AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸದ್ಯಕ್ಕೆ ಲಾಕ್​ಡೌನ್ ಇಲ್ಲ; ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಲಾಕ್​ಡೌನ್​ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ. ಸದ್ಯ ಜನಜೀವನ ಹೇಗಿದೆಯೋ ಹಾಗೆಯೇ ನಡೆಯುತ್ತದೆ. ಹೆಚ್ಚು ಜನರು ಸೇರುವಲ್ಲಿ ಜನರು ಜಾಗೃತಿಯಿಂದ ಇರಬೇಕು ಅಂತ ಅವರು ಸೂಚಿಸಿದರು.

ಕರ್ನಾಟಕದಲ್ಲಿ ಸದ್ಯಕ್ಕೆ ಲಾಕ್​ಡೌನ್ ಇಲ್ಲ; ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: sandhya thejappa|

Updated on:Nov 30, 2021 | 12:59 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಬಗ್ಗೆ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯ ಮತ್ತೆ ಲಾಕ್​ಡೌನ್​ (Lockdown) ಆಗುತ್ತಾ ಎಂಬ ಭೀತಿ ಶುರುವಾಗಿದೆ. ಸದ್ಯಕ್ಕೆ ಲಾಕ್​ಡೌನ್​ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಅಂತ ಸಿಎಂ ಬೊಮ್ಮಾಯಿ (Basavaraj Bommai) ಸ್ಪಷ್ಟನೆ ನೀಡಿದ್ದಾರೆ. ಒಮಿಕ್ರಾನ್ (Omicron) ಪರಿಣಾಮದ ಬಗ್ಗೆ ಗಮನಿಸುತ್ತಿದ್ದೇವೆ. ಈಗಿರುವ ಡೆಲ್ಟಾ ತಳಿ ಪ್ರಕರಣವೂ ಅಲ್ಲಲ್ಲಿ ಕಾಣಿಸುತ್ತಿದೆ. ಹೆಚ್ಚಿನ ಮಾಹಿತಿ ಪಡೆಯಲು ಎನ್​ಸಿಬಿಎಸ್​ಗೆ (NCBS) ಕಳುಹಿಸುತ್ತಿದ್ದೇವೆ. ವಿದೇಶಿ ಪ್ರಯಾಣಿಕರ ಮೇಲೆ ಹೆಚ್ಚು ನಿಗಾವಹಿಸಲಾಗಿದೆ ಅಂತ ಸಿಎಂ ತಿಳಿಸಿದ್ದಾರೆ.

ಕ್ಲಸ್ಟರ್​ನಲ್ಲಿರುವ ಎಲ್ಲರಿಗೂ ತಪಾಸಣೆ ಮಾಡಲಾಗುತ್ತಿದೆ. ಎಸ್ಡಿಎಂನಲ್ಲಿ 4,000ಕ್ಕೂ ಹೆಚ್ಚು ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ. ರಾಜ್ಯದಲ್ಲಿ ಕೊವಿಡ್ ಟೆಸ್ಟಿಂಗ್ ಹೆಚ್ಚಿಸಲು ಸೂಚಿಸಲಾಗಿದೆ. ಆರೋಗ್ಯ ಸಚಿವರು ಕೊವಿಡ್ ಸಂಬಂಧ ಸಭೆ ಮಾಡುತ್ತಾರೆ. ಬಳಿಕ ಅದರ ಬಗ್ಗೆ ನನ್ನ ಜತೆ ಚರ್ಚಿಸುತ್ತಾರೆ ಅಂತ ಬಸವರಾಜ ಬೊಮ್ಮಾಯಿ ಹೇಳಿದರು.

ಲಾಕ್​ಡೌನ್​ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ. ಸದ್ಯ ಜನಜೀವನ ಹೇಗಿದೆಯೋ ಹಾಗೆಯೇ ನಡೆಯುತ್ತದೆ. ಹೆಚ್ಚು ಜನರು ಸೇರುವಲ್ಲಿ ಜನರು ಜಾಗೃತಿಯಿಂದ ಇರಬೇಕು ಅಂತ ಅವರು ಸೂಚಿಸಿದರು.

ಬೆಳಗಾವಿ ಅಧಿವೇಶನಕ್ಕೆ ಒಮಿಕ್ರಾನ್ ವೈರಸ್ ಆತಂಕದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಸಭೆ ಸಮಾರಂಭಕ್ಕೆ ಅನ್ವಯಿಸುವ ನಿಯಮಗಳು ಅಧಿವೇಶನಕ್ಕೂ ಅನ್ವಯಿಸುತ್ತವೆ ಎಂದಿದ್ದಾರೆ.

ಇದನ್ನೂ ಓದಿ

Google Play Best Apps 2021: ಈ ವರ್ಷದ ಬೆಸ್ಟ್​​ ಆ್ಯಪ್ಸ್​​​, ಗೇಮ್ಸ್​ ಯಾವುದು?; ಗೂಗಲ್ ಪ್ಲೇಯಿಂದ ಪಟ್ಟಿ ಬಿಡುಗಡೆ

ಪತ್ನಿ ನೇತ್ರಾಳಿಂದ ಹತ್ಯೆಗೊಳಗಾಗಿದ್ದ ಉದ್ಯಮಿ ಸ್ವಾಮಿರಾಜನ್ ಮನೆಯಲ್ಲಿ ಕಳವು; ಮಡದಿ ಜೈಲಿನಲ್ಲೇ ವಾಸ

Published On - 12:51 pm, Tue, 30 November 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ