AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೊಂಡ ಯೋಜನೆ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

ನಿರ್ಮಾಣ ವಿವಿಧ ಹಂತದಲ್ಲಿರುವ 8 ಫ್ಲೈ ಓವರ್ ಗಳ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೊಂಡ ಯೋಜನೆ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ
ಬಿ ಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 10, 2021 | 10:28 PM

Share

ಬೆಂಗಳೂರು: ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೆತ್ತಿಕೊಂಡ ಕಾರ್ಯಕ್ರಮಗಳನ್ನು ಮುಂದುವರೆಸಲಾಗುವುದು. ಬೆಂಗಳೂರು ನಗರದ ಅಭಿವೃದ್ಧಿಯ ಯೋಜನೆಗಳು ಇನ್ನಷ್ಟು ಚುರುಕಾಗಿ ಅನುಷ್ಠಾನಗೊಳ್ಳಬೇಕು. ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಭ್ರಷ್ಟಾಚಾರಕ್ಕೆ ಆಸ್ಪದ ನೀಡಬಾರದು. ಬಿಬಿಎಂಪಿ (BBMP) ತನ್ನ ವಾರ್ಷಿಕ ಆದಾಯ ಮಿತಿಯೊಳಗೇ ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬೆಂಗಳೂರು ನಗರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಿಎಂ ಸೂಚನೆ ಬಿಡಬ್ಲ್ಯು.ಎಸ್.ಎಸ್.ಬಿ.ಯು ಬಿಬಿಎಂಪಿ ವ್ಯಾಪ್ತಿಗೆ 110 ಗ್ರಾಮಗಳಲ್ಲಿ ನಿರ್ವಹಿಸುತ್ತಿರುವ ಎಂಟು ಸಾವಿರ ಬೋರ್ ವೆಲ್ ಗಳಲ್ಲಿ ಸುಸ್ಥಿತಿಯಲ್ಲಿರುವ ಬೋರ್ ವೆಲ್ ಗಳನ್ನು ಗುರುತಿಸಿ, ಅವುಗಳ ದುರಸ್ತಿ, ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ವರ್ಷಾಂತ್ಯದಲ್ಲಿ ಕನಿಷ್ಠ 3 ಲಕ್ಷ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಿಗೆ ಪರಿವರ್ತಿಸಬೇಕು. ಕಳೆದ ಬಾರಿ ಮಳೆಯಿಂದ ಕೊಚ್ಚಿ ಹೋದ/ ಹಾಳಾದ ಪ್ರಮುಖ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿ ಮಾಡಬೇಕು. ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು ಶೀಘ್ರವೇ ಪೂರ್ಣಗೊಳಿಸಬೇಕು. ಮುಖ್ಯಮಂತ್ರಿಗಳ ನವನಗರೋತ್ಥಾನ ಯೋಜನೆಗಳನ್ನು ಚುರುಕುಗೊಳಿಸಬೇಕು. ಅಕ್ಟೋಬರ್ ಒಳಗೆ ಮೂರನೇ ಹಂತದ ನಗರೋತ್ಥಾನ ಯೋಜನೆಗೆ ಕಾಮಗಾರಿಗಳನ್ನು ಗುರುತಿಸಿ, ಪ್ರಸ್ತಾವನೆ ಸಲ್ಲಿಸಬೇಕು. ನಿರ್ಮಾಣದ ವಿವಿಧ ಹಂತದಲ್ಲಿರುವ 8 ಫ್ಲೈ ಓವರ್ ಗಳ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಭೆಯ ನಂತರ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ಸಿಎಂ ಜೊತೆಗೆ ತೆರಳಿದ ಸಚಿವ ಆರ್. ಅಶೋಕ್, ಸೋಮಶೇಖರ್, ಭೈರತಿ ಬಸವರಾಜ್​, ಮುನಿರತ್ನ ಮತ್ತು ನಾರಾಯಣಗೌಡ ಸಹ ಇದ್ದರು.

ಇದನ್ನೂ ಓದಿ:

ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರಿಂದ ಅರೆಬೆತ್ತಲೆ ಪ್ರತಿಭಟನೆ 

ಬೆಂಗಳೂರು: ಜೆಪಿ ನಗರದಲ್ಲಿ ಆನೆ ದಂತ, ವನ್ಯ ಜೀವಿಗಳ ಚರ್ಮ, ಮೂಳೆ ಸಂಗ್ರಹಿಸಿದ್ದ ಆರೋಪಿ ಬಂಧನ

(CM Basavaraj Bommai says will Continue the Plans of Yeddyurappa which Bengaluru Development)

Published On - 10:10 pm, Tue, 10 August 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!