AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಕಾಂಗ್ರೆಸ್​ ಟೂಲ್​ಕಿಟ್​ನ ಮುಂದುವರಿಕೆ: ಪತ್ರಕರ್ತರಿಗೆ ಲಂಚ ಕೊಟ್ಟ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

‘ಕಾಂಗ್ರೆಸ್​ ಪಕ್ಷ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇದು ಕಾಂಗ್ರೆಸ್​ ಟೂಲ್​ಕಿಟ್​ನ ಮುಂದುವರಿಕೆ: ಪತ್ರಕರ್ತರಿಗೆ ಲಂಚ ಕೊಟ್ಟ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಎಡಚಿತ್ರ) ಮತ್ತು ಕಾಂಗ್ರೆಸ್-ಬಿಜೆಪಿ ಟ್ವೀಟ್​ಗಳು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 30, 2022 | 10:59 AM

Share

ಬೆಂಗಳೂರು: ಮುಖ್ಯಮಂತ್ರಿ ಕಚೇರಿಯಿಂದಲೇ ಪತ್ರಕರ್ತರಿಗೆ ನಗದು ರೂಪದಲ್ಲಿ ಲಂಚ ನೀಡಲಾಗಿದೆ ಎಂದು ಕಾಂಗ್ರೆಸ್​ ಪಕ್ಷವು ಮಾಡಿರುವ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ತಿರುಗೇಟು ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಕಾಂಗ್ರೆಸ್​ ಪಕ್ಷ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ. ಪತ್ರಕರ್ತರಿಗೆ ಗಿಫ್ಟ್​ ಕೊಡಿ ಎಂದು ನಾನು ಯಾರಿಗೂ ಸೂಚಿಸಿಲ್ಲ. ಇದು ಕಾಂಗ್ರೆಸ್​​ ಟೂಲ್​ ಕಿಟ್​​ನ ಮುಂದುವರಿದ ಭಾಗ. ಕಾಂಗ್ರೆಸ್ ಅವಧಿಯಲ್ಲಿ ಐ ಫೋನ್​, ಚಿನ್ನದ ನಾಣ್ಯ ನೀಡಿದ್ದರು. ಈಗ ಆರೋಪ ಮಾಡಲು ಕಾಂಗ್ರೆಸ್​ಗೆ ಯಾವ ನೈತಿಕತೆ ಇದೆ’ ಎಂದು ಪ್ರಶ್ನಿಸಿದರು.

ಪತ್ರಕರ್ತರಿಗೆ ಹಣ ನೀಡಿದ ಆರೋಪ ಹೊರಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಲೋಕಾಯುಕ್ತರ ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ. ಕಾಂಗ್ರೆಸ್​ ಪಕ್ಷದ ಕರ್ನಾಟಕ ಉಸ್ತುವಾರಿ ಸುರ್ಜೇವಾಲ ತುಂಬಾ ಕೆಟ್ಟದಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ನಾನು ನಾನು ಖಂಡಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸಚಿವ ಸುಧಾಕರ್ ವಿರುದ್ಧ ಕಾಂಗ್ರೆಸ್ ಆರೋಪ

ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಸಹ ಪತ್ರಕರ್ತರಿಗೆ ಲಂಚ ನೀಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ಗಂಭೀರ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿದ್ದ ಕಾಂಗ್ರೆಸ್, ‘ಸರ್ಕಾರದ ಲಂಚದ ಬಾಕ್ಸ್ ಬೇಡ, ನಮ್ಮ ಲಂಚ್ ಬಾಕ್ಸ್ ಅಷ್ಟೇ ಸಾಕು ಎನ್ನುವ ಪ್ರಾಮಾಣಿಕ ಪತ್ರಕರ್ತರಿಂದ ಸರ್ಕಾರದ ಮಹಾ ಅಕ್ರಮ ಹೊರಬಿದ್ದಿದೆ. ಸ್ಕಾಚ್, ವಾಚ್, ಗೋಲ್ಡ್ ಕಾಯಿನ್ ಅಲ್ಲದೆ ಇನ್ನೂ ಏನೇನಿದೆ ಈ ಬಾಕ್ಸ್‌ನಲ್ಲಿ? ಎಲ್ಲವನ್ನೂ ಹಣದಿಂದ ಖರೀದಿಸುತ್ತೇವೆ ಎಂಬ ಧಿಮಾಕು ಬಿಜೆಪಿಗೆ ಬಂದಿರುವುದು ಭ್ರಷ್ಟಾಚಾರದಿಂದ’ ಎಂದು ಕಾಂಗ್ರೆಸ್ ಹೇಳಿತ್ತು.

‘ಕಾಂಗ್ರೆಸ್ ಪಕ್ಷವು ಸುಳ್ಳು ಹೇಳುವುದರಲ್ಲಿ ನಿಷ್ಣಾತ’ ಎಂದು ಲಂಚದ ಆರೋಪ ತಳ್ಳಿ ಹಾಕಿದ್ದ ಬಿಜೆಪಿ, ‘ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಗಾಳಿಯಲ್ಲಿ ಗುಂಡು ಹೊಡೆಯುತ್ತಿದೆ. ಈ ರೀತಿಯ ಆರೋಪ ಸತ್ಯಕ್ಕೆ ದೂರವಾಗಿದೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಈ ಹಿಂದೆ ಐ ಫೋನ್ ನೀಡಿರುವ ಬಗ್ಗೆ ರಾಜ್ಯಾದ್ಯಂತ ದೊಡ್ಡ ಮಟ್ಟದ ಸುದ್ದಿಯಾಗಿರುವುದು ಕಾಂಗ್ರೆಸ್​ಗೆ ಮರೆತಂತಿದೆ’ ಎಂದು ಬಿಜೆಪಿ ಟ್ವೀಟ್​ನಲ್ಲಿಯೇ ತಿರುಗೇಟು ಕೊಟ್ಟಿತ್ತು.

ಇದನ್ನು ರಿಟ್ವೀಟ್ ಮಾಡಿರುವ ಕಾಂಗ್ರೆಸ್, ‘ಪಿಎಸ್‌ಐ ಅಕ್ರಮ ನಡೆದಾಗ, ಬೋರ್​ವೆಲ್ ಅಕ್ರಮ ನಡೆದಾಗ, ಕೆಪಿಟಿಸಿಎಲ್ ನೇಮಕಾತಿ ಅಕ್ರಮ ನಡೆದಾಗ, ಗಂಗಾ ಕಲ್ಯಾಣ ಹಗರಣ ನಡೆದಾಗ, ಕಾಂಗ್ರೆಸ್‌ನದ್ದು ಗಾಳಿಯಲ್ಲಿ ಗುಂಡು ಎಂದಿತ್ತು ಬಿಜೆಪಿ. ನಂತರ ಎಲ್ಲದರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ, ಇದೂ ಬಯಲಾಗಲಿದೆ. ಗುಂಡು ಗಾಳಿಯನ್ನೇ ಸೀಳಿಕೊಂಡು ಮುನ್ನುಗ್ಗುತ್ತದೆ ನೆನಪಿರಲಿ’ ಎಂದು ತಿರುಗೇಟು ಕೊಟ್ಟಿದೆ.

Published On - 10:59 am, Sun, 30 October 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್