AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲಿದ್ದಲು, ಕೊರೊನಾ ಲಸಿಕೆ ಪೂರೈಸಲು ಮನವಿ; ದೆಹಲಿ ಪ್ರವಾಸ ಯಶಸ್ವಿಯಾಗಿದೆ ಎಂದ ಬಸವರಾಜ ಬೊಮ್ಮಾಯಿ

CM Basavaraj Bommai Press Meet: ಕರ್ನಾಟಕ ರಾಜ್ಯಕ್ಕೆ ಕಲ್ಲಿದ್ದಲು ಪೂರೈಸುವಂತೆ ಹಾಗೂ ಕೊವಿಡ್-19 ವಿರುದ್ಧದ ಲಸಿಕೆಯನ್ನು ಹೆಚ್ಚು ಪೂರೈಕೆ ಮಾಡಲು ಮನವಿ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಲ್ಲಿದ್ದಲು, ಕೊರೊನಾ ಲಸಿಕೆ ಪೂರೈಸಲು ಮನವಿ; ದೆಹಲಿ ಪ್ರವಾಸ ಯಶಸ್ವಿಯಾಗಿದೆ ಎಂದ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 09, 2021 | 6:26 PM

Share

ಬೆಂಗಳೂರು: ನನ್ನ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ದೆಹಲಿಯಲ್ಲಿ ಹಲವು ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿದೆ. ಕರ್ನಾಟಕ ರಾಜ್ಯಕ್ಕೆ ಕಲ್ಲಿದ್ದಲು ಪೂರೈಸುವಂತೆ ಮನವಿ ಮಾಡಲಾಗಿದೆ. ರಾಜ್ಯಕ್ಕೆ ಕೊವಿಡ್-19 ವಿರುದ್ಧದ ಲಸಿಕೆಯನ್ನು ಕೂಡ ಹೆಚ್ಚು ಪೂರೈಕೆ ಮಾಡಲು ಮನವಿ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ದೆಹಲಿ ಪ್ರವಾಸ ಮುಗಿಸಿ ಸಿಎಂ ಬೊಮ್ಮಾಯಿ ವಾಪಸ್ ಆಗಿದ್ದಾರೆ. ಸಿಎಂ ಬೊಮ್ಮಾಯಿ ಜತೆ ಸಚಿವ ಡಾ.ಸುಧಾಕರ್ ಆಗಮಿಸಿದ್ದಾರೆ.

ಕಲ್ಲಿದ್ದಲು ಕಡಿಮೆಯಾಗಬಾರದು ಎಂಬ ದೃಷ್ಟಿಯಿಂದ ಕೇಂದ್ರ ಗಣಿ ಸಚಿವರನ್ನು ಭೇಟಿ ಮಾಡಿದ್ದೇನೆ. ನಮ್ಮ ಬೇಡಿಕೆ ಏನಿದೆ ಎಂದು ಅವರ ಬಳಿ ಹೇಳಿದ್ದೇವೆ. ಒಟ್ಟು ನಮಗೆ 10 ರೇಕ್ ಕಲ್ಲಿದ್ದಲು ಬರುತ್ತಿದೆ. ಅದನ್ನು 14 ರೇಕ್​ಗೆ ಏರಿಕೆ ಮಾಡಿದರೆ ನಮಗೆ ಸರಿ ಹೋಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಎರಡು ಮೂರು ಗಣಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಕಲ್ಲಿದ್ದಲು ಕೊರತೆಯಾಗದಂತೆ ನೋಡಿಕೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಕೊರೊನಾ ಲಸಿಕೆ ಮೊದಲನೇ ಡೋಸ್ ಈಗಾಗಲೇ 81 ಶೇಕಡಾವರೆಗೆ ನೀಡಲಾಗಿದೆ. ಡಿಸೆಂಬರ್ ಒಳಗೆ 90 ಶೇಕಡಾದಷ್ಟು ಲಸಿಕೆ ನೀಡಿಕೆ ಪೂರ್ಣ ಮಾಡಬೇಕು ಎಂಬುದು ಗುರಿ. ಅದಕ್ಕೆ ಕೇಂದ್ರ ಆರೋಗ್ಯ ಸಚಿವರು ಸಹಕಾರ ಕೊಡುತ್ತೇವೆ ಎಂದು ಹೇಳಿದ್ದಾರೆ. ಇದೇ ರೀತಿ ಎರಡನೇ ಡೋಸ್ ಲಸಿಕೆ ಕೂಡ ಶೇಕಡಾ 38 ರಷ್ಟು ನೀಡಲಾಗಿದೆ. ಅದನ್ನು ಶೇಕಡಾ 70ಕ್ಕೆ ಹೆಚ್ಚು ಮಾಡಬೇಕು ಎಂದು ಇದ್ದೇವೆ. ಒಟ್ಟಾರೆಯಾಗಿ ಇಡೀ ಕರ್ನಾಟಕದ ಜನಸಂಖ್ಯೆಯನ್ನು ವ್ಯಾಕ್ಸಿನೇಷನ್ ಅಡಿಯಲ್ಲಿ ತರಬೇಕು. ಅದು ಕೂಡ ಈ ವರ್ಷದ ಅಂತ್ಯದ ಒಳಗಾಗಿ ಆಗಬೇಕೆಂಬ ಯೋಜನೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಗೊಬ್ಬರ ಕೊರತೆ ವಿಚಾರವಾಗಿ ಕೇಂದ್ರ ರಸಗೊಬ್ಬರ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. 32 ಸಾವಿರ ಮೆಟ್ರಿಕ್ ಟನ್ ಡಿಎಪಿ, 10 ಸಾವಿರ ಮೆಟ್ರಿಕ್ ಟನ್ ಎಂಒಪಿ ಪೂರೈಕೆಗೆ ಮನವಿ ಮಾಡಿದ್ದೇವೆ. ಇದಕ್ಕೆ ಕೇಂದ್ರ ಸಚಿವರು ಒಪ್ಪಿಗೆ ನೀಡಿದ್ದಾರೆ. ಒಂದು ವಾರದೊಳಗೆ ಅದನ್ನು ಪೂರೈಕೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಮುಸುಕಿನ ಗುದ್ದಾಟ ವಿಚಾರವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವನ್ನು ಎಲ್ಲರ ಜತೆ ಚರ್ಚಿಸಿ ಸೌಹಾರ್ದಯುತವಾಗಿ ಬಗೆಹರಿಸ್ತೇವೆ. ಯಾರಿಗೆ ಯಾವ ಜಿಲ್ಲೆ ನೀಡಬೇಕೆಂಬ ಬಗ್ಗೆ ತೀರ್ಮಾನಿಸ್ತೇನೆ. ಸಚಿವರ ಜೊತೆ ಸೌಹಾರ್ದಯುತವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಯಾವುದೇ ರೀತಿ ತೊಂದರೆ ಆಗದಂತೆ ನಿರ್ಧಾರ ಮಾಡ್ತೇವೆ. ಬೆಂಗಳೂರು ‌ಬಹಳ ಮಹತ್ವದ್ದು, ಈ ಬಗ್ಗೆ ಎಲ್ಲರ ಜತೆ ಚರ್ಚೆ ನಡೆಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ವರಿಷ್ಠರ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿಲ್ಲ. ಪಕ್ಷದ ಅಧ್ಯಕ್ಷ ನಡ್ಡಾರನ್ನು ಭೇಟಿಯಾಗಲು ಪ್ರಯತ್ನಿಸಿದೆ. ಆದರೆ ಅವರು ಬೇರೆ ಕಾರ್ಯಕ್ರಮದಲ್ಲಿದ್ದ ಕಾರಣ ಭೇಟಿಗೆ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಅ.11ರಂದು ತಿರುಪತಿಯಲ್ಲಿ ವಾಸ್ತವ್ಯ, ತಿಮ್ಮಪ್ಪನ ದರ್ಶನ; ವೇಂಕಟೇಶ್ವರ ಭಕ್ತಿ ಚಾನೆಲ್ ಇನ್ನು ಕನ್ನಡದಲ್ಲೂ ಪ್ರಸಾರ

ಇದನ್ನೂ ಓದಿ: ‘ನಮ್ಮ ಮನೆಯಲ್ಲೂ ಹೆಂಡತಿ ಗದರುತ್ತಾರೆ’; ‘ಅನುಬಂಧ’ ಕಾರ್ಯಕ್ರಮದಲ್ಲಿ ಅಚ್ಚರಿ ವಿಚಾರ ಬಿಚ್ಚಿಟ್ಟ ಸಿಎಂ ಬಸವರಾಜ ಬೊಮ್ಮಾಯಿ

Published On - 5:58 pm, Sat, 9 October 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!