AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ಭೇಟಿ ನೀಡಲಿದ್ದಾರೆ; ಕಾರಣ ಇಲ್ಲಿದೆ

ಕಾಂಗ್ರೆಸ್ ಪಕ್ಷದವರು ಏನೇ ಮಾಡಿದರೂ ಮಾತನಾಡುತ್ತಾರೆ. ಅಮೃತ್ ಪೌಲ್ ವರ್ಗಾವಣೆ ಅದೊಂದು ರೊಟೀನ್ ಪ್ರೋಸೆಸ್. ಬೇರೆ ಬೇರೆ ಎಡಿಜಿಪಿಗಳ ವರ್ಗಾವಣೆ ಕೂಡ ಇತ್ತು.

ಸಿಎಂ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ಭೇಟಿ ನೀಡಲಿದ್ದಾರೆ; ಕಾರಣ ಇಲ್ಲಿದೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Apr 28, 2022 | 11:37 AM

Share

ಬೆಂಗಳೂರು: ಸಚಿವ ಸಂಪುಟ ಬದಲಾವಣೆ ಚರ್ಚೆ ಬೆನ್ನಲ್ಲೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನಾಳೆ (ಏಪ್ರಿಲ್ 29) ದೆಹಲಿಗೆ ತೆರಳುತ್ತಾರೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ, ನಾಳೆ ಸಂಜೆ ದೆಹಲಿಗೆ (Delhi) ಹೋಗುತ್ತಿದ್ದೇನೆ. ಹೈಕಮಾಂಡ್ (Hicommand) ನಾಯಕರ ಭೇಟಿ ಉದ್ದೇಶದಿಂದ ತೆರಳುತ್ತಿಲ್ಲ. ಎಲ್ಲಾ ರಾಜ್ಯಗಳ ಸಿಜೆಗಳು, ಸಿಎಂಗಳ ಸಭೆಯಲ್ಲಿ ಭಾಗಿಯಾಗುವೆ. ಏಪ್ರಿಲ್ 30ರಂದು ನಡೆಯುವ ಸಭೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದೇನೆ ಎಂದು ಹೇಳಿದರು.

ನಂತರ ಮಾತನಾಡಿದ ಬೊಮ್ಮಾಯಿ, 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಿಐಡಿ ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ ಸಾಮಾನ್ಯ ಪ್ರಕ್ರಿಯೆ. ಕಾಂಗ್ರೆಸ್ ಪಕ್ಷದವರು ಏನೇ ಮಾಡಿದರೂ ಮಾತನಾಡುತ್ತಾರೆ. ಅಮೃತ್ ಪೌಲ್ ವರ್ಗಾವಣೆ ಅದೊಂದು ರೊಟೀನ್ ಪ್ರೋಸೆಸ್. ಬೇರೆ ಬೇರೆ ಎಡಿಜಿಪಿಗಳ ವರ್ಗಾವಣೆ ಕೂಡ ಇತ್ತು. ಅಮೃತ್ ಪೌಲ್ ವರ್ಗಾವಣೆ ಅದೊಂದು ಸಹಜವಾದ ಪ್ರಕ್ರಿಯೆ ಎಂದು ತಿಳಿಸಿದರು.

ಬೆಳಗಾವಿಗೆ ಆಗಮಿಸಲಿರುವ ಬೊಮ್ಮಾಯಿ: ಸಿಎಂ ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿಗ್ಗಾವಿಯಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ಆಗಮಿಸುತ್ತಾರೆ. ಮಧ್ಯಾಹ್ನ 3.30ಕ್ಕೆ ಜಗನ್ನಾಥರಾವ್ ಜೋಶಿ ಜನ್ಮಶತಾಬ್ದಿ ಸ್ಮಾರಕ ಭವನ ಭೂಮಿಪೂಜೆಯಲ್ಲಿ ಭಾಗಿಯಾಗುತ್ತಾರೆ. ಜನಕಲ್ಯಾಣ ಟ್ರಸ್ಟ್ ವತಿಯಿಂದ ಬೆಳಗಾವಿಯ ಶಾಸ್ತ್ರೀನಗರದ ಸಂಘ ಸದನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳುತ್ತಾರೆ. ಸಂಜೆ 5.40ಕ್ಕೆ ಸಾಂಬ್ರಾ ಏರ್​ಪೋರ್ಟ್​ನಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಇನ್ನು ಬೊಮ್ಮಾಯಿ ಇಂದು ಹಾವೇರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮುನವಳ್ಳಿ ಬಳಿ ಸಿದ್ಧ ಉಡುಪು ತಯಾರಿಕಾ ಘಟಕಕ್ಕೆ ಭೂಮಿ ಪೂಜೆ ನೆರವೇರಿಸುತ್ತಾರೆ. ಮಧ್ಯಾಹ್ನ 12 ಗಂಟೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಅರೆಬೈಲ್​ ಶಿವರಾಂ ಹೆಬ್ಬಾರ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1.30ಕ್ಕೆ ರಸ್ತೆ ಮಾರ್ಗವಾಗಿ ಸಿಎಂ ಹುಬ್ಬಳ್ಳಿಗೆ ಪ್ರಯಾಣ ಮಾಡುತ್ತಾರೆ.

ಇದನ್ನೂ ಓದಿ

ತಾಯಿಯ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ನಟಿ ತಾರಾ ಅನುರಾಧ; ಇಲ್ಲಿದೆ ವಿಡಿಯೋ

World Day of Safety and Health at Work 2022: ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಆರೋಗ್ಯದ ಅಂತರಾಷ್ಟ್ರೀಯ ದಿನ ಇಂದು; ಏನಿದರ ಮಹತ್ವ?

Published On - 10:32 am, Thu, 28 April 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ