AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಹಿರಿಯರು, ಆದ್ರೆ ಹೋರಾಟ ಇನ್ನೂ ಯುವಕರಂತೆ: ವಾಟಾಳ್ ನಾಗರಾಜ್​ರನ್ನು ಹೊಗಳಿದ ಸಿಎಂ ಬೊಮ್ಮಾಯಿ

ಕನ್ನಡ ರಾಜ್ಯೋತ್ಸವ ಸಮಿತಿಯಿಂದ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಈ ವೇಳೆ, ನಿಜಲಿಂಗಪ್ಪರಿಗೆ ಭಾರತ ರತ್ನ ಕೊಡಿಸುವಂತೆ ವಾಟಾಳ್​ರಿಂದ ಸಿಎಂಗೆ ಮನವಿ ಸಲ್ಲಿಸಲಾಗಿದೆ. ಮನವಿಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ನಮಗೆ ಹಿರಿಯರು, ಆದ್ರೆ ಹೋರಾಟ ಇನ್ನೂ ಯುವಕರಂತೆ: ವಾಟಾಳ್ ನಾಗರಾಜ್​ರನ್ನು ಹೊಗಳಿದ ಸಿಎಂ ಬೊಮ್ಮಾಯಿ
ವಾಟಾಳ್ ನಾಗರಾಜ್​ರನ್ನು ಹೊಗಳಿದ ಸಿಎಂ ಬೊಮ್ಮಾಯಿ
TV9 Web
| Updated By: ganapathi bhat|

Updated on:Nov 01, 2021 | 4:00 PM

Share

ಬೆಂಗಳೂರು: ನಿಜಲಿಂಗಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ವಾಟಾಳ್ ನಾಗರಾಜ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. ಅದರ ನೇತೃತ್ವವನ್ನ ತಾವು ವಹಿಸಿಕೊಳ್ಳಬೇಕು ಎಂದು ವೇದಿಕೆಯಲ್ಲಿ ಸಿಎಂ ಬೊಮ್ಮಾಯಿಗೆ ವಾಟಳ್ ನಾಗರಾಜ್ ಮನವಿ ಮಾಡಿದ್ದಾರೆ. ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳನ್ನ ಭೇಟಿ ಮಾಡಿ ನಿಜಲಿಂಗಪ್ಪನವರಿಗೆ ಭಾರತಗ ರತ್ನ ಕೊಡಿಸುವ ಕೆಲಸ ಮಾಡಬೇಕು. ನಿಜಲಿಂಗಪ್ಪನವರ ಹೆಸರಿನಲ್ಲಿ ರಾಜ್ಯದ ಯಾವುದಾದ್ರು ಜಿಲ್ಲೆಯಲ್ಲಿ 1 ಸಾವಿರ ಎಕರೆ ಜಾಗದಲ್ಲಿ ಸ್ಮಾರಕ ಆಗಬೇಕು ಎಂದು ಕೇಳಿಕೊಂಡಿದ್ದಾರೆ.

ಕನ್ನಡ ರಾಜ್ಯೋತ್ಸವ ಸಮಿತಿಯಿಂದ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಈ ವೇಳೆ, ನಿಜಲಿಂಗಪ್ಪರಿಗೆ ಭಾರತ ರತ್ನ ಕೊಡಿಸುವಂತೆ ವಾಟಾಳ್​ರಿಂದ ಸಿಎಂಗೆ ಮನವಿ ಸಲ್ಲಿಸಲಾಗಿದೆ. ಮನವಿಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ, ರಾಷ್ಟ್ರಪತಿ ಭೇಟಿಯಾಗಿ ಈ ಕೆಲಸ ಮಾಡಬೇಕು. ಇದರ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ. ಕೇಂದ್ರ ಗೃಹ ಸಚಿವರ ಜೊತೆಯೂ ಚರ್ಚೆ ಮಾಡುತ್ತೇವೆ ಎಂದು ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಕನ್ನಡ ರಾಜ್ಯೋತ್ಸವ ಸಮಿತಿಯಿಂದ 66ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ವಾಟಾಳ್ ನಾಗರಾಜ್​ರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೊಗಳಿದ್ದಾರೆ. ಕರ್ನಾಟಕ ಏಕೀಕರಣ ಹತ್ತಿರದಿಂದ ನೋಡಿದ್ದು ವಾಟಾಳ್. ಬೆಂಗಳೂರಲ್ಲಿ ಕನ್ನಡದ ಧ್ವನಿ ಎತ್ತಿದ್ದು ವಾಟಾಳ್‌ ನಾಗರಾಜ್. ಸರ್ಕಾರಕ್ಕಿಂತ ಮೊದಲೇ ವಾಟಾಳ್ ರಾಜ್ಯೋತ್ಸವವನ್ನು ಆಚರಿಸಿಕೊಂಡು ಬಂದಿದ್ದಾರೆ. ಅವರು ನಮಗೆ ಹಿರಿಯರು, ಆದ್ರೆ ಅವರ ಹೋರಾಟ ಇನ್ನೂ ಯುವಕರಂತೆ ಇದೆ ಎಂದು ವಾಟಾಳ್ ಹೋರಾಟದ ಬಗ್ಗೆ ಸಿಎಂ ಬೊಮ್ಮಾಯಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನಟ ಪುನೀತ್ ಅಂತ್ಯಕ್ರಿಯೆ ಅಚ್ಚುಕಟ್ಟಾಗಿ ನಡೆದಿದೆ. ಬೊಮ್ಮಾಯಿ ಸರ್ಕಾರ ಅಂತ್ಯಕ್ರಿಯೆ ಅಚ್ಚುಕಟ್ಟಾಗಿ ನಡೆಸಿದೆ ಎಂದು ಸಿಎಂ ಬೊಮ್ಮಾಯಿ ಅವರನ್ನು ವಾಟಾಳ್ ನಾಗರಾಜ್ ಹಾಡಿಹೊಗಳಿದ್ದಾರೆ. ಕನ್ನಡ ರಾಜ್ಯೋತ್ಸವ ಸಮತಿಯಿಂದ ಆಯೋಜಿಸಿದ್ದ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ವಾಟಾಳ್ ನಾಗರಾಜ್, ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಉಪಸ್ಥಿತರಿದ್ದರು.

ಇದನ್ನೂ ಓದಿ: ಸ್ಪಷ್ಟ ದಿಕ್ಸೂಚಿ, ನಿರ್ದಿಷ್ಟ ಗುರಿ, ಸಮಸ್ಯೆ ಬಗೆಹರಿಸುವ ಬದ್ಧತೆ ಇದೆ: ಜನಸೇವಕ ಕಾರ್ಯಕ್ರಮದ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿಕೆ

ಇದನ್ನೂ ಓದಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಜನ ಸ್ಪಂದನ ವೆಬ್ ಪೋರ್ಟಲ್ ಉದ್ಘಾಟನೆ

Published On - 4:00 pm, Mon, 1 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ