AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರ ದೆಹಲಿಗೆ ಹಾರಲಿರುವ ಸಿಎಂ ಬೊಮ್ಮಾಯಿ; ಬಜೆಟ್ ಕುರಿತು ವರಿಷ್ಠರ ಜೊತೆ ಚರ್ಚೆ

ಬೊಮ್ಮಾಯಿ ನಾಳೆ ದೆಹಲಿಗೆ ಹೋಗುವ ಸಾಧ್ಯತೆಯಿತ್ತು. ಆದರೆ ಸೋಮವಾರ ದೆಹಲಿಗೆ ಹೋಗುತ್ತೇನೆ ಅಂತ ಸಿಎಂ ಬೊಮ್ಮಾಯಿ ತಿಳಿಸಿದರು. ನಮ್ಮ ಸಂಸದರ ಮನವಿ ಮೇರೆಗೆ ಸೋಮವಾರ ಹೋಗುವೆ ಎಂದರು.

ಸೋಮವಾರ ದೆಹಲಿಗೆ ಹಾರಲಿರುವ ಸಿಎಂ ಬೊಮ್ಮಾಯಿ; ಬಜೆಟ್ ಕುರಿತು ವರಿಷ್ಠರ ಜೊತೆ ಚರ್ಚೆ
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: sandhya thejappa|

Updated on:Feb 02, 2022 | 1:13 PM

Share

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸೋಮವಾರ (ಫೆ.07) ದೆಹಲಿಗೆ (Delhi) ತೆರಳುತ್ತಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ (PM Modi) ಭೇಟಿಗೆ ಸಮಯ ಕೇಳಿದ್ದ ಸಿಎಂ ಬೊಮ್ಮಾಯಿ, ಸಮಯ ನೀಡಿದರೆ ನಾಳೆ ದೆಹಲಿಗೆ ತೆರಳುತ್ತಾರೆ. ದೆಹಲಿಗೆ ಹೋದರೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚೆ ನಡೆಸಬಹುದು. ಅಂತಾರಾಜ್ಯ ಜಲ ವಿವಾದಗಳ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆಯಿದೆ. ಅಲ್ಲದೆ ದೆಹಲಿ ಭೇಟಿಯ ವೇಳೆ ಸಂಸದರ ಜೊತೆ ಮಾತುಕತೆ ನಡೆಸಿ, ರಾಜ್ಯ ಬಜೆಟ್ಗೂ ಮುನ್ನ ವರಿಷ್ಠರ ಜತೆ ಚರ್ಚಿಸಬಹುದು.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸೋಮವಾರ ಬೆಳಗ್ಗೆ ದೆಹಲಿಗೆ ಹೋಗುತ್ತೇನೆ. ಫೆಬ್ರವರಿ 7ರಿಂದ ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತೇನೆ. ವಿವಿಧ ಇಲಾಖೆಗಳ ಜೊತೆ ಸಭೆ ನಡೆಸಲಾಗುವುದು. ಬಜೆಟ್​ಗೂ ಮುನ್ನ ಸಂಸದರ ಜೊತೆ ಸಭೆ ನಡೆಸುತ್ತೇನೆ. ಜಲ ವಿವಾದ ಸಂಬಂಧ ವಕೀಲರ ಜತೆ ಚರ್ಚಿಸುತ್ತೇನೆ. ಸಚಿವ ಸಂಪುಟದ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡಲ್ಲ. ಪಕ್ಷದ ನಾಯಕರು, ಸಚಿವರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡಿದಾಗ ದೆಹಲಿಗೆ ಹೋಗಿ ಚರ್ಚೆ ಮಾಡುವೆ ಅಂತ ತಿಳಿಸಿದರು.

ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಬಜೆಟ್ ಬಗ್ಗೆ ಗೊಂದಲವೇನಿಲ್ಲ. ರಾಜ್ಯದಲ್ಲೂ ಬಜೆಟ್ ಬಗ್ಗೆ ಬೇರೆ ಬೇರೆ ಇಲಾಖೆ ಜೊತೆಗೆ ಮಾತನಾಡುತ್ತಿದ್ದೇನೆ. ಎಲ್ಲರ ಅಭಿಪ್ರಾಯ ತೆಗೆದುಕೊಂಡು ಬಜೆಟ್ ಮಾಡುತ್ತೇವೆ. ಸಂಸದರ ಜೊತೆ ಬಜೆಟ್ ಪೂರ್ವ ಸಭೆ ಮಾಡಿ ಚರ್ಚೆ ಮಾಡಲಾಗುವುದು. ಅಂತರ್ ರಾಜ್ಯ ಜಲವಿವಾದಗಳ ಬಗ್ಗೆ ವಕೀಲರ ಜೊತೆ ಚರ್ಚೆಸುತ್ತೇನೆ ಎಂದು ಹೇಳಿದರು.

ಸೋಮವಾರ ದೆಹಲಿಗೆ: ಬೊಮ್ಮಾಯಿ ನಾಳೆ ದೆಹಲಿಗೆ ಹೋಗುವ ಸಾಧ್ಯತೆಯಿತ್ತು. ಆದರೆ ಸೋಮವಾರ ದೆಹಲಿಗೆ ಹೋಗುತ್ತೇನೆ ಅಂತ ಸಿಎಂ ಬೊಮ್ಮಾಯಿ ತಿಳಿಸಿದರು. ನಮ್ಮ ಸಂಸದರ ಮನವಿ ಮೇರೆಗೆ ಸೋಮವಾರ ಹೋಗುವೆ. ನಾಳೆ ತೆರಳಲು ನಿರ್ಧರಿಸಿದ್ದೆ ಆದರೆ ಸೋಮವಾರ ಹೋಗುವೆ ಅಂತ ಹೇಳಿದ್ದಾರೆ.

ಇದನ್ನೂ ಓದಿ

ಮೈಸೂರು: 45ನೇ ಬ್ಯಾಚ್ ಪೊಲೀಸ್​ ಸಬ್​ಇನ್ಸ್​ಪೆಕ್ಟರ್​ಗಳ ನಿರ್ಗಮನ ಪಥಸಂಚಲನ; ಯಾರೆಲ್ಲಾ ಆಯ್ಕೆಯಾಗಿದ್ದಾರೆ ಗೊತ್ತಾ?

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್ ಕಾರ್ಯಕ್ಕೆ ಬಿಗ್​ ಸೆಲ್ಯೂಟ್!

Published On - 11:30 am, Wed, 2 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ