AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಅಗ್ನಿಶಾಮಕರಿಗೆ ಲ್ಯಾಡರ್ ಬಲ: ಬಂದಿದೆ 90 ಮೀಟರ್ ಎತ್ತರ ತಲುಪುವ ಹೊಸ ಏಣಿ

ರಾಜ್ಯ ಸರಕಾರ ಸುಮಾರು 30 ಕೋಟಿ ವೆಚ್ಚದ ಲ್ಯಾಡರ್ ವಾಹನವನ್ನು ಫಿನ್ಲೆಂಡ್‌ ದೇಶದಿಂದ ಖರೀದಿಸಿದೆ. ದೇಶದಲ್ಲಿ ಏರಿಯಲ್ ಲ್ಯಾಡರ್ ವಾಹನ ಹೊಂದಿರುವ ಎರಡನೇ ನಗರ ಬೆಂಗಳೂರು.

ಬೆಂಗಳೂರು ಅಗ್ನಿಶಾಮಕರಿಗೆ ಲ್ಯಾಡರ್ ಬಲ: ಬಂದಿದೆ 90 ಮೀಟರ್ ಎತ್ತರ ತಲುಪುವ ಹೊಸ ಏಣಿ
ಏರಿಯಲ್ ಲ್ಯಾಡರ್ ವಾಹನ
TV9 Web
| Updated By: ಆಯೇಷಾ ಬಾನು|

Updated on:Oct 19, 2022 | 1:24 PM

Share

ಬೆಂಗಳೂರು: ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ನಂದಿಸುವ ಲ್ಯಾಡರ್ ವಾಹನ ಈಗ ಬೆಂಗಳೂರಿಗೆ ಬಂದಿದೆ. ಇದೇ ಮೊದಲ ಬರಿಗೆ ಬೆಂಗಳೂರಿಗೆ ಏರಿಯಲ್ ಲ್ಯಾಡರ್ ವಾಹನ ಪರಿಚರಿಸಲಾಗಿದ್ದು ಈ ವಾಹನದ ಸಹಾಯದಿಂದ 90 ಮೀಟರ್ ಎತ್ತರದ ವರೆಗೂ ತಲುಪಿ ಅಗ್ನಿ ಅವಘಡಗಳು ಸಂಭವಿಸಿದರೆ ಅದನ್ನು ನಂದಿಸಬಹುದು. ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಲೋಕಾರ್ಪಣೆ ಮಾಡಲಿದ್ದಾರೆ.

ರಾಜ್ಯ ಸರಕಾರ ಸುಮಾರು 30 ಕೋಟಿ ವೆಚ್ಚದ ಲ್ಯಾಡರ್ ವಾಹನವನ್ನು ಫಿನ್ಲೆಂಡ್‌ ದೇಶದಿಂದ ಖರೀದಿಸಿದೆ. ಅಗ್ನಿಶಾಮಕ ಇಲಾಖೆ 2020ರಲ್ಲಿ ಏರಿಯಲ್ ಲ್ಯಾಡರ್ ವಾಹನ ಖರೀದಿಗೆ ಮುಂದಾಗಿತ್ತು. ಸದ್ಯ ಈಗ ಖರೀದಿಸಲಾಗಿದ್ದು ನಾಳೆಯೇ ಸರ್ಕಾರ ಏರಿಯಲ್ ಲ್ಯಾಡರ್ ವಾಹನವನ್ನು ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಲಿದ್ದಾರೆ. ಮುಖ್ಯಮಂತ್ರಿಗಳ ಮೂಲಕ ವಾಹನ ಅಗ್ನಿಶಾಮಕ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತೆ. ಇದನ್ನೂ ಓದಿ: ಮಳವಳ್ಳಿ ಬಾಲಕಿಯ ಮನೆಗೆ ನಟಿ ಹರ್ಷಿಕಾ ಪೂಣಚ್ಚ ಭೇಟಿ, ಒಟ್ಟಿಗೆ ಹೋರಾಡೋಣ ಅಂತ ಕುಟುಂಬಕ್ಕೆ ಭರವಸೆ!

ದೇಶದಲ್ಲಿ ಏರಿಯಲ್ ಲ್ಯಾಡರ್ ವಾಹನ ಹೊಂದಿರುವ ಎರಡನೇ ನಗರ ಬೆಂಗಳೂರು. ಈ ಮೊದಲು ಮುಂಬೈ ನಗರದಲ್ಲಿ 90 ಮೀಟರ್ ಎತ್ತರದ ಲ್ಯಾಡರ್ ವಾಹನ ಬಳಕೆ ಮಾಡಲಾಗಿದೆ. ಸದ್ಯ ಇನ್ನುಮುಂದೆ ಬೆಂಗಳೂರಿನಲ್ಲೂ ಈ ವಾಹನ ಬಳಸಲಾಗುತ್ತೆ. ನಗರದಲ್ಲಿ ಹೆಚ್ಚುತ್ತಿರುವ ಬಹುಮಹಡಿ ಕಟ್ಟಡಗಳ ಸಂಖ್ಯೆ ಹಿನ್ನೆಲೆ ಅವಘಡಗಳ ಸಂದರ್ಭದಲ್ಲಿ ಬಳಸಿಕೊಳ್ಳಲು ಅತ್ಯಾಧುನಿಕ ಲ್ಯಾಡರ್ ವಾಹನ ಖರೀದಿಸಲಾಗಿದೆ.

ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಬಲಪಡಿಸಲು ಹತ್ತು ಹಲವು ಕ್ರಮಗಳನ್ನು ತೆಗೆದುಕೊಂಡ ಹಿನ್ನೆಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ ಸುಮಾರು ಎರಡು ಸಾವಿರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಲ್ಲಿ ಅಗ್ನಶಾಮಕದಳದ ಸೇವಾ ಘಟಕಗಳನ್ನು ಹೊಂದಿದ್ದು ಇಲಾಖೆಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.

Published On - 1:24 pm, Wed, 19 October 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್