AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷದಿಂದ ಶಾಲಾ- ಕಾಲೇಜುಗಳಲ್ಲಿ ಯೋಗಾಭ್ಯಾಸ ತರಗತಿಗಳು ಆರಂಭ; ಸಿಎಂ ಬೊಮ್ಮಾಯಿ

ಒತ್ತಡ ರಹಿತ ವಿದ್ಯಾಭ್ಯಾಸ ಮಾಡುವ ವಾತಾವರಣವಿರಬೇಕು. ಈ ಹಿನ್ನೆಲೆಯಲ್ಲಿ ಯೋಗಾಭ್ಯಾಸ ಪರಿಚಯ ಮಾಡಲಾಗುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮುಂದಿನ ವರ್ಷದಿಂದ ಶಾಲಾ- ಕಾಲೇಜುಗಳಲ್ಲಿ ಯೋಗಾಭ್ಯಾಸ ತರಗತಿಗಳು ಆರಂಭ; ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Updated By: sandhya thejappa|

Updated on:May 29, 2022 | 4:16 PM

Share

ಬೆಂಗಳೂರು: ಕೊವಿಡ್​ನಿಂದ (Covid 19) ಶಾಲಾ-ಕಾಲೇಜು ಮಕ್ಕಳು ಒತ್ತಡದಲ್ಲಿದ್ದಾರೆ. ಒತ್ತಡ ರಹಿತ ವಿದ್ಯಾಭ್ಯಾಸ ಮಾಡುವ ವಾತಾವರಣವಿರಬೇಕು. ಈ ಹಿನ್ನೆಲೆಯಲ್ಲಿ ಯೋಗಾಭ್ಯಾಸ ಪರಿಚಯ ಮಾಡಲಾಗುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುಂದಿನ ವರ್ಷದಿಂದ ಹೈಸ್ಕೂಲು, ಕಾಲೇಜುಗಳಲ್ಲಿ ಯೋಗಾಭ್ಯಾಸ ತರಗತಿ (Yoga Class) ಬರಲಿವೆ ಎಂದು ಮಾಹಿತಿ ನೀಡಿದ ಬೊಮ್ಮಾಯಿ, ಈ ಸಂಬಂಧ ಪರಿಣಿತರ ಜತೆ ಚರ್ಚೆ ಮಾಡುತ್ತೇವೆ. ಪರಿಣಿತರ ಜತೆ ಚರ್ಚೆ ಬಳಿಕ ಯೋಗ ಪಠ್ಯ ಸಿದ್ಧಪಡಿಸುತ್ತೇವೆ ಎಂದು ಹೇಳಿದರು.

ರಾಜ್ಯಕ್ಕೆ ಮೋದಿಯವರು ಬರೋದೇ ಒಂದು ವಿಶೇಷ: ಜೂನ್​ 21ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಮೈಸೂರಿನಲ್ಲಿ ಯೋಗಾ ದಿನಾಚರಣೆಯಲ್ಲಿ ಮೋದಿ ಭಾಗಿಯಾಗುತ್ತಾರೆ. ರಾಜ್ಯಕ್ಕೆ ಮೋದಿಯವರು ಬರೋದೇ ಒಂದು ವಿಶೇಷ. ಮೋದಿಯವರು ಪಾಲ್ಗೊಳ್ಳುವುದರಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಂತಾಗುತ್ತದೆ ಎಂದು ಸಿಎಂ ಅಭಿಪ್ರಾಯಪಟ್ಟರು.

ಇದನ್ನೂ ಓದಿ: Happy Hormones: ಹ್ಯಾಪಿ ಹಾರ್ಮೋನ್​ಗಳು ಎಂದರೇನು? ಹೆಚ್ಚಿಸಿಕೊಳ್ಳುವುದು ಹೇಗೆ?

ಇದನ್ನೂ ಓದಿ
Image
ಕೇರಳದ ತ್ರಿಶೂರ್‌ನಲ್ಲಿ ವೆಸ್ಟ್ ನೈಲ್ ಜ್ವರದಿಂದ ವ್ಯಕ್ತಿ ಸಾವು, ಜಾಗ್ರತೆ ವಹಿಸಿ ಎಂದ ರಾಜ್ಯ ಆರೋಗ್ಯ ಇಲಾಖೆ
Image
ಮುಂದಿನ ವರ್ಷದಿಂದ ಶಾಲಾ- ಕಾಲೇಜುಗಳಲ್ಲಿ ಯೋಗಾಭ್ಯಾಸ ತರಗತಿಗಳು ಆರಂಭ; ಸಿಎಂ ಬೊಮ್ಮಾಯಿ
Image
Happy Hormones: ಹ್ಯಾಪಿ ಹಾರ್ಮೋನ್​ಗಳು ಎಂದರೇನು? ಹೆಚ್ಚಿಸಿಕೊಳ್ಳುವುದು ಹೇಗೆ?
Image
‘ಎಲ್ಲರನ್ನೂ ಒಗ್ಗೂಡಿಸುವುದು ಮೊದಲ ಚಾಲೆಂಜ್​’: ಫಿಲ್ಮ್​ ಚೇಂಬರ್​ ಹೊಸ ಅಧ್ಯಕ್ಷ ಭಾ.ಮ. ಹರೀಶ್​ ಪ್ರತಿಕ್ರಿಯೆ

ಆ್ಯಪ್ ಬಿಡುಗಡೆ ಮಾಡಿದ ಬೊಮ್ಮಾಯಿ: ಬೆಂಗಳೂರು ಹೊರವಲಯದ ಜಿಗಣಿಯಲ್ಲಿರುವ ಎಸ್.ವ್ಯಾಸ ವಿವಿಯ 24ನೇ ಇನ್ಕೋಫೈರಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಇಂದು ಸಿಎಂ ಬೊಮ್ಮಾಯಿ ವಿಶ್ವವಿದ್ಯಾಲಯದ ನೂತನ ಆಯು ಆ್ಯಪ್ ಬಿಡುಗಡೆ ಮಾಡಿದ್ದಾರೆ. ಆ್ಯಪ್​ನ ರೋಗ ಮುಕ್ತ ಭಾರತ ಪರಿಕಲ್ಪನೆ ಅಂಗವಾಗಿ ಸಿದ್ಧಪಡಿಸಲಾಗಿದೆ. ಇನ್ಕೋಫೈರಾ ಸಂಸ್ಥೆ ವಿವಿಯ ಆಯು ಆ್ಯಪ್ ಸಿದ್ಧಪಡಿಸಿದೆ. ಈ ವೇಳೆ ಎಸ್.ವ್ಯಾಸ ಯೋಗ ವಿವಿಯ ಕುಲಪತಿ ನಾಗೇಂದ್ರ ಗುರೂಜಿ ಭಾಗಿಯಾಗಿದ್ದರು.

ಬೊಮ್ಮಾಯಿ ಭೇಟಿಯಾದ ಜಿಟಿ ದೇವೇಗೌಡ: ಜೆಡಿಎಸ್​ ಶಾಸಕ ಜಿಟಿ ದೇವೇಗೌಡ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾದರು. ಬೇಟಿ ಬಳಿಕ ಮಾತನಾಡಿದ ಜಿಟಿ ದೇವೇಗೌಡ, 2021ರಲ್ಲಿ ಮೈಸೂರಿನಲ್ಲಿ ಭಾರಿ ಮಳೆಯಿಂದ ಅವಾಂತರಗಳಾಗಿದ್ದವು. ಕೆರೆಗಳು ಒಡೆದು ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಹಾನಿಯಾಗಿತ್ತು. ಹೀಗಾಗಿ 138 ಕೋಟಿ ರೂ.ಪರಿಹಾರಕ್ಕಾಗಿ ಪ್ರಸ್ತಾವನೆ ಕಳಿಸಲಾಗಿತ್ತು. ಆದರೆ ಇದುವರೆಗೂ ಆ ಪರಿಹಾರದ ಹಣ ಬಿಡುಗಡೆಯಾಗಿರಲಿಲ್ಲ. ರಾಮದಾಸ್ ಕ್ಷೇತ್ರಕ್ಕೆ 40 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಆದರೆ ನಾನು 2 ಬಾರಿ ಪ್ರಸ್ತಾವನೆ ಕೊಟ್ಟಿದ್ದೆ, ಆದರೂ ಆಗಿರಲಿಲ್ಲ. ದಯವಿಟ್ಟು ಪರಿಹಾರ ಬಿಡುಗಡೆ ಮಾಡಿ ಅಂತಾ ಸಿಎಂಗೆ ಹೇಳಿದ್ದೆ. ದಾವೋಸ್​ಗೆ ಹೋಗಿ ಬಂದಮೇಲೆ ಮಾಡ್ತೀನಿ ಅಂತಾ ಹೇಳಿದ್ದರು. ಇಂದು ಖುದ್ದಾಗಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದೇನೆ. ತುರ್ತಾಗಿ 27 ಕೋಟಿ ಬಿಡುಗಡೆ ಮಾಡಲು ಸಿಎಂ ಸೂಚಿಸಿದ್ದಾರೆ ಎಂದು ತಿಳಿಸಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Sun, 29 May 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!