AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಗೇರಿದ ವಿಧಾನ ಪರಿಷತ್ ಚುನಾವಣೆ ಪ್ರಚಾರ: ಇಂದಿನಿಂದ 3 ದಿನ ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ

ಇಂದು ಬೆಳಗ್ಗೆ 11ಕ್ಕೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ2:30ಕ್ಕೆ HAL ವಿಮಾನ ನಿಲ್ದಾಣದಿಂದ ಹೊರಟು 3:45ಕ್ಕೆ ಬೀದರ್‌ಗೆ ತಲುಪಲಿದ್ದಾರೆ.

ರಂಗೇರಿದ ವಿಧಾನ ಪರಿಷತ್ ಚುನಾವಣೆ ಪ್ರಚಾರ: ಇಂದಿನಿಂದ 3 ದಿನ ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Dec 05, 2021 | 9:10 AM

Share

ಬೆಂಗಳೂರು: ಡಿಸೆಂಬರ್ 10 ರಂದಿರುವ ವಿಧಾನ ಪರಿಷತ್ ಚುನಾವಣೆ ಪ್ರಚಾರ ರಂಗೇರಿದೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಇಂದಿನಿಂದ 3 ದಿನ ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಇಂದು ಬೆಳಗ್ಗೆ 11ಕ್ಕೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ2:30ಕ್ಕೆ HAL ವಿಮಾನ ನಿಲ್ದಾಣದಿಂದ ಹೊರಟು 3:45ಕ್ಕೆ ಬೀದರ್‌ಗೆ ತಲುಪಲಿದ್ದಾರೆ. ಬೀದರ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚನೆ ನಡೆಸಿ ಇಂದು ರಾತ್ರಿ ಬೀದರ್‌ನಲ್ಲೇ ಸಿಎಂ ಬೊಮ್ಮಾಯಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ (ಡಿಸೆಂಬರ್ 05) ಬೀದರ್‌ನಿಂದ ಹುಬ್ಬಳ್ಳಿಗೆ ತೆರಳಲಿದ್ದಾರೆ. ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ 65 ನೇ ಪುಣ್ಯ ಸ್ಮರಣೆ ಹಿನ್ನೆಲೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಹುಬ್ಬಳ್ಳಿಯಿಂದ ಗದಗಕ್ಕೆ ತೆರಳಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಬಳಿಕ ಕಾಗಿನೆಲೆಯಲ್ಲಿ ಸಿಎಂ ಬೊಮ್ಮಾಯಿ ಮತಯಾಚನೆ ನಡೆಸಿ ಪ್ರಚಾರದ ಬಳಿಕ ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಇನ್ನು ಮತ್ತೊಂದೆಡೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಮಂಡ್ಯಗೆ ತೆರಳಿ ಪರಿಷತ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಮಂಡ್ಯದ ಕಾಳಿಕಾಂಬ ಸಮುದಾಯ ಭವನದಲ್ಲಿ ನಡೆಯಲಿರೊ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಜುನಾಥ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೈಸೂರಿನಲ್ಲಿ ಮಾಜಿ ಸಿಎಂಗಳ ಪ್ರಚಾರ ಇಂದು ಮೈಸೂರಿನಲ್ಲಿ ಮಾಜಿ ಸಿಎಂಗಳ ಮತಬೇಟೆ ನಡೆಯಲಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸಿಎನ್ ಮಂಜೇಗೌಡ ಪರ ಕುಮಾರಸ್ವಾಮಿ ಮತಯಾಚನೆ ನಡೆಸಿದ್ರೆ ಕೌಟಿಲ್ಯ ರಘು ಪರ ಬಿ.ಎಸ್ ಯಡಿಯೂರಪ್ಪ ಮತಯಾಚನೆ ನಡೆಸಲಿದ್ದಾರೆ. ಬಳಿಕ ಚಾಮರಾಜನಗರ ಮೈಸೂರು ನಗರದಲ್ಲಿ ಮತಯಾಚನಾ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಧಾರವಾಡ ವಿಧಾನ ಪರಿಷತ್ ಚುನಾವಣೆ; ಸಿಎಂ ಬೊಮ್ಮಾಯಿಗೆ ರಾಜಕೀಯ ನೆಲೆ ಕಲ್ಪಿಸಿದ ಕ್ಷೇತ್ರ ಈ ಬಾರಿ ಯಾರ ಕೈ ಹಿಡಿಯುತ್ತೆ?

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್