Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ಭೇಟಿ ನೀಡಲಿದ್ದಾರೆ; ಕಾರಣ ಇಲ್ಲಿದೆ

ಕಾಂಗ್ರೆಸ್ ಪಕ್ಷದವರು ಏನೇ ಮಾಡಿದರೂ ಮಾತನಾಡುತ್ತಾರೆ. ಅಮೃತ್ ಪೌಲ್ ವರ್ಗಾವಣೆ ಅದೊಂದು ರೊಟೀನ್ ಪ್ರೋಸೆಸ್. ಬೇರೆ ಬೇರೆ ಎಡಿಜಿಪಿಗಳ ವರ್ಗಾವಣೆ ಕೂಡ ಇತ್ತು.

ಸಿಎಂ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ಭೇಟಿ ನೀಡಲಿದ್ದಾರೆ; ಕಾರಣ ಇಲ್ಲಿದೆ
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: Digi Tech Desk

Updated on:Apr 28, 2022 | 11:37 AM

ಬೆಂಗಳೂರು: ಸಚಿವ ಸಂಪುಟ ಬದಲಾವಣೆ ಚರ್ಚೆ ಬೆನ್ನಲ್ಲೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನಾಳೆ (ಏಪ್ರಿಲ್ 29) ದೆಹಲಿಗೆ ತೆರಳುತ್ತಾರೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ, ನಾಳೆ ಸಂಜೆ ದೆಹಲಿಗೆ (Delhi) ಹೋಗುತ್ತಿದ್ದೇನೆ. ಹೈಕಮಾಂಡ್ (Hicommand) ನಾಯಕರ ಭೇಟಿ ಉದ್ದೇಶದಿಂದ ತೆರಳುತ್ತಿಲ್ಲ. ಎಲ್ಲಾ ರಾಜ್ಯಗಳ ಸಿಜೆಗಳು, ಸಿಎಂಗಳ ಸಭೆಯಲ್ಲಿ ಭಾಗಿಯಾಗುವೆ. ಏಪ್ರಿಲ್ 30ರಂದು ನಡೆಯುವ ಸಭೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದೇನೆ ಎಂದು ಹೇಳಿದರು.

ನಂತರ ಮಾತನಾಡಿದ ಬೊಮ್ಮಾಯಿ, 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಿಐಡಿ ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ ಸಾಮಾನ್ಯ ಪ್ರಕ್ರಿಯೆ. ಕಾಂಗ್ರೆಸ್ ಪಕ್ಷದವರು ಏನೇ ಮಾಡಿದರೂ ಮಾತನಾಡುತ್ತಾರೆ. ಅಮೃತ್ ಪೌಲ್ ವರ್ಗಾವಣೆ ಅದೊಂದು ರೊಟೀನ್ ಪ್ರೋಸೆಸ್. ಬೇರೆ ಬೇರೆ ಎಡಿಜಿಪಿಗಳ ವರ್ಗಾವಣೆ ಕೂಡ ಇತ್ತು. ಅಮೃತ್ ಪೌಲ್ ವರ್ಗಾವಣೆ ಅದೊಂದು ಸಹಜವಾದ ಪ್ರಕ್ರಿಯೆ ಎಂದು ತಿಳಿಸಿದರು.

ಬೆಳಗಾವಿಗೆ ಆಗಮಿಸಲಿರುವ ಬೊಮ್ಮಾಯಿ: ಸಿಎಂ ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿಗ್ಗಾವಿಯಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ಆಗಮಿಸುತ್ತಾರೆ. ಮಧ್ಯಾಹ್ನ 3.30ಕ್ಕೆ ಜಗನ್ನಾಥರಾವ್ ಜೋಶಿ ಜನ್ಮಶತಾಬ್ದಿ ಸ್ಮಾರಕ ಭವನ ಭೂಮಿಪೂಜೆಯಲ್ಲಿ ಭಾಗಿಯಾಗುತ್ತಾರೆ. ಜನಕಲ್ಯಾಣ ಟ್ರಸ್ಟ್ ವತಿಯಿಂದ ಬೆಳಗಾವಿಯ ಶಾಸ್ತ್ರೀನಗರದ ಸಂಘ ಸದನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳುತ್ತಾರೆ. ಸಂಜೆ 5.40ಕ್ಕೆ ಸಾಂಬ್ರಾ ಏರ್​ಪೋರ್ಟ್​ನಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಇನ್ನು ಬೊಮ್ಮಾಯಿ ಇಂದು ಹಾವೇರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮುನವಳ್ಳಿ ಬಳಿ ಸಿದ್ಧ ಉಡುಪು ತಯಾರಿಕಾ ಘಟಕಕ್ಕೆ ಭೂಮಿ ಪೂಜೆ ನೆರವೇರಿಸುತ್ತಾರೆ. ಮಧ್ಯಾಹ್ನ 12 ಗಂಟೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಅರೆಬೈಲ್​ ಶಿವರಾಂ ಹೆಬ್ಬಾರ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1.30ಕ್ಕೆ ರಸ್ತೆ ಮಾರ್ಗವಾಗಿ ಸಿಎಂ ಹುಬ್ಬಳ್ಳಿಗೆ ಪ್ರಯಾಣ ಮಾಡುತ್ತಾರೆ.

ಇದನ್ನೂ ಓದಿ

ತಾಯಿಯ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ನಟಿ ತಾರಾ ಅನುರಾಧ; ಇಲ್ಲಿದೆ ವಿಡಿಯೋ

World Day of Safety and Health at Work 2022: ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಆರೋಗ್ಯದ ಅಂತರಾಷ್ಟ್ರೀಯ ದಿನ ಇಂದು; ಏನಿದರ ಮಹತ್ವ?

Published On - 10:32 am, Thu, 28 April 22

ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ