AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮನವಿ ನನಗೆ ತಲುಪಿದೆ, ನಿಮ್ಮ ಕಳಕಳಿಯನ್ನ ಪ್ರಶಂಸಿಸುತ್ತೇನೆ: ರಾಹುಲ್‌ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ ಬೊಮ್ಮಾಯಿ

ನಾಗರಹೊಳೆ ಸಂರಕ್ಷಿತ ಕಾಡಿನಲ್ಲಿ ಗಾಯಾಳು ಮರಿ ಆನೆಯನ್ನು ಕಂಡು ರಾಹುಲ್ ಗಾಂಧಿ ಮರುಗಿದ್ದು, ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದರು. ಈಗ ಆ ಪತ್ರಕ್ಕೆ ಸಿಎಂ ಬೊಮ್ಮಾಯಿಗೆ ಮರು ಪತ್ರ ಬರೆದಿದ್ದಾರೆ.

ನಿಮ್ಮ ಮನವಿ ನನಗೆ ತಲುಪಿದೆ, ನಿಮ್ಮ ಕಳಕಳಿಯನ್ನ ಪ್ರಶಂಸಿಸುತ್ತೇನೆ: ರಾಹುಲ್‌ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ, ರಾಹುಲ್‌ ಗಾಂಧಿ
TV9 Web
| Edited By: |

Updated on:Oct 06, 2022 | 8:11 PM

Share

ಬೆಂಗಳೂರು: ನಿಮ್ಮ ಮನವಿ ನನಗೆ ತಲುಪಿದೆ, ನಿಮ್ಮ ಕಳಕಳಿಯನ್ನ ಪ್ರಶಂಸಿಸುತ್ತೇನೆ. ಈಗಾಗಲೇ ಅಧಿಕಾರಿಗಳು ಮರಿ ಆನೆಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ರಾಹುಲ್‌ಗಾಂಧಿ (Rahul Gandhi) ಮನವಿ ಪತ್ರಕ್ಕೆ ಸಿಎಂ ಬೊಮ್ಮಾಯಿ ಸ್ಪಂದಿಸಿದ್ದಾರೆ. ಕ್ರೂರ ಪ್ರಾಣಿಗಳ ದಾಳಿಗೆ ಒಳಗಾಗಿ ಮರಿ ಆನೆಗೆ ಗಾಯವಾಗಿದೆ. ಗಾಯಾಳು ಮರಿ ಆನೆ ಸದ್ಯ ತಾಯಿಯ ಹಾಲಿನ ಆರೈಕೆಯಲ್ಲಿದೆ. ಈ ಹಂತದಲ್ಲಿ ತಾಯಿಯನ್ನು ಬೇರ್ಪಡಿಸಿ ಚಿಕಿತ್ಸೆ ನೀಡುವುದು ಕಷ್ಟ. ಅಗತ್ಯ ಚಿಕಿತ್ಸೆ ನೀಡಿ ಆರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿರುವೆ. ತಾಯಿ ಜತೆ ಮರಿ ಆನೆಯನ್ನು ತೀವ್ರ ನಿಗಾವಹಿಸಿ ನೋಡಿಕೊಳುತ್ತಿದ್ದಾರೆ. ನಾಗರಹೊಳೆ ಸಂರಕ್ಷಿತ ಕಾಡಿನಲ್ಲಿ ಗಾಯಾಳು ಮರಿ ಆನೆ ನೋಡಿದ್ದರು. ಮರಿ ಆನೆ ಕಾಪಾಡಿ ಅಂತಾ ನಿನ್ನೆ ಸಿಎಂಗೆ ರಾಹುಲ್ ಪತ್ರ ಬರೆದಿದ್ದರು. ಜೊತೆಗೆ ಟ್ವಿಟರ್‌ನಲ್ಲೂ ಆನೆ ಫೋಟೋ ಪೋಸ್ಟ್ ಮಾಡಿದ್ದರು.

ಆನೆ ನರಳಾಟ ಕಂಡು ಮರುಗಿದ ರಾಹುಲ್:

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ನೇತೃತ್ವದ ಭಾರತ ಜೋಡೊ ಯಾತ್ರೆಗೆ ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಕೂಡ ಸಾಥ್​ ನೀಡಿದ್ದರು. ಭಾರತ ಜೋಡೊ ಯಾತ್ರೆಯನ್ನು 2 ದಿನಗಳ ಕಾಲ ಮೊಟಕುಗೊಳಸಲಾಗಿತ್ತು. ರಾಹುಲ್​ ಮತ್ತು ಸೋನಿಯಾ ಗಾಂಧಿ ಸೆ.04, 5ರಂದು ವಿಶ್ರಾಂತಿಯಲ್ಲಿದ್ದರು. ಈ ವೇಳೆ ರಾಹುಲ್​ ಗಾಂಧಿ ಮತ್ತು ಸೋನಿಯಾ ಗಾಂಧಿ ನಾಗರಹೊಳೆ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ಸಫಾರಿ ಮಾಡಿದ್ದಾರೆ.

ಈ ವೇಳೆ ಮರಿ ಆನೆ ಗಾಯವಾಗಿದ್ದನ್ನು ಕಂಡಿದ್ದಾರೆ. ಈ ಸಂಬಂಧ ರಾಹುಲ್​ ಗಾಂಧಿ ಮರಿ ಆನೆ ಕಾಪಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. “ನಾಗರಹೊಳೆ ಹುಲಿ ಸಂರಕ್ಷಿತ ಕಾಡಿನಲ್ಲಿ ಆನೆ ನೋಡಿದೆ. ತಾಯಿ ಆನೆ ಜೊತೆಗೆ ಗಾಯಗೊಂಡ ಮರಿ ಆನೆಯ ನರಳಾಟವನ್ನು ಕಂಡೆ. ನಾನು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಭೇಟಿ ವೇಳೆ ಸೊಂಡಿಲು ಹಾಗೂ ಬಾಲದ ಭಾಗದ ಗಾಯದಿಂದ ಮರಿ ಆನೆ ನರಳಾಡುತ್ತಿತ್ತು. ಕಾಡಿನಲ್ಲಿ ನರಳಿತ್ತಿರುವ ಮರಿ ಆನೆಗೆ ತುರ್ತಾಗಿ ಚಿಕಿತ್ಸೆ ಅಗತ್ಯ ಇದೆ. ನೀವು ಸಹಾನುಭೂತಿ ಮನೋಭಾವನೆಯಿಂದ ಮರಿ ಆನೆ ಉಳಿಸಬೇಕು ಸೂಕ್ತ ಚಿಕಿತ್ಸೆ ಸಿಕ್ಕರೆ ಮರಿ ಆನೆ ಉಳಿಯುತ್ತೆ.ಸಕಾಲದಲ್ಲಿ ನೆರವಾಗಿ ಮರಿ ಆನೆ ಜೀವ ಉಳಿಸುತ್ತೀರೆಂದು ನಂಬಿದ್ದೇನೆ ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಕುರಿತು ರಾಹುಲ್ ಗಾಂಧಿ ಟ್ವಿಟರ್​ನಲ್ಲಿ ಆನೆ ಫೋಟೋ ಪೋಸ್ಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:10 pm, Thu, 6 October 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ