AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೂ ಗೌಡ ನೀನು ತಪ್ಪು ಮಾತಾಡಿದ್ಯಲೇ: ತಮ್ಮನ್ನು ಹೊಗಳಿದ ಶಾಸಕಗೆ ವೇದಿಕೆಯಲ್ಲೇ ಸಿಎಂ ಕ್ಲಾಸ್

ನಾನು ಶ್ರೀರಾಮಚಂದ್ರನ ಪಾದದ ದೂಳಿಗೂ ಸಮನಲ್ಲ. ದಯವಿಟ್ಟು ಹಾಗೆಲ್ಲ ಹೇಳಬೇಡಿ, ಶ್ರೀರಾಮನಿಗೆ ಯಾರೂ ಸರಿಸಾಟಿಯಲ್ಲ ಎಂದು ಬೊಮ್ಮಾಯಿ ತಿಳಿಸಿದರು.

ರಾಜೂ ಗೌಡ ನೀನು ತಪ್ಪು ಮಾತಾಡಿದ್ಯಲೇ: ತಮ್ಮನ್ನು ಹೊಗಳಿದ ಶಾಸಕಗೆ ವೇದಿಕೆಯಲ್ಲೇ ಸಿಎಂ ಕ್ಲಾಸ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Oct 09, 2022 | 1:58 PM

Share

ಬೆಂಗಳೂರು: ಪರಿಶಿಷ್ಟ ಜಾತಿಗೆ ಮೀಸಲಾತಿ ಪ್ರಮಾಣ ಹೆಚ್ಚಾಗಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಹಾಗೂ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ಶ್ರಮ ದೊಡ್ಡದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಎಸ್​ಟಿ ಸಮುದಾಯ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ಕುರಿತು ಪ್ರತಿಕ್ರಿಯಿಸಿ, ಇದು ಹೋರಾಟದ ಗೆಲುವು. ಶ್ರೀಗಳ ಆಶೀರ್ವಾದದಿಂದ ಸಿಕ್ಕ ಗೆಲುವು ಎಂದು ಬಣ್ಣಿಸಿದರು. ಮುಂಬರುವ ಸವಾಲು ಎದುರಿಸಲು ನಿಮ್ಮ ಆಶೀರ್ವಾದ ಬೇಕು. ನಿಮ್ಮ ಆಶೀರ್ವಾದ ಸಿಗುತ್ತೆ ಎಂಬ ವಿಶ್ವಾಸವಿದೆ. ವಿಧಾನಸೌಧದ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ನ್ಯಾಯ ಸಮ್ಮತ ತೀರ್ಮಾನ ತೆಗೆದುಕೊಳ್ಳಲು ಸಹಕಾರ ಇರಲಿ ಎಂದು ಮನವಿ ಮಾಡಿದರು.

ಸಚಿವ ಶ್ರೀರಾಮುಲು ಮತ್ತು ಶಾಸಕ ರಾಜೂ ಗೌಡ ನನಗೆ ಶ್ರೀರಾಮಚಂದ್ರ ಎಂದಿದ್ದಾರೆ. ಆದರೆ ನಾನು ಶ್ರೀರಾಮಚಂದ್ರನ ಪಾದದ ದೂಳಿಗೂ ಸಮನಲ್ಲ. ದಯವಿಟ್ಟು ಹಾಗೆಲ್ಲ ಹೇಳಬೇಡಿ, ಶ್ರೀರಾಮನಿಗೆ ಯಾರೂ ಸರಿಸಾಟಿಯಲ್ಲ. ನ್ಯಾಯ, ನೀತಿ ಮತ್ತು ನಡತೆಯಲ್ಲಿ ಶ್ರೀರಾಮಚಂದ್ರ ಒಬ್ಬನೇ, ಅವನು ದೊಡ್ಡ ಆದರ್ಶ ಪುರುಷ ಎಂದರು.

ತಮ್ಮನ್ನು ಹೊಗಳಿದ ಶಾಸಕ ರಾಜೂಗೌಡ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ನೀನು ತಪ್ಪು ಮಾತಾಡಿದ್ಯಲೇ ರಾಜೂಗೌಡ. ನೀನು ಯಾರಿಗೂ ಗುಲಾಮ ಆಗಬೇಕಿಲ್ಲ. ಬದುಕು ಕೊಟ್ಟ ದೈವಕ್ಕೆ ಮಾತ್ರ ಗುಲಾಮನಾಗಬೇಕು. ಅಪ್ಪಿತಪ್ಪಿ ಇನ್ನೊಮ್ಮೆ ಆ ಶಬ್ದ ಬಂದರೆ ನಿನ್ನ ನಾನು ಬಿಡಲ್ಲ ಎಂದು ನಗುತ್ತಲೇ ಎಚ್ಚರಿಸಿದರು. ಪಾಪ ಅವನು ಭಾವನಾತ್ಮಕವಾಗಿ ಹೇಳಿದ್ದಾನೆ. ಆದರೆ ಭಾವನಾತ್ಮಕತೆಯ ಜೊತೆಗೆ ವಾಸ್ತವಾಂಶ ಮರೆಯಬಾರದು. ಮೀಸಲಾತಿ ಕೊಟ್ಟಿದ್ದು ನಾನಲ್ಲ, ರಾಜ್ಯದ ಜನತೆ. ಇದರ ಹಿಂದೆ ಬುದ್ಧ, ಬಸವ, ವಾಲ್ಮೀಕಿ ಅವರಂಥ ಮಹಾತ್ಮರ ಶಕ್ತಿಯಿದೆ. ಕೇವಲ ಬಾಯಿ ಮಾತಿನಿಂದ ಯಾವುದೇ ಕೆಲಸ ಆಗುವುದಿಲ್ಲ. ಅದಕ್ಕೆ ಬದ್ಧತೆ ಇರಬೇಕು ಎಂದರು.

ದೇವರು ನನಗೆ ಎಷ್ಟು ಶಕ್ತಿಯನ್ನು ಕೊಟ್ಟಿದ್ದಾನೋ ಆ ಎಲ್ಲಾ ಶಕ್ತಿಯನ್ನು ಬಳಕೆ ಮಾಡಿ ವಿಧಾನಸೌಧದಿಂದ ಹೊರಡುವ ಆಜ್ಞೆ ಸಾಮಾಜಿಕ ನ್ಯಾಯದ ಪರವಾಗಿರುತ್ತದೆ ಎಂದು ಹೇಳುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ನ್ಯಾಯ ಸಮ್ಮತ ತೀರ್ಮಾನ ತೆಗೆದುಕೊಳ್ಳಲು ನಿಮ್ಮ ಆಶೀರ್ವಾದ, ಸಹಕಾರ ಇರಲಿ. ನಿಮ್ಮನ್ನೆಲ್ಲಾ ನೋಡಿ ಸ್ವಲ್ಪ ಭಾವನಾತ್ಮಕವಾಗಿದ್ದೇನೆ. ನಿಮ್ಮ ಪ್ರೀತಿ ನೋಡಿ ಸೋತು ಹೋಗಿದ್ದೇನೆ. ಇದು ನಿಮ್ಮ ಹೋರಾಟದ ಗೆಲುವು, ಸ್ವಾಮೀಜಿಗಳ ಆಶೀರ್ವಾದದ ಗೆಲುವು ಎಂದು ನುಡಿದರು. ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳುತ್ತೇವೆ. ವಾಲ್ಮೀಕಿ ಸಮಾಜಕ್ಕೆ ಏನು ಮಾಡಬೇಕು ಅದನ್ನು ಮಾಡಲು ನಾವು ಬದ್ಧ ಎಂದರು.

ನಿಧಾನಗತಿಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತಾವು ಕುಳಿತಲ್ಲಿಂದ ಎದ್ದು ನೇರವಾಗಿ ನಿರೂಪಕರ ಬಳಿ ತೆರಳಿದರು. ನೇರವಾಗಿ ಕಾರ್ಯಕ್ರಮ ಶುರು ಮಾಡಿ, ನಿಮ್ಮ ಸನ್ಮಾನ ಗಿನ್ಮಾನ ಎಲ್ಲಾ ಆಮೇಲೆ ಇಟ್ಟುಕೊಳ್ಳಿ, ಜನ ಕಾಯುತ್ತಿದ್ದಾರೆ. ಸಿಎಂ ಹೇಳಿದ ಬಳಿಕ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಶ್ರೀರಾಮುಲು ಪ್ರಾಸ್ತಾವಿಕ ಭಾಷಣ ಆರಂಭಿಸಿದರು. ಇದು ವಾಲ್ಮೀಕಿ ಜಯಂತಿ ಹಿನ್ನೆಲೆ ಶಾಸಕರ ಭವನದ ಮುಂದೆ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಸಚಿವ ಶ್ರೀರಾಮುಲು,‌ ಮುರುಗೇಶ್ ನಿರಾಣಿ, ಕಾರಜೋಳ ಹಾಗೂ ಶಾಸಕ ರಾಜುಗೌಡ ಉಪಸ್ಥಿತರಿದ್ದರು.

Published On - 1:56 pm, Sun, 9 October 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?