AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಕಿಚ್ಚ ಸುದೀಪ್ ಹೇಳಿರುವ ವಿಚಾರ ಸರಿಯಿದೆ; ಹಿಂದಿ ಬಗ್ಗೆ ಸುದೀಪ್ ಹೇಳಿಕೆಗೆ ಬೆಂಬಲ ಸೂಚಿಸಿ ಸಿಎಂ ಬೊಮ್ಮಾಯಿ

ಆಯಾ ರಾಜ್ಯಗಳಲ್ಲಿ ಪ್ರಾದೇಶಿಕ ಭಾಷೆಯೇ ಸಾರ್ವಭೌಮ. ನಟ ಕಿಚ್ಚ ಸುದೀಪ್ ಹೇಳಿರುವ ವಿಚಾರ ಸರಿಯಿದೆ. ಆಯಾ ಪ್ರಾದೇಶಿಕ ಭಾಷೆಗಳಿಗೆ ಮನ್ನಣೆ ಇರುತ್ತದೆ. ಸುದೀಪ್ ಅದನ್ನ ಸರಿಯಾಗಿಯೇ ಹೇಳಿದ್ದಾರೆ ಎಂದು ಸುದೀಪ್ ಹೇಳಿಕೆಗೆ ಹುಬ್ಬಳ್ಳಿ ಏರ್ಪೋರ್ಟ್ನಲ್ಲಿ ಸಿಎಂ ಬೊಮ್ಮಾಯಿ ಬೆಂಬಲ ಸೂಚಿಸಿದ್ದಾರೆ.

ನಟ ಕಿಚ್ಚ ಸುದೀಪ್ ಹೇಳಿರುವ ವಿಚಾರ ಸರಿಯಿದೆ; ಹಿಂದಿ ಬಗ್ಗೆ ಸುದೀಪ್ ಹೇಳಿಕೆಗೆ ಬೆಂಬಲ ಸೂಚಿಸಿ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Apr 28, 2022 | 12:19 PM

Share

ಬೆಂಗಳೂರು: ನಟ ಅಜಯ್ ದೇವಗನ್, ಕಿಚ್ಚ ಸುದೀಪ್ ಟ್ವೀಟ್ ವಾರ್ ವಿಚಾರ ಸಂಬಂಧ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆಯುತ್ತಿದೆ. ಇನ್ನು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಮತ್ತೊಂದು ಕಡೆ ಟ್ವೀಟ್ ವಾರ್ ವಿಚಾರವಾಗಿ ಸಿಎಂ ಬೊಮ್ಮಾಯಿ, ಡಿಕೆ ಶಿವಕುಮಾರ್ ಸೇರಿದಂತೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ.

ನಟ ಕಿಚ್ಚ ಸುದೀಪ್ ಹೇಳಿರುವ ವಿಚಾರ ಸರಿಯಿದೆ ಆಯಾ ರಾಜ್ಯಗಳಲ್ಲಿ ಪ್ರಾದೇಶಿಕ ಭಾಷೆಯೇ ಸಾರ್ವಭೌಮ. ನಟ ಕಿಚ್ಚ ಸುದೀಪ್ ಹೇಳಿರುವ ವಿಚಾರ ಸರಿಯಿದೆ. ಆಯಾ ಪ್ರಾದೇಶಿಕ ಭಾಷೆಗಳಿಗೆ ಮನ್ನಣೆ ಇರುತ್ತದೆ. ಸುದೀಪ್ ಅದನ್ನ ಸರಿಯಾಗಿಯೇ ಹೇಳಿದ್ದಾರೆ ಎಂದು ಸುದೀಪ್ ಹೇಳಿಕೆಗೆ ಹುಬ್ಬಳ್ಳಿ ಏರ್ಪೋರ್ಟ್ನಲ್ಲಿ ಸಿಎಂ ಬೊಮ್ಮಾಯಿ ಬೆಂಬಲ ಸೂಚಿಸಿದ್ದಾರೆ.

ಹಿಂದಿ‌ ರಾಷ್ಟ್ರ ಭಾಷೆ ಅಲ್ಲ ನಟ ಅಜಯ್ ದೇವಗನ್ ಖ್ಯಾತ ನಟ. ಇಲ್ಲಿ ಸುದೀಪ್ ಕೂಡ ಕನ್ನಡದ ಖ್ಯಾತ ನಟ. ಅಜಯ್ ದೇವಗನ್ ಹಿಂದಿ ರಾಷ್ಟ್ರೀಯ ಭಾಷೆ ಅಂದಿದಾರೆ. ಹಿಂದಿ‌ ರಾಷ್ಟ್ರ ಭಾಷೆ ಅಲ್ಲ. ದೇಶದ 14 ಭಾಷೆಗಳಲ್ಲಿ ಹಿಂದಿ ಕೂಡ ಒಂದು. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ ಭಾಷೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.

ಎಲ್ಲಾ ಭಾಷೆಗೂ ಈ ದೇಶದಲ್ಲಿ ಸಮಾನ ಮಾನ್ಯತೆ ಇದೆ ಇನ್ನು ಹಿಂದಿ ರಾಷ್ಟ್ರೀಯ ಭಾಷೆ ಎಂಬ ವಿಚಾರಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಾನು ಯಾರ ಟ್ವೀಟ್ಗೂ ರಿಪ್ಲೇ ಮಾಡಕ್ಕೆ ಸಿದ್ದ ಇಲ್ಲ. ನಮ್ಮ ದೇಶದಲ್ಲಿ ಯಾವ ಭಾಷೆ ಬೇಕು ಅಂತ ಸರ್ಕಾರ ತೀರ್ಮಾನ ಮಾಡಿದೆ. ಕನ್ನಡ ಇದೆ, ತೆಲುಗು ಇದೆ ಎಲ್ಲ ಭಾಷೆಗಳು ಇದೆ. ನೋಟಿನ ಮೇಲೆ ಎಲ್ಲಾ ಭಾಷೆಗಳು ಇವೆ. ನಮ್ಮ ನೆಲ, ನಮ್ಮ ಭಾಷೆ, ನಮ್ಮ ಜನ ರಕ್ಷಣೆ ಮಾಡಬೇಕಾದ್ದು ನಮ್ಮ ಕೆಲಸ. ಒಬ್ಬರಿಗೆ ಹಿಂದಿ ಬರುತ್ತೆ ಇಂಗ್ಲೀಷ್ ಬರುತ್ತೆ ಆದರೆ ಪಾರ್ಲಿಮೆಂಟ್ನಲ್ಲಿ ಕನ್ನಡದಲ್ಲಿ ಭಾಷಣ ಮಾಡಕ್ಕೆ ಅವಕಾಶ ಮಾಡಿಕೊಡಿ ಎಂದರು.

ನಮ್ಮ ದೇಶ ಅನೇಕ ಭಾಷೆಗಳ ಗೂಡಾಗಿದೆ. ಅವರವರಿಗೆ ಅವರವರ ಸ್ವಾಭಿಮಾನವಿದೆ. ನಮ್ಮ ರಾಜ್ಯದಲ್ಲೇ ಕೊಡಗಿಗೆ ಹೋದರೆ ಒಂದು, ಮಂಗಳೂರಿಗೆ ಹೋದರೆ ಒಂದು ಭಾಷೆ ಇದೆ. ಯಾವುದನ್ನು ತಳ್ಳಿ ಹಾಕಲು ಸಾಧ್ಯವಿಲ್ಲ. ನಾವು ಕನ್ನಡಿಗರು, ನಮ್ಮದು ಧ್ವಜ‌ ಇದೆ. ಭಾಷೆ ಇದೆ. ನಮ್ಮದೇ ಆದ ಸ್ವಾಭಿಮಾನ ಇದೆ. ಐನೂರು ರೂಪಾಯಿ ನೋಟಿನಲ್ಲಿ ಎಲ್ಲಾ ಭಾಷೆಗಳು ಇವೆ. ಕನ್ನಡ, ತೆಲುಗು, ತಮಿಳು ಭಾಷೆ ಇದೆ ಎಂದು ಡಿಕೆಶಿ ಐನೂರರ ನೋಟು ಪ್ರದರ್ಶನ ಮಾಡಿದ್ರು. ದೇಶದ ಎಲ್ಲಾ ಕಡೆ ಈ ನೋಟು ಚಲಾವಣೆ ಆಗುತ್ತೆ ಅಂದಮೇಲೆ‌ ಎಲ್ಲಾ ಭಾಷೆಗೂ ಈ ದೇಶದಲ್ಲಿ ಸಮಾನ ಮಾನ್ಯತೆ ಇದೆ ಎಂದರು.

ಎಲ್ಲ ರಾಜ್ಯ ಒಮ್ಮತದಿಂದ ಹೇಳ್ಬೇಕು. ಯಾರೋ ಒಬ್ಬರು ಹೇಳಿದರು ಅಂತ ನಾವು ಮಾಡಕ್ಕಾಗಲ್ಲ. ನಮಗೆ ಕನ್ನಡ ಭಾಷೆಯೇ ಪ್ರಾಮುಖ್ಯತೆ. ರಾಷ್ಟ್ರಮಟ್ಟದಲ್ಲಿ ವಿಚಾರ ಚರ್ಚೆಯಾಗಬೇಕು. ಯಾರೊಬ್ಬರೂ ಹೇಳಿದ ತಕ್ಷಣ ನಾವು ಹಿಂದಿಯನ್ನು ರಾಷ್ಟ್ರಭಾಷೆ ಎಂದು ಒಪ್ಪಿಕೊಳ್ಳಲು ಆಗುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದಿ ವಿವಾದ: ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಕಾಂಟ್ರವರ್ಸಿ ಶುರು ಆಗಿದ್ದು ಹೇಗೆ? ಇಲ್ಲಿದೆ ವಿವರ..

Follow Us
ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!
ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!
ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ
ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ