AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ಭೇಟಿ ನೀಡಲಿದ್ದಾರೆ; ಕಾರಣ ಇಲ್ಲಿದೆ

ಕಾಂಗ್ರೆಸ್ ಪಕ್ಷದವರು ಏನೇ ಮಾಡಿದರೂ ಮಾತನಾಡುತ್ತಾರೆ. ಅಮೃತ್ ಪೌಲ್ ವರ್ಗಾವಣೆ ಅದೊಂದು ರೊಟೀನ್ ಪ್ರೋಸೆಸ್. ಬೇರೆ ಬೇರೆ ಎಡಿಜಿಪಿಗಳ ವರ್ಗಾವಣೆ ಕೂಡ ಇತ್ತು.

ಸಿಎಂ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ಭೇಟಿ ನೀಡಲಿದ್ದಾರೆ; ಕಾರಣ ಇಲ್ಲಿದೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Apr 28, 2022 | 11:37 AM

Share

ಬೆಂಗಳೂರು: ಸಚಿವ ಸಂಪುಟ ಬದಲಾವಣೆ ಚರ್ಚೆ ಬೆನ್ನಲ್ಲೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನಾಳೆ (ಏಪ್ರಿಲ್ 29) ದೆಹಲಿಗೆ ತೆರಳುತ್ತಾರೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ, ನಾಳೆ ಸಂಜೆ ದೆಹಲಿಗೆ (Delhi) ಹೋಗುತ್ತಿದ್ದೇನೆ. ಹೈಕಮಾಂಡ್ (Hicommand) ನಾಯಕರ ಭೇಟಿ ಉದ್ದೇಶದಿಂದ ತೆರಳುತ್ತಿಲ್ಲ. ಎಲ್ಲಾ ರಾಜ್ಯಗಳ ಸಿಜೆಗಳು, ಸಿಎಂಗಳ ಸಭೆಯಲ್ಲಿ ಭಾಗಿಯಾಗುವೆ. ಏಪ್ರಿಲ್ 30ರಂದು ನಡೆಯುವ ಸಭೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದೇನೆ ಎಂದು ಹೇಳಿದರು.

ನಂತರ ಮಾತನಾಡಿದ ಬೊಮ್ಮಾಯಿ, 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಿಐಡಿ ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ ಸಾಮಾನ್ಯ ಪ್ರಕ್ರಿಯೆ. ಕಾಂಗ್ರೆಸ್ ಪಕ್ಷದವರು ಏನೇ ಮಾಡಿದರೂ ಮಾತನಾಡುತ್ತಾರೆ. ಅಮೃತ್ ಪೌಲ್ ವರ್ಗಾವಣೆ ಅದೊಂದು ರೊಟೀನ್ ಪ್ರೋಸೆಸ್. ಬೇರೆ ಬೇರೆ ಎಡಿಜಿಪಿಗಳ ವರ್ಗಾವಣೆ ಕೂಡ ಇತ್ತು. ಅಮೃತ್ ಪೌಲ್ ವರ್ಗಾವಣೆ ಅದೊಂದು ಸಹಜವಾದ ಪ್ರಕ್ರಿಯೆ ಎಂದು ತಿಳಿಸಿದರು.

ಬೆಳಗಾವಿಗೆ ಆಗಮಿಸಲಿರುವ ಬೊಮ್ಮಾಯಿ: ಸಿಎಂ ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿಗ್ಗಾವಿಯಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ಆಗಮಿಸುತ್ತಾರೆ. ಮಧ್ಯಾಹ್ನ 3.30ಕ್ಕೆ ಜಗನ್ನಾಥರಾವ್ ಜೋಶಿ ಜನ್ಮಶತಾಬ್ದಿ ಸ್ಮಾರಕ ಭವನ ಭೂಮಿಪೂಜೆಯಲ್ಲಿ ಭಾಗಿಯಾಗುತ್ತಾರೆ. ಜನಕಲ್ಯಾಣ ಟ್ರಸ್ಟ್ ವತಿಯಿಂದ ಬೆಳಗಾವಿಯ ಶಾಸ್ತ್ರೀನಗರದ ಸಂಘ ಸದನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳುತ್ತಾರೆ. ಸಂಜೆ 5.40ಕ್ಕೆ ಸಾಂಬ್ರಾ ಏರ್​ಪೋರ್ಟ್​ನಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಇನ್ನು ಬೊಮ್ಮಾಯಿ ಇಂದು ಹಾವೇರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮುನವಳ್ಳಿ ಬಳಿ ಸಿದ್ಧ ಉಡುಪು ತಯಾರಿಕಾ ಘಟಕಕ್ಕೆ ಭೂಮಿ ಪೂಜೆ ನೆರವೇರಿಸುತ್ತಾರೆ. ಮಧ್ಯಾಹ್ನ 12 ಗಂಟೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಅರೆಬೈಲ್​ ಶಿವರಾಂ ಹೆಬ್ಬಾರ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1.30ಕ್ಕೆ ರಸ್ತೆ ಮಾರ್ಗವಾಗಿ ಸಿಎಂ ಹುಬ್ಬಳ್ಳಿಗೆ ಪ್ರಯಾಣ ಮಾಡುತ್ತಾರೆ.

ಇದನ್ನೂ ಓದಿ

ತಾಯಿಯ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ನಟಿ ತಾರಾ ಅನುರಾಧ; ಇಲ್ಲಿದೆ ವಿಡಿಯೋ

World Day of Safety and Health at Work 2022: ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಆರೋಗ್ಯದ ಅಂತರಾಷ್ಟ್ರೀಯ ದಿನ ಇಂದು; ಏನಿದರ ಮಹತ್ವ?

Published On - 10:32 am, Thu, 28 April 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!