AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Traffic Jam: ಗುಂಡಿ ಮುಚ್ಚಿ, ಸಿಗ್ನಲ್ ಸರಿಪಡಿಸಿ; ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಪರಿಹಾರಕ್ಕೆ ಸಿಎಂ ತಾಕೀತು

ಹೆಬ್ಬಾಳ ಫ್ಲೈಓವರ್ ಮತ್ತು ಸಿಲ್ಕ್​ ರೋಡ್ ಜಂಕ್ಷನ್ ಸೇರಿ 10 ಸ್ಥಳಗಳಲ್ಲಿ ವಾಹನಸಂದಣಿ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ

Traffic Jam: ಗುಂಡಿ ಮುಚ್ಚಿ, ಸಿಗ್ನಲ್ ಸರಿಪಡಿಸಿ; ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಪರಿಹಾರಕ್ಕೆ ಸಿಎಂ ತಾಕೀತು
ಬೆಂಗಳೂರು ಟ್ರಾಫಿಕ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 26, 2022 | 8:30 AM

Share

ಬೆಂಗಳೂರು: ನಗರದ ವಿವಿಧೆಡೆ ಟ್ರಾಫಿಕ್ ಜಾಮ್​ನಿಂದ (Traffic Jam) ವಾಹನ ಸವಾರರು ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಪ್ರತಿಕ್ರಿಯಿಸಿದ್ದಾರೆ. ನಗರದ ಕುಖ್ಯಾತ ಟ್ರಾಫಿಕ್ ಜಾಮ್​ ಸ್ಥಳಗಳೆನಿಸಿದ ಹೆಬ್ಬಾಳ ಫ್ಲೈಓವರ್ ಮತ್ತು ಸಿಲ್ಕ್​ ರೋಡ್ ಜಂಕ್ಷನ್ ಸೇರಿ 10 ಸ್ಥಳಗಳಲ್ಲಿ ವಾಹನಸಂದಣಿ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ನಿರ್ವಹಣೆ ಕುರಿತ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು ಜನರ ಸಂಕಷ್ಟಗಳ ಬಗ್ಗೆ ತಮಗಿರುವ ಮಾಹಿತಿ ಹಂಚಿಕೊಂಡರು. ಸಭೆಯಲ್ಲಿ ಬಿಬಿಎಂಪಿ, ಬಿಡಬ್ಲ್ಯುಎಸ್​ಎಸ್​ಬಿ, ನಗರಾಭಿವೃದ್ಧಿ ಇಲಲಾಖೆ, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕರ್ನಾಟಕ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಚ್​.ಎಸ್.ಪ್ರತಾಪ್ ರೆಡ್ಡಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮಹದೇವಪುರ ಔಟರ್ ರಿಂಗ್ ರೋಡ್, ವೈಟ್​ಫೀಲ್ಡ್ ರೋಡ್, ಸೇಂಟ್ ಜಾನ್ಸ್ ಆಸ್ಪತ್ರೆ ವೃತ್ತ ಮತ್ತು ಭಟ್ಟರಹಳ್ಳಿಗಳಲ್ಲಿ ಪದೇಪದೇ ಟ್ರಾಫಿಕ್ ಜಾಮ್ ಆಗುತ್ತಿರುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು. ಟ್ರಾಫಿಕ್ ಸಮಸ್ಯೆ ಪರಿಹರಿಸುವ ಕ್ರಮಗಳ ಬಗ್ಗೆ ಆಯಾ ವ್ಯಾಪ್ತಿಯ ಡಿಸಿಪಿಗಳು ಉಸ್ತುವಾರಿ ನೋಡಿಕೊಳ್ಳಬೇಕು. ಬಿಬಿಎಂಪಿ, ಬಿಡ್ಲ್ಯುಎಸ್​ಎಸ್​ಬಿ, ಬಿಎಂಆರ್​ಸಿಎಲ್ ಮತ್ತು ಬೆಸ್ಕಾಂ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ನಗರಾಭಿವೃದ್ಧಿ ಇಲಾಖೆ ಮತ್ತು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು ನಗರದ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ರೂಪಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ನಗರ ವ್ಯಾಪ್ತಿಯ ರಸ್ತೆಗಳಲ್ಲಿರುವ ಗುಂಡಿಗಳನ್ನು ಶೀಘ್ರ ಮುಚ್ಚಬೇಕು. ಗುಂಡಿ ಮುಚ್ಚುವ ಕಾಮಗಾರಿಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸುವ ರಸ್ತೆಗಳಿಗೆ ಆದ್ಯತೆ ಸಿಗಬೇಕು. ಕಳೆದ ಬಾರಿ ಭಾರೀ ಮಳೆಯಾದಾಗ ಹಾಳಾಗಿದ್ದ 50 ಸ್ಥಳಗಳ ರಿಪೇರಿ ಕಾಮಗಾರಿಗಳನ್ನು ಶೀಘ್ರ ನಿರ್ವಹಿಸಬೇಕು ಎಂದು ಹೇಳಿದರು. ಹೆಚ್ಚು ಟ್ರಾಫಿಕ್ ಇರುವ ರಸ್ತೆಗಳಲ್ಲಿ ಸಿಗ್ನಲ್ ವ್ಯವಸ್ಥೆ ಸುಧಾರಣೆಗೆ ಜಾರಿಗೊಳಿಸಲು ಉದ್ದೇಶಿಸಿರುವ ₹ 48 ಕೋಟಿ ಮೊತ್ತದ ಕಾಮಗಾರಿಯನ್ನು ಆರಂಭಿಸುವಂತೆ ಮತ್ತು ಟ್ರಾಫಿಕ್ ಸಾಂದ್ರತೆ ಹೆಚ್ಚಾಗಿರುವ ಸ್ಥಳಗಳನ್ನು ಗುರುತಿಸಿ, ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್ ರೂಪಿಸಬೇಕು ಎಂದು ಸೂಚಿಸಿದರು.

ಮುಂದಿನ ದಿನಗಳಲ್ಲಿ ವಲಯವಾರು ಟ್ರಾಫಿಕ್ ನಿರ್ವಹಣೆ ಸಭೆಗಳನ್ನು ನಡೆಸಲಾಗುವುದು. ರಸ್ತೆಗಳ ಅತಿಕ್ರಮಣ ತೆರವುಗೊಳಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಟ್ರಾಫಿಕ್ ಜಂಕ್ಷನ್​ಗಳಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸುವಂತೆ ಮತ್ತು ನಿರ್ಭಯಾ ಯೋಜನೆಯಲ್ಲಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸಿಎಂ ಸೂಚಿಸಿದರು.

ಸಭೆಯ ಕುರಿತು ವರದಿಗಾರರಿಗೆ ಮಾಹಿತಿ ನೀಡಿದ ಬೊಮ್ಮಾಯಿ, ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಇರುವ ಎಲ್ಲ ಅಡೆತಡೆಗಳನ್ನು ನಿವಾರಿಸಬೇಕೆಂದು ಸಲಹೆ ಮಾಡಿದರು. ಬಿಎಂಆರ್​ಸಿಎಲ್ ಸುರಿದಿರುವ ನಿರ್ಮಾಣ ತ್ಯಾಜ್ಯಗಳನ್ನು ತೆರವುಗೊಳಿಸಬೇಕು. ಪೈಪ್​ಲೈನ್ ಅಳವಡಿಕೆಗೆಂದು ಬಿಡ್ಲ್ಯುಎಸ್​ಎಸ್​ಬಿ ರಸ್ತೆ ಅಗೆದಿರುವ ಸ್ಥಳಗಳನ್ನು ಸರಿಪಡಿಸಲು ಸೂಚಿಸಲಾಗಿದೆ ಎಂದರು.

Published On - 8:28 am, Sun, 26 June 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ