AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ V/S ಕೇಸರಿ ಶಾಲು ಸಂಘರ್ಷ! ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ; ಸಿಎಂ ಬೊಮ್ಮಾಯಿ

ಹಿಜಾಬ್ ಬಗ್ಗೆ ಇಂದು ಸಂಜೆ ಶಿಕ್ಷಣ ಸಚಿವರು, ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಈ ಬೆಳವಣಿಗೆಗಳ ಬಗ್ಗೆ ಗೃಹ ಸಚಿವರ ಜತೆಯೂ ಮಾತುಕತೆ ನಡೆಸುತ್ತೇನೆ. ಮೊದಲಿನಂತೆ ಸೌಹಾರ್ದತೆ, ಶಿಸ್ತು ಮೂಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಹಿಜಾಬ್ V/S ಕೇಸರಿ ಶಾಲು ಸಂಘರ್ಷ! ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ; ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: sandhya thejappa|

Updated on:Feb 10, 2022 | 12:19 PM

Share

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ (Hijab), ಕೇಸರಿ ಶಾಲು ಸಂಘರ್ಷ ಭುಗಿಲೆದ್ದಿದೆ. ಸದ್ಯ ಇಡೀ ರಾಜ್ಯ ಕೋರ್ಟ್ ತೀರ್ಮಾನಕ್ಕಾಗಿ ಕಾಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ. ಯಾರೂ ಪ್ರಚೋದನೆ ನೀಡದೆ ಶಾಂತಿಯಿಂದ ವರ್ತಿಸೋಣ. ಪ್ರಕರಣ ಕೋರ್ಟ್​ನಲ್ಲಿರುವುದರಿಂದ ಎಲ್ಲರೂ ಕಾಯೋಣ. ಈ ವಿಷಯದಲ್ಲಿ ಈಗಾಗಲೇ ಹಲವರು ಹೇಳಿಕೆ ಕೊಟ್ಟಿದ್ದಾರೆ. ಇನ್ಮುಂದೆ ಯಾರೂ ಹೇಳಿಕೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಹಿಜಾಬ್ ಬಗ್ಗೆ ಇಂದು ಸಂಜೆ ಶಿಕ್ಷಣ ಸಚಿವರು, ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಈ ಬೆಳವಣಿಗೆಗಳ ಬಗ್ಗೆ ಗೃಹ ಸಚಿವರ ಜತೆಯೂ ಮಾತುಕತೆ ನಡೆಸುತ್ತೇನೆ. ಮೊದಲಿನಂತೆ ಸೌಹಾರ್ದತೆ, ಶಿಸ್ತು ಮೂಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಸಿಎಂ ಬೊಮ್ಮಾಯಿ, ರಜೆ ಮುಂದುವರಿಕೆ ಬಗ್ಗೆ ಸಂಜೆ ನಿರ್ಧಾರ ಮಾಡುತ್ತೇವೆ. ಮಕ್ಕಳ ವಿಚಾರದಲ್ಲಿ ನಾವು ಸಂವೇದನಾಶೀಲರಾಗಿರಬೇಕು ಅಂತ ಅಭಿಪ್ರಾಯಪಟ್ಟರು.

ಇಂಥ ಘಟನೆ ಮೊದಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಬಳಿಕ ಲೋಕಲ್​ಗೆ ಬರುತ್ತೆ. ಶಾಂತಿ ಸುವ್ಯವಸ್ಥೆ ಕಾಪಾಡುವುದು ಎಲ್ಲರ ಕರ್ತವ್ಯ ಆಗಿದೆ. ಹೊರಗಿನಿಂದ ಕೆಲವರು ಪ್ರಚೋದಿಸುವ ಕೆಲಸ ಆಗಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಲು ಸ್ವಯಂ ನಿಯಂತ್ರಣ ಅಗತ್ಯ. ಕಾನೂನು ಸುವ್ಯವಸ್ಥೆಯನ್ನ ಎಲ್ಲರೂ ಪಾಲನೆ ಮಾಡಬೇಕು ಅಂತ ಸಿಎಂ ಹೇಳಿದರು.

ಕೆಂಪೇಗೌಡರ ಪ್ರತಿಮೆ ಕಾಮಗಾರಿ ವಿಳಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪನೆಯಾಗುತ್ತಿದೆ. ಅದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರತಿಮೆ ನಿರ್ಮಾಣ ಮಾಡುತ್ತೇವೆ. ಅದಕ್ಕೆ ಯಾವುದೇ ಅನುದಾನದ ಕೊರತೆಯಾಗಲ್ಲ. ಯಡಿಯೂರಪ್ಪನವರು ಘೋಷಿಸಿದ ಕಾಲದ ಮಿತಿಯಲ್ಲೇ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ

ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಚಡ್ಡಿ ಮೇಲೆ ಹೋಗುತ್ತಾರೆ, ಅವರನ್ನು ತಡೆಯಿರಿ; ಕಲಬುರಗಿ ನಗರಸಭೆ ಸದಸ್ಯನ ಮಾತಿನ ವಿಡಿಯೋ ವೈರಲ್

Teddy Day 2022: ಪ್ರೀತಿಯ ಸಂಕೇತವಾಗಿ ನೀವು ನೀಡುವ ಟೆಡ್ಡಿ ಬೇರ್ ಬಣ್ಣ ಯಾವ ಸಂದೇಶ ರವಾನಿಸುತ್ತದೆ ಗೊತ್ತಾ?

Published On - 11:32 am, Thu, 10 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ