AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಕಾಂಗ್ರೆಸ್​ ಟೂಲ್​ಕಿಟ್​ನ ಮುಂದುವರಿಕೆ: ಪತ್ರಕರ್ತರಿಗೆ ಲಂಚ ಕೊಟ್ಟ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

‘ಕಾಂಗ್ರೆಸ್​ ಪಕ್ಷ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇದು ಕಾಂಗ್ರೆಸ್​ ಟೂಲ್​ಕಿಟ್​ನ ಮುಂದುವರಿಕೆ: ಪತ್ರಕರ್ತರಿಗೆ ಲಂಚ ಕೊಟ್ಟ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಎಡಚಿತ್ರ) ಮತ್ತು ಕಾಂಗ್ರೆಸ್-ಬಿಜೆಪಿ ಟ್ವೀಟ್​ಗಳು
TV9 Web
| Edited By: |

Updated on:Oct 30, 2022 | 10:59 AM

Share

ಬೆಂಗಳೂರು: ಮುಖ್ಯಮಂತ್ರಿ ಕಚೇರಿಯಿಂದಲೇ ಪತ್ರಕರ್ತರಿಗೆ ನಗದು ರೂಪದಲ್ಲಿ ಲಂಚ ನೀಡಲಾಗಿದೆ ಎಂದು ಕಾಂಗ್ರೆಸ್​ ಪಕ್ಷವು ಮಾಡಿರುವ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ತಿರುಗೇಟು ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಕಾಂಗ್ರೆಸ್​ ಪಕ್ಷ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ. ಪತ್ರಕರ್ತರಿಗೆ ಗಿಫ್ಟ್​ ಕೊಡಿ ಎಂದು ನಾನು ಯಾರಿಗೂ ಸೂಚಿಸಿಲ್ಲ. ಇದು ಕಾಂಗ್ರೆಸ್​​ ಟೂಲ್​ ಕಿಟ್​​ನ ಮುಂದುವರಿದ ಭಾಗ. ಕಾಂಗ್ರೆಸ್ ಅವಧಿಯಲ್ಲಿ ಐ ಫೋನ್​, ಚಿನ್ನದ ನಾಣ್ಯ ನೀಡಿದ್ದರು. ಈಗ ಆರೋಪ ಮಾಡಲು ಕಾಂಗ್ರೆಸ್​ಗೆ ಯಾವ ನೈತಿಕತೆ ಇದೆ’ ಎಂದು ಪ್ರಶ್ನಿಸಿದರು.

ಪತ್ರಕರ್ತರಿಗೆ ಹಣ ನೀಡಿದ ಆರೋಪ ಹೊರಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಲೋಕಾಯುಕ್ತರ ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ. ಕಾಂಗ್ರೆಸ್​ ಪಕ್ಷದ ಕರ್ನಾಟಕ ಉಸ್ತುವಾರಿ ಸುರ್ಜೇವಾಲ ತುಂಬಾ ಕೆಟ್ಟದಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ನಾನು ನಾನು ಖಂಡಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸಚಿವ ಸುಧಾಕರ್ ವಿರುದ್ಧ ಕಾಂಗ್ರೆಸ್ ಆರೋಪ

ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಸಹ ಪತ್ರಕರ್ತರಿಗೆ ಲಂಚ ನೀಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ಗಂಭೀರ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿದ್ದ ಕಾಂಗ್ರೆಸ್, ‘ಸರ್ಕಾರದ ಲಂಚದ ಬಾಕ್ಸ್ ಬೇಡ, ನಮ್ಮ ಲಂಚ್ ಬಾಕ್ಸ್ ಅಷ್ಟೇ ಸಾಕು ಎನ್ನುವ ಪ್ರಾಮಾಣಿಕ ಪತ್ರಕರ್ತರಿಂದ ಸರ್ಕಾರದ ಮಹಾ ಅಕ್ರಮ ಹೊರಬಿದ್ದಿದೆ. ಸ್ಕಾಚ್, ವಾಚ್, ಗೋಲ್ಡ್ ಕಾಯಿನ್ ಅಲ್ಲದೆ ಇನ್ನೂ ಏನೇನಿದೆ ಈ ಬಾಕ್ಸ್‌ನಲ್ಲಿ? ಎಲ್ಲವನ್ನೂ ಹಣದಿಂದ ಖರೀದಿಸುತ್ತೇವೆ ಎಂಬ ಧಿಮಾಕು ಬಿಜೆಪಿಗೆ ಬಂದಿರುವುದು ಭ್ರಷ್ಟಾಚಾರದಿಂದ’ ಎಂದು ಕಾಂಗ್ರೆಸ್ ಹೇಳಿತ್ತು.

‘ಕಾಂಗ್ರೆಸ್ ಪಕ್ಷವು ಸುಳ್ಳು ಹೇಳುವುದರಲ್ಲಿ ನಿಷ್ಣಾತ’ ಎಂದು ಲಂಚದ ಆರೋಪ ತಳ್ಳಿ ಹಾಕಿದ್ದ ಬಿಜೆಪಿ, ‘ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಗಾಳಿಯಲ್ಲಿ ಗುಂಡು ಹೊಡೆಯುತ್ತಿದೆ. ಈ ರೀತಿಯ ಆರೋಪ ಸತ್ಯಕ್ಕೆ ದೂರವಾಗಿದೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಈ ಹಿಂದೆ ಐ ಫೋನ್ ನೀಡಿರುವ ಬಗ್ಗೆ ರಾಜ್ಯಾದ್ಯಂತ ದೊಡ್ಡ ಮಟ್ಟದ ಸುದ್ದಿಯಾಗಿರುವುದು ಕಾಂಗ್ರೆಸ್​ಗೆ ಮರೆತಂತಿದೆ’ ಎಂದು ಬಿಜೆಪಿ ಟ್ವೀಟ್​ನಲ್ಲಿಯೇ ತಿರುಗೇಟು ಕೊಟ್ಟಿತ್ತು.

ಇದನ್ನು ರಿಟ್ವೀಟ್ ಮಾಡಿರುವ ಕಾಂಗ್ರೆಸ್, ‘ಪಿಎಸ್‌ಐ ಅಕ್ರಮ ನಡೆದಾಗ, ಬೋರ್​ವೆಲ್ ಅಕ್ರಮ ನಡೆದಾಗ, ಕೆಪಿಟಿಸಿಎಲ್ ನೇಮಕಾತಿ ಅಕ್ರಮ ನಡೆದಾಗ, ಗಂಗಾ ಕಲ್ಯಾಣ ಹಗರಣ ನಡೆದಾಗ, ಕಾಂಗ್ರೆಸ್‌ನದ್ದು ಗಾಳಿಯಲ್ಲಿ ಗುಂಡು ಎಂದಿತ್ತು ಬಿಜೆಪಿ. ನಂತರ ಎಲ್ಲದರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ, ಇದೂ ಬಯಲಾಗಲಿದೆ. ಗುಂಡು ಗಾಳಿಯನ್ನೇ ಸೀಳಿಕೊಂಡು ಮುನ್ನುಗ್ಗುತ್ತದೆ ನೆನಪಿರಲಿ’ ಎಂದು ತಿರುಗೇಟು ಕೊಟ್ಟಿದೆ.

Published On - 10:59 am, Sun, 30 October 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್