Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Deve Gowda: ಹಿರಿಯ ನಾಯಕ ದೇವೇಗೌಡರ ಯೋಗಕ್ಷೇಮ ವಿಚಾರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

CM Basavaraj Bommai: ರಾಜ್ಯದ ಹಿರಿಯ ನಾಯಕ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಯೋಗಕ್ಷೇಮ ವಿಚಾರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಪುಟದ ಸಹೋದ್ಯೋಗಿಗಳು ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಇದೀಗತಾನೆ ಭೇಟಿ ನೀಡಿದ್ದಾರೆ.

HD Deve Gowda: ಹಿರಿಯ ನಾಯಕ ದೇವೇಗೌಡರ ಯೋಗಕ್ಷೇಮ ವಿಚಾರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹಿರಿಯ ನಾಯಕ ದೇವೇಗೌಡರ ಯೋಗಕ್ಷೇಮ ವಿಚಾರಿಸಲು ಮುಖ್ಯಮಂತ್ರಿ ಬೊಮ್ಮಾಯಿ ಆಗಮನ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 21, 2022 | 3:20 PM

ಬೆಂಗಳೂರು: ರಾಜ್ಯದ ಹಿರಿಯ ನಾಯಕ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಯೋಗಕ್ಷೇಮ ವಿಚಾರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಪುಟದ ಸಹೋದ್ಯೋಗಿಗಳು ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಇದೀಗತಾನೆ ಭೇಟಿ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಜೊತೆಗೆ ಸಚಿವರಾದ ಆರ್. ಅಶೋಕ್, ಸೋಮಣ್ಣ, ಕೆ. ಗೋಪಾಲಯ್ಯ, ಭೈರತಿ ಬಸವರಾಜ, ಮುನಿರತ್ನ, ಮಾಧುಸ್ವಾಮಿ ಹಾಗೂ ಆನಂದ್ ಸಿಂಗ್ ಸೇರಿ ಹಲವು ಸಚಿವರು ಆಗಮಿಸಿದ್ದಾರೆ. ಪ್ರಸ್ತುತ ರಾಜ್ಯ ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದು, ಅಧಿವೇಶನದ ಮಧ್ಯೆ ಹಿರಿಯರಾದ ದೇವೇಗೌಡರ ಯೋಗಕ್ಷೇಮ ವಿಚಾರಿಸಲು ಸಚಿವರೆಲ್ಲ ಬಂದಿದ್ದಾರೆ.

ದೇವೇಗೌಡರ ಆರೋಗ್ಯ ವಿಚಾರಿಸುತ್ತಿರುವ ಸಿಎಂ ಬೊಮ್ಮಾಯಿ:

ಆದರೆ ಸದನ ನಡೆಯುತ್ತಿರುವ ಕಾರಣ ಎಲ್ಲರೂ ತೆರಳುವುದು ಬೇಡ ಎಂಬ ಸಿಎಂ ಸೂಚನೆ ಹಿನ್ನೆಲೆಯಲ್ಲಿ ಕೆಲ ಸಚಿವರು ಸದನಕ್ಕೆ ವಾಪಾಸಾದರು. ಇದೆ ವೇಳೆ, ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದ ಎರಡನೇ ಮಹಡಿಯಲ್ಲಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸುತ್ತಿದ್ದಾರೆ. ದೇವೇಗೌಡರ ಪಕ್ಕದಲ್ಲಿಯೇ ಕುಳಿತು, ಗೌಡರ ಕೈ ಹಿಡಿದು ಅವರ ಆರೋಗ್ಯದ ಬಗ್ಗೆ ಸಿಎಂ ಬೊಮ್ಮಾಯಿ ಮಾಹಿತಿ ಪಡೆದರು.

ಕಾಲು ನೋವು ಇದೆ… ಮಂಡಿ ನೋವು ಕೂಡ ಇದೆ:

ದೇವೆಗೌಡರನ್ನು ಸಿಎಂ ಭೇಟಿ ಮಾಡಿದ ವೇಳೆ ಹಿರಿಯ ಗೌಡರು ಊಟ ಮಾಡ್ಕೊಂಡು ಹೋಗಿ ಎಂದು ಸಿಎಂ ಬೊಮ್ಮಾಯಿ ಅವರಿಗೆ ಸೂಚಿಸಿದರು. ನಮ್ಮದೆಲ್ಲಾ ಊಟ ಆಗಿದೆ ಎಂದನ್ನು ಸಿಎಂ ಬೊಮ್ಮಾಯಿ ತಮ್ಮದು ಊಟ ಎಲ್ಲಾ ಏನ್ ಮಾಡ್ತೀರಾ..? ನಾರ್ಮಲ್ ಮುದ್ದೆ ಎಲ್ಲಾ ಮಾಡ್ತೀರಾ? ಎಂದು ಗೌಡರನ್ನು ಪ್ರಶ್ನಿಸಿದರು. ಅದಕ್ಕೆ ಉತ್ತರವಾಗಿ ಗೌಡರು ತಲೆ ಅಲ್ಲಾಡಿಸಿದರು.

ಇನ್ನು ಕಾಲು ನೋವು ಇದೆಯಲ್ಲ? ಎಂಬ ಸಿಎಂ ಬೊಮ್ಮಾಯಿ ಪ್ರಶ್ನೆಗೆ ದೇವೆಗೌಡರು ಹಾ.. ಕಾಲು ನೋವು ಇದೆ. ಹಾಗೆಯೇ ಮಂಡಿ ನೋವು ಕೂಡ ಇದೆ‌ ಎಂದರು.

ದೇವೇಗೌಡರ ನಿವಾಸದಿಂದ ಹೊರಬಂದ ಸಿಎಂ, ಸಚಿವರು

ದೇವೇಗೌಡರ ಆರೋಗ್ಯ ವಿಚಾರಿಸಲು ಆಗಮಿಸಿದ್ದ ಸಿಎಂ ಬೊಮ್ಮಾಯಿ ಮತ್ತು ಸಚಿವರ ದಂಡು ಹೆಚ್.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿದ ಬಳಿಕ, ಅವರ ಮನೆಯಿಂದ ವಾಪಸಾಗಿದ್ದಾರೆ. ಅದಕ್ಕೂ ಮುನ್ನ ಸಿಎಂ ಮತ್ತು ಸಚಿವರು ದೇವೇಗೌಡರ ನಿವಾಸದಲ್ಲಿ ಊಟ ಮಾಡಿದರು. ಸಿಎಂ ಹಾಗೂ ಜೊತೆಗಿದ್ದ ಸಚಿವರ ಪೈಕಿ ಕೆಲವರು ಮುದ್ದೆ ಕೆಲವರು ಪೂರಿ ಭೋಜನ ಸವಿದರು.

ನಿನ್ನೆ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಮತ್ತು ಮೊನ್ನೆ ಸೋಮವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗಳು ದೇವೇಗೌಡರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದ್ದಾರೆ.

Published On - 2:12 pm, Wed, 21 September 22

‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ