AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ V/S ಕೇಸರಿ ಶಾಲು ಸಂಘರ್ಷ! ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ; ಸಿಎಂ ಬೊಮ್ಮಾಯಿ

ಹಿಜಾಬ್ ಬಗ್ಗೆ ಇಂದು ಸಂಜೆ ಶಿಕ್ಷಣ ಸಚಿವರು, ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಈ ಬೆಳವಣಿಗೆಗಳ ಬಗ್ಗೆ ಗೃಹ ಸಚಿವರ ಜತೆಯೂ ಮಾತುಕತೆ ನಡೆಸುತ್ತೇನೆ. ಮೊದಲಿನಂತೆ ಸೌಹಾರ್ದತೆ, ಶಿಸ್ತು ಮೂಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಹಿಜಾಬ್ V/S ಕೇಸರಿ ಶಾಲು ಸಂಘರ್ಷ! ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ; ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Feb 10, 2022 | 12:19 PM

Share

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ (Hijab), ಕೇಸರಿ ಶಾಲು ಸಂಘರ್ಷ ಭುಗಿಲೆದ್ದಿದೆ. ಸದ್ಯ ಇಡೀ ರಾಜ್ಯ ಕೋರ್ಟ್ ತೀರ್ಮಾನಕ್ಕಾಗಿ ಕಾಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ. ಯಾರೂ ಪ್ರಚೋದನೆ ನೀಡದೆ ಶಾಂತಿಯಿಂದ ವರ್ತಿಸೋಣ. ಪ್ರಕರಣ ಕೋರ್ಟ್​ನಲ್ಲಿರುವುದರಿಂದ ಎಲ್ಲರೂ ಕಾಯೋಣ. ಈ ವಿಷಯದಲ್ಲಿ ಈಗಾಗಲೇ ಹಲವರು ಹೇಳಿಕೆ ಕೊಟ್ಟಿದ್ದಾರೆ. ಇನ್ಮುಂದೆ ಯಾರೂ ಹೇಳಿಕೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಹಿಜಾಬ್ ಬಗ್ಗೆ ಇಂದು ಸಂಜೆ ಶಿಕ್ಷಣ ಸಚಿವರು, ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಈ ಬೆಳವಣಿಗೆಗಳ ಬಗ್ಗೆ ಗೃಹ ಸಚಿವರ ಜತೆಯೂ ಮಾತುಕತೆ ನಡೆಸುತ್ತೇನೆ. ಮೊದಲಿನಂತೆ ಸೌಹಾರ್ದತೆ, ಶಿಸ್ತು ಮೂಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಸಿಎಂ ಬೊಮ್ಮಾಯಿ, ರಜೆ ಮುಂದುವರಿಕೆ ಬಗ್ಗೆ ಸಂಜೆ ನಿರ್ಧಾರ ಮಾಡುತ್ತೇವೆ. ಮಕ್ಕಳ ವಿಚಾರದಲ್ಲಿ ನಾವು ಸಂವೇದನಾಶೀಲರಾಗಿರಬೇಕು ಅಂತ ಅಭಿಪ್ರಾಯಪಟ್ಟರು.

ಇಂಥ ಘಟನೆ ಮೊದಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಬಳಿಕ ಲೋಕಲ್​ಗೆ ಬರುತ್ತೆ. ಶಾಂತಿ ಸುವ್ಯವಸ್ಥೆ ಕಾಪಾಡುವುದು ಎಲ್ಲರ ಕರ್ತವ್ಯ ಆಗಿದೆ. ಹೊರಗಿನಿಂದ ಕೆಲವರು ಪ್ರಚೋದಿಸುವ ಕೆಲಸ ಆಗಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಲು ಸ್ವಯಂ ನಿಯಂತ್ರಣ ಅಗತ್ಯ. ಕಾನೂನು ಸುವ್ಯವಸ್ಥೆಯನ್ನ ಎಲ್ಲರೂ ಪಾಲನೆ ಮಾಡಬೇಕು ಅಂತ ಸಿಎಂ ಹೇಳಿದರು.

ಕೆಂಪೇಗೌಡರ ಪ್ರತಿಮೆ ಕಾಮಗಾರಿ ವಿಳಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪನೆಯಾಗುತ್ತಿದೆ. ಅದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರತಿಮೆ ನಿರ್ಮಾಣ ಮಾಡುತ್ತೇವೆ. ಅದಕ್ಕೆ ಯಾವುದೇ ಅನುದಾನದ ಕೊರತೆಯಾಗಲ್ಲ. ಯಡಿಯೂರಪ್ಪನವರು ಘೋಷಿಸಿದ ಕಾಲದ ಮಿತಿಯಲ್ಲೇ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ

ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಚಡ್ಡಿ ಮೇಲೆ ಹೋಗುತ್ತಾರೆ, ಅವರನ್ನು ತಡೆಯಿರಿ; ಕಲಬುರಗಿ ನಗರಸಭೆ ಸದಸ್ಯನ ಮಾತಿನ ವಿಡಿಯೋ ವೈರಲ್

Teddy Day 2022: ಪ್ರೀತಿಯ ಸಂಕೇತವಾಗಿ ನೀವು ನೀಡುವ ಟೆಡ್ಡಿ ಬೇರ್ ಬಣ್ಣ ಯಾವ ಸಂದೇಶ ರವಾನಿಸುತ್ತದೆ ಗೊತ್ತಾ?

Published On - 11:32 am, Thu, 10 February 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ