನವರಿ 11) ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ನಲ್ಲಿ ಸ್ಮಶಾನ ಕಾರ್ಮಿಕರ ಜತೆಗೆ ಬಸವರಾಜ ಬೊಮ್ಮಾಯಿ ಉಪಾಹಾರ ಸೇವಿಸಿದರು. ಈ ವೇಳೆ ಸ್ಮಶಾನ ಕಾರ್ಮಿಕರಿಗೆ ಸತ್ಯಹರಿಶ್ಚಂದ್ರ ಬಳಗದವರು ಎಂದು ನಾಮಕರಣ ಮಾಡಿದರು.

ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ನಲ್ಲಿ ಸ್ಮಶಾನ ಕಾರ್ಮಿಕರ ಜತೆಗೆ ಉಪಾಹಾರ ಸೇವಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಸತ್ತ ನಂತರ ಮುಕ್ತಿ ಕೊಡಿಸುವಂತಹ ಮಹತ್ತರ ಕಾರ್ಯವನ್ನು ಈ ಕೆಲಸಗಾರರು ನಿಭಾಯಿಸುತ್ತಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗಳು ಹೌದು. ಇನ್ಮುಂದೆ ಸ್ಮಶಾನ ಕಾರ್ಮಿಕರನ್ನು “ಸತ್ಯಹರಿಶ್ಚಂದ್ರ ಬಳಗದವರು” ಎಂದು ಸಂಬೋಧಿಸಬೇಕೆಂದು ಆದೇಶ ಹೊರಡಿಸಲು ಸೂಚನೆ ನೀಡುತ್ತೇನೆ ಎಂದು ಹೇಳಿದರು.

ಘನತೆ-ಗೌರವದ ಬದುಕು ಕಟ್ಟಿಕೊಡಲೆಂದು ಅವರ ಸೇವೆ ಕಾಯಂಗೊಳಿಸಲು ತೀರ್ಮಾನಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 117 ಸ್ಮಶಾನ ಕಾರ್ಮಿಕರ ಸೇವೆ ಕಾಯಂ ಮಾಡಲಾಗಿದ್ದು, ಉಳಿದ 30 ಸಿಬ್ಬಂದಿ ಕುಟುಂಬಕ್ಕೆ ಅನುಕಂಪದ ಉದ್ಯೋಗ ನೀಡಲಾಗುವುದು. ರಾಜ್ಯದ ಉಳಿದೆಡೆ 300 ಸ್ಮಶಾನ ಕಾರ್ಮಿಕರಿದ್ದು, ಅವರನ್ನು ಹಂತ ಹಂತವಾಗಿ ಕಾಯಂ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದ 11,113 ಪೌರ ಕಾರ್ಮಿಕರನ್ನು ನೌಕರರು ಎಂದು ಪರಿಗಣಿಸಿದ್ದು, ಉಳಿದ 40 ಸಾವಿರ ಪೌರ ಕಾರ್ಮಿಕರನ್ನು ಎರಡು ಹಂತಗಳಲ್ಲಿ ಕಾಯಂ ಮಾಡಲಾಗುವುದು ಎಂಬ ಭರವಸೆ ನೀಡಿದರು.

ಇನ್ನು ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು, ಇನ್ಮುಂದೆ ಸ್ಮಶಾನ ಕಾರ್ಮಿಕರನ್ನು “ಸತ್ಯಹರಿಶ್ಚಂದ್ರ ಬಳಗದವರು” ಎಂದು ಸಂಬೋಧಿಸಬೇಕೆಂದು ಆದೇಶ ಹೊರಡಿಸಲು ಸೂಚನೆ ನೀಡುತ್ತೇನೆ ಎಂದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ