AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾ ಪಂಚಾಯಿತ್​ ಸಿಇಒಗಳ ಜತೆ ಸಿಎಂ ಬೊಮ್ಮಾಯಿ ಸಭೆ; ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ

ಝಡ್​ಪಿ ಸಿಇಓಗಳಿಗೆ ಸಿಎಂ ಬೊಮ್ಮಾಯಿ ಬಿಸಿ ಮುಟ್ಟಿಸಿದ್ದು, ಅತ್ಯಂತ ಯೋಜನಾಬದ್ಧ ವೈಜ್ಞಾನಿಕ ದಾರಿಯಲ್ಲಿ ಸಾಗುತ್ತಿದ್ದೇವೆ. ಬೇರೆಯವರ ತರಹವೇ ನನ್ನ ಆಡಳಿತ ಅಂದುಕೊಳ್ಳಬೇಡಿ. ನನ್ನ ಸ್ಟೈಲೇ ಬೇರೆ, ಹೇಳೋರು ಕೇಳೋರೂ ಯಾರೂ ಇಲ್ಲ ಅಂದುಕೊಂಡಿದ್ದೀರಾ?

ಜಿಲ್ಲಾ ಪಂಚಾಯಿತ್​ ಸಿಇಒಗಳ ಜತೆ ಸಿಎಂ ಬೊಮ್ಮಾಯಿ ಸಭೆ; ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:May 09, 2022 | 12:36 PM

Share

ಬೆಂಗಳೂರು: ಅಧಿಕಾರ ವಿಕೇಂದ್ರೀಕರಣ ಸರಿಯಾಗಿ ಆಗುವಂತೆ ನೋಡಿಕೊಳ್ಳಿ. ಕೆಳ ಹಂತದ ಅಧಿಕಾರಿಗಳ ಮೇಲೆ ನಿಯಂತ್ರಣ ಇಟ್ಟುಕೊಳ್ಳಿ. ಪಿಡಿಒಗಳನ್ನು ಹದ್ದುಬಸ್ತಿನಲ್ಲಿ ಇಡಲು ಸಿಎಂ (CM) ಬೊಮ್ಮಾಯಿ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತ್​ ಸಿಇಒಗಳ ಜತೆ ಸಮಲೋಚನೆ ಸಭೆಯಲ್ಲಿ ಸಿಇಒಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಮೊದಲು ನೀವು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಸಿಇಒಗಳೇ ಗ್ರಾಮಗಳಿಗೆ ಹೋಗಲ್ಲ, ಪಿಡಿಒಗಳು ನಿಮಗೆ ಹೆದರಲ್ಲ. ಎಷ್ಟು ಜನ ಗ್ರಾ.ಪಂ.ಗಳಿಗೆ ಹೋಗಿ ಪರಿಶೀಲನೆ ಮಾಡಿದ್ದೀರಾ? ಎಷ್ಟು ಜನ ಫಲಾನುಭವಿಗಳ ಪಟ್ಟಿ ಆಯ್ಕೆ ಮಾಡಿದ್ದೀರಾ? ನಾಲ್ಕು ತಿಂಗಳ ಕೆಲಸವನ್ನು 12 ತಿಂಗಳು ಮಾಡುತ್ತೀರಿ. ಇವತ್ತಿನಿಂದ ಬದಲಾವಣೆ ಕಾರ್ಯ ಆರಂಭ ಆಗಬೇಕು. ಜನರಿಗೆ ವಿಶ್ವಾಸ ಬರುವಂತೆ ಕೆಲಸ ಮಾಡಿ. ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಝಡ್​ಪಿ ಸಿಇಓಗಳಿಗೆ ಸಿಎಂ ಬೊಮ್ಮಾಯಿ ಬಿಸಿ ಮುಟ್ಟಿಸಿದ್ದು, ಅತ್ಯಂತ ಯೋಜನಾಬದ್ಧ ವೈಜ್ಞಾನಿಕ ದಾರಿಯಲ್ಲಿ ಸಾಗುತ್ತಿದ್ದೇವೆ. ಬೇರೆಯವರ ತರಹವೇ ನನ್ನ ಆಡಳಿತ ಅಂದುಕೊಳ್ಳಬೇಡಿ. ನನ್ನ ಸ್ಟೈಲೇ ಬೇರೆ, ಹೇಳೋರು ಕೇಳೋರೂ ಯಾರೂ ಇಲ್ಲ ಅಂದುಕೊಂಡಿದ್ದೀರಾ? ಐ ಆ್ಯಮ್ ಸೀರಿಯಸ್. ಶಾಲೆಗಳಲ್ಲಿ ಮಕ್ಕಳಿಗೆ ವ್ಯಾಕ್ಸಿನ್ ಹಾಕಿ ಅಂದಿದ್ದೇವೆ. ಎಷ್ಟು ಜನ ಇದನ್ನು ಗಂಭೀರವಾಗಿ ಪರಿಗಣಿಸಿದ್ದೀರಾ? ಒಂದು ಜಿಲ್ಲೆಯಲ್ಲಿ 3 ಲಕ್ಷ ಮಕ್ಕಳಿದ್ದಾರೆ. ನಾಳೆ ಮಕ್ಕಳಿಗೆ ಏನಾದರೂ ಅದರೆ ಯಾರು ಜವಾಬ್ದಾರಿ? ಸೋಷಿಯಲ್ ಮತ್ತು ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವುದು ನಿಮ್ಮ ಜವಾಬ್ದಾರಿ. ಮಕ್ಕಳ ಅಪೌಷ್ಟಿಕತೆ ವಿಚಾರವಾಗಿ ಹೈದ್ರಾಬಾದ್ ಕರ್ನಾಟಕ ಭಾಗದ ಸಿಇಓಗಳಿಗೆ ತರಾಟೆ ತೆಗೆದುಕೊಂಡರು. ಶಿಶು ತಾಯಿ ಮರಣ ಪ್ರಮಾಣ, ಅಪೌಷ್ಟಿಕತೆ ಬಗ್ಗೆ ಯಾಕೆ ಪರಿಹಾರ ಸಿಗ್ತಿಲ್ಲ? 30 ವರ್ಷಗಳಿಂದ ನಿರಂತರ ಯೋಜನೆ ಜಾರಿಯಲ್ಲಿದ್ರೂ ಯಾಕೆ ಸಮಸ್ಯೆ ಬಗೆಹರಿದಿಲ್ಲ ಎಂದು ಪ್ರಶ್ನಿಸಿದರು.

ಬಡವರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಯಾವಾಗಲು ಸಿದ್ಧ. ಬಡವರ ಕಷ್ಟಕ್ಕೆ ಸಹಕರಿಸುವುದೇ ನಮ್ಮ ಮೊದಲ ಆದ್ಯತೆ. ಜನಸಾಮಾನ್ಯರಿಗೂ ಕೂಡ ಆಡಳಿತದಲ್ಲಿ ಬದಲಾವಣೆಯಾಗುವುದು ತಿಳಿಯಬೇಕು. ನಾವು ಒಂದು ತಂಡವಾಗಿ ಕೆಲಸ ಮಾಡಿದರೇ ಮಾತ್ರ ನಮ್ಮ ಕಲ್ಪನೆಯ ನವ ಕರ್ನಾಟಕ ನಿರ್ಮಾಣವಾಲು ಸಾಧ್ಯವೆಂದು ಬಸವರಾಜ ಬೊಮ್ಮಾಯಿ ಹೇಳಿದರು. ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರ್​ ಅಶೋಕ್, ಸಿ.ಸಿ ಪಾಟೀಲ್, ಕೆ.ಸಿ.ನಾರಾಯಣಗೌಡ, ಕೆ.ಗೋಪಾಲಯ್ಯ, ಬಿ.ಸಿ.ನಾಗೇಶ್, ಬಿ.ಸಿ ಪಾಟೀಲ್, ಸುನೀಲ್ ಕುಮಾರ್ , ಪ್ರಭು ಚೌಹಾಣ್, ಉಮೇಶ್ ಕತ್ತಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:24 pm, Mon, 9 May 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ