AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲಿದ್ದಲು, ಕೊರೊನಾ ಲಸಿಕೆ ಪೂರೈಸಲು ಮನವಿ; ದೆಹಲಿ ಪ್ರವಾಸ ಯಶಸ್ವಿಯಾಗಿದೆ ಎಂದ ಬಸವರಾಜ ಬೊಮ್ಮಾಯಿ

CM Basavaraj Bommai Press Meet: ಕರ್ನಾಟಕ ರಾಜ್ಯಕ್ಕೆ ಕಲ್ಲಿದ್ದಲು ಪೂರೈಸುವಂತೆ ಹಾಗೂ ಕೊವಿಡ್-19 ವಿರುದ್ಧದ ಲಸಿಕೆಯನ್ನು ಹೆಚ್ಚು ಪೂರೈಕೆ ಮಾಡಲು ಮನವಿ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಲ್ಲಿದ್ದಲು, ಕೊರೊನಾ ಲಸಿಕೆ ಪೂರೈಸಲು ಮನವಿ; ದೆಹಲಿ ಪ್ರವಾಸ ಯಶಸ್ವಿಯಾಗಿದೆ ಎಂದ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on:Oct 09, 2021 | 6:26 PM

Share

ಬೆಂಗಳೂರು: ನನ್ನ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ದೆಹಲಿಯಲ್ಲಿ ಹಲವು ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿದೆ. ಕರ್ನಾಟಕ ರಾಜ್ಯಕ್ಕೆ ಕಲ್ಲಿದ್ದಲು ಪೂರೈಸುವಂತೆ ಮನವಿ ಮಾಡಲಾಗಿದೆ. ರಾಜ್ಯಕ್ಕೆ ಕೊವಿಡ್-19 ವಿರುದ್ಧದ ಲಸಿಕೆಯನ್ನು ಕೂಡ ಹೆಚ್ಚು ಪೂರೈಕೆ ಮಾಡಲು ಮನವಿ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ದೆಹಲಿ ಪ್ರವಾಸ ಮುಗಿಸಿ ಸಿಎಂ ಬೊಮ್ಮಾಯಿ ವಾಪಸ್ ಆಗಿದ್ದಾರೆ. ಸಿಎಂ ಬೊಮ್ಮಾಯಿ ಜತೆ ಸಚಿವ ಡಾ.ಸುಧಾಕರ್ ಆಗಮಿಸಿದ್ದಾರೆ.

ಕಲ್ಲಿದ್ದಲು ಕಡಿಮೆಯಾಗಬಾರದು ಎಂಬ ದೃಷ್ಟಿಯಿಂದ ಕೇಂದ್ರ ಗಣಿ ಸಚಿವರನ್ನು ಭೇಟಿ ಮಾಡಿದ್ದೇನೆ. ನಮ್ಮ ಬೇಡಿಕೆ ಏನಿದೆ ಎಂದು ಅವರ ಬಳಿ ಹೇಳಿದ್ದೇವೆ. ಒಟ್ಟು ನಮಗೆ 10 ರೇಕ್ ಕಲ್ಲಿದ್ದಲು ಬರುತ್ತಿದೆ. ಅದನ್ನು 14 ರೇಕ್​ಗೆ ಏರಿಕೆ ಮಾಡಿದರೆ ನಮಗೆ ಸರಿ ಹೋಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಎರಡು ಮೂರು ಗಣಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಕಲ್ಲಿದ್ದಲು ಕೊರತೆಯಾಗದಂತೆ ನೋಡಿಕೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಕೊರೊನಾ ಲಸಿಕೆ ಮೊದಲನೇ ಡೋಸ್ ಈಗಾಗಲೇ 81 ಶೇಕಡಾವರೆಗೆ ನೀಡಲಾಗಿದೆ. ಡಿಸೆಂಬರ್ ಒಳಗೆ 90 ಶೇಕಡಾದಷ್ಟು ಲಸಿಕೆ ನೀಡಿಕೆ ಪೂರ್ಣ ಮಾಡಬೇಕು ಎಂಬುದು ಗುರಿ. ಅದಕ್ಕೆ ಕೇಂದ್ರ ಆರೋಗ್ಯ ಸಚಿವರು ಸಹಕಾರ ಕೊಡುತ್ತೇವೆ ಎಂದು ಹೇಳಿದ್ದಾರೆ. ಇದೇ ರೀತಿ ಎರಡನೇ ಡೋಸ್ ಲಸಿಕೆ ಕೂಡ ಶೇಕಡಾ 38 ರಷ್ಟು ನೀಡಲಾಗಿದೆ. ಅದನ್ನು ಶೇಕಡಾ 70ಕ್ಕೆ ಹೆಚ್ಚು ಮಾಡಬೇಕು ಎಂದು ಇದ್ದೇವೆ. ಒಟ್ಟಾರೆಯಾಗಿ ಇಡೀ ಕರ್ನಾಟಕದ ಜನಸಂಖ್ಯೆಯನ್ನು ವ್ಯಾಕ್ಸಿನೇಷನ್ ಅಡಿಯಲ್ಲಿ ತರಬೇಕು. ಅದು ಕೂಡ ಈ ವರ್ಷದ ಅಂತ್ಯದ ಒಳಗಾಗಿ ಆಗಬೇಕೆಂಬ ಯೋಜನೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಗೊಬ್ಬರ ಕೊರತೆ ವಿಚಾರವಾಗಿ ಕೇಂದ್ರ ರಸಗೊಬ್ಬರ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. 32 ಸಾವಿರ ಮೆಟ್ರಿಕ್ ಟನ್ ಡಿಎಪಿ, 10 ಸಾವಿರ ಮೆಟ್ರಿಕ್ ಟನ್ ಎಂಒಪಿ ಪೂರೈಕೆಗೆ ಮನವಿ ಮಾಡಿದ್ದೇವೆ. ಇದಕ್ಕೆ ಕೇಂದ್ರ ಸಚಿವರು ಒಪ್ಪಿಗೆ ನೀಡಿದ್ದಾರೆ. ಒಂದು ವಾರದೊಳಗೆ ಅದನ್ನು ಪೂರೈಕೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಮುಸುಕಿನ ಗುದ್ದಾಟ ವಿಚಾರವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವನ್ನು ಎಲ್ಲರ ಜತೆ ಚರ್ಚಿಸಿ ಸೌಹಾರ್ದಯುತವಾಗಿ ಬಗೆಹರಿಸ್ತೇವೆ. ಯಾರಿಗೆ ಯಾವ ಜಿಲ್ಲೆ ನೀಡಬೇಕೆಂಬ ಬಗ್ಗೆ ತೀರ್ಮಾನಿಸ್ತೇನೆ. ಸಚಿವರ ಜೊತೆ ಸೌಹಾರ್ದಯುತವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಯಾವುದೇ ರೀತಿ ತೊಂದರೆ ಆಗದಂತೆ ನಿರ್ಧಾರ ಮಾಡ್ತೇವೆ. ಬೆಂಗಳೂರು ‌ಬಹಳ ಮಹತ್ವದ್ದು, ಈ ಬಗ್ಗೆ ಎಲ್ಲರ ಜತೆ ಚರ್ಚೆ ನಡೆಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ವರಿಷ್ಠರ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿಲ್ಲ. ಪಕ್ಷದ ಅಧ್ಯಕ್ಷ ನಡ್ಡಾರನ್ನು ಭೇಟಿಯಾಗಲು ಪ್ರಯತ್ನಿಸಿದೆ. ಆದರೆ ಅವರು ಬೇರೆ ಕಾರ್ಯಕ್ರಮದಲ್ಲಿದ್ದ ಕಾರಣ ಭೇಟಿಗೆ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಅ.11ರಂದು ತಿರುಪತಿಯಲ್ಲಿ ವಾಸ್ತವ್ಯ, ತಿಮ್ಮಪ್ಪನ ದರ್ಶನ; ವೇಂಕಟೇಶ್ವರ ಭಕ್ತಿ ಚಾನೆಲ್ ಇನ್ನು ಕನ್ನಡದಲ್ಲೂ ಪ್ರಸಾರ

ಇದನ್ನೂ ಓದಿ: ‘ನಮ್ಮ ಮನೆಯಲ್ಲೂ ಹೆಂಡತಿ ಗದರುತ್ತಾರೆ’; ‘ಅನುಬಂಧ’ ಕಾರ್ಯಕ್ರಮದಲ್ಲಿ ಅಚ್ಚರಿ ವಿಚಾರ ಬಿಚ್ಚಿಟ್ಟ ಸಿಎಂ ಬಸವರಾಜ ಬೊಮ್ಮಾಯಿ

Published On - 5:58 pm, Sat, 9 October 21

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!