AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ದಾವೋಸ್​ ಪ್ರಯಾಣ ಬೆಳಸಿರುವ ಸಿಎಂ ಬೊಮ್ಮಾಯಿ, ಎರಡು ದಿನಗಳ ಕಾಲ ನಡೆಯುವ ಆರ್ಥಿಕ ಸಮಾವೇಶದಲ್ಲಿ ಭಾಗಿ

ದುಬೈನ ದಾವೋಸ್​ನಲ್ಲಿ ಮೇ 23, 24 ರಂದು ನಡೆಯುವ ಆರ್ಥಿಕ ಸಮಾವೇಶದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವೋಸ್​ಗೆ ಪ್ರಯಾಣ ಬೆಳಸಿದ್ದಾರೆ.

ಇಂದು ದಾವೋಸ್​ ಪ್ರಯಾಣ ಬೆಳಸಿರುವ ಸಿಎಂ ಬೊಮ್ಮಾಯಿ, ಎರಡು ದಿನಗಳ ಕಾಲ ನಡೆಯುವ ಆರ್ಥಿಕ ಸಮಾವೇಶದಲ್ಲಿ ಭಾಗಿ
ಸಿ ಎಮ್ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:May 22, 2022 | 9:50 AM

Share

ಬೆಂಗಳೂರು: ದುಬೈನ ದಾವೋಸ್​ನಲ್ಲಿ ಮೇ 23, 24 ರಂದು ನಡೆಯುವ ಆರ್ಥಿಕ ಸಮಾವೇಶದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ದಾವೋಸ್​ಗೆ ಪ್ರಯಾಣ ಬೆಳಸಿದ್ದಾರೆ. ತಮ್ಮ ಆರ್ ಟಿ ನಗರ ನಿವಾಸದಿಂದ ಸಚಿವ ಮುರಗೇಶ ನಿರಾಣಿ (Muragesh Nirani), ಪತ್ನಿ ಚೆನ್ನಮ್ಮ ಜತೆ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದತ್ತ ತೆರಳಿದ್ದಾರೆ. ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 10.35ರ ವಿಮಾನದ ಮೂಲಕ ದುಬೈಗೆ ಹೋಗಲಿದ್ದು, ಮಧ್ಯಾಹ್ನ 12.45 ಕ್ಕೆ ದುಬೈಗೆ ತಲುಪಲಿದ್ದಾರೆ. ದುಬೈನಿಂದ ಮಧ್ಯಾಹ್ನ 3.35 ಕ್ಕೆ ಸ್ವಿಟ್ಜರ್ಲೆಂಡ್‌‌ ನ ಜ್ಯೂರಿಚ್ ಗೆ ಪ್ರಯಾಣ ಬೆಳಸಲಿದ್ದಾರೆ. ಅಲ್ಲಿಂದ ರಾತ್ರಿ 8.20 ರಿಂದ ಜ್ಯೂರಿಚ್ ರಸ್ತೆ ಮಾರ್ಗದ ಮೂಲಕ ನಿಂದ ದಾವೋಸ್​ಗೆ ತೆರಳಿರುವ ಸಿಎಂ, ರಾತ್ರಿ 12ಕ್ಕೆ ದಾವೋಸ್ ತಲುಪಲಿದ್ದಾರೆ.

ಇದನ್ನು ಓದಿ: ಬೆಂಗಳೂರಿನ ಯುವ ಜೋಡಿ ಉಡುಪಿಯಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಈ ಕುರಿತು ಬೆಂಗೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಕಳೆದ ತ್ರೈಮಾಸಿಕದಲ್ಲಿ ಭಾರತಕ್ಕೆ ಹೆಚ್ಚಾಗಿ FDI ಹರಿದುಬಂದಿದೆ. ಇದರಲ್ಲಿ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿದೆ ಕರ್ನಾಟಕಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಹೂಡಿಕೆದಾರರು ಬರುತ್ತಿದ್ದಾರೆ. ದಾವೋಸ್​ಗೆ ತೆರಳಲು ಸಿದ್ಧವಾಗಿ ಬಂದಿದ್ದೇನೆ. ನಾಳೆ, ನಾಡಿದ್ದು ದಾವೋಸ್​ನಲ್ಲಿ ನಡೆಯುವ ಆರ್ಥಿಕ ಸಮಾವೇಶದಲ್ಲಿ ಭಾಗಿಯಾಗುತ್ತೇನೆ. ಅಲ್ಲಿನ ಕಾರ್ಯಕ್ರಮಗಳನ್ನು ಮಾಧ್ಯಮಗಳಿಗೆ ನಿರಂತರವಾಗಿ ತಲುಪಿಸ್ತೇವೆ. ಸಮಾವೇಶದಲ್ಲಿ ವಿಶ್ವದ ಅನೇಕ ನಾಯಕರು, ಉದ್ಯಮಿಗಳನ್ನು ಭೇಟಿಯಾಗುತ್ತೇವೆ. ಕೆಲವು ರಾಷ್ಟ್ರೀಯ ಮಾಧ್ಯಮಗಳೂ ಬಂದಿರುತ್ತವೆ. ಉದ್ಯಮಿಗಳಿಗೆ ರಾಜ್ಯದಲ್ಲಿ ಉದ್ಯಮ ಸ್ಥಾಪನೆಗೆ ಇರುವ ವ್ಯವಸ್ಥೆ ಕುರಿತು ವಿವರಿಸುತ್ತೇವೆ. ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದ ಮೇಲೆ ನಿರೀಕ್ಷೆ ಇದೆ ಎಂದರು.

ಇದನ್ನೂ ಓದಿ
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಕರ್ನಾಟಕದ ಹಲವೆಡೆ ಮುಂದುವರಿದ ಮಳೆ; ಅಪಾರ ಬೆಳ ನಾಶಕ್ಕೆ ರೈತರು ಕಂಗಾಲು
Image
3 ಚಿತ್ರಗಳ ಪೋಸ್ಟರ್​ ಒಟ್ಟಿಗೆ ಜೋಡಿಸಿದ ಪ್ರಶಾಂತ್​ ನೀಲ್​; ಫ್ಯಾನ್ಸ್​ ತಲೆಯಲ್ಲಿ ಮೂಡಿದೆ ದೊಡ್ಡ ಪ್ರಶ್ನೆ

ಇದನ್ನು ಓದಿ: ಬೆಂಗಳೂರಿನಲ್ಲಿ ಖಾಸಗಿ ಪೋಟೋಗಳನ್ನ ಪಡೆದು ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪಿ ಅರೆಸ್ಟ್!

ಕರ್ನಾಟಕಕ್ಕೆ ಮತ್ತಷ್ಟು ಬಂಡವಾಳ ಹರಿದು ಬರುವ ನಿರೀಕ್ಷೆಯಿದೆ. ನನ್ನ ಜತೆ ದಾವೋಸ್​ಗೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂಡ ಬರುತ್ತಿದ್ದಾರೆ. ಐಟಿ-ಬಿಟಿ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ (Ashwath Narayan) ಅವರು ಕೂಡ ಬರುತ್ತಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ವಿಚಾರವಾಗಿ ಕೇಂದ್ರ ಸರಕಾರ ನಿನ್ನೆ ರಾತ್ರಿ ತಾನೇ ಸುಂಕ ಇಳಿಕೆ ಮಾಡಿದ್ದಾರೆ. ಇದರ ಬಗ್ಗೆ ನೋಡೋಣ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:50 am, Sun, 22 May 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!