AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮನವಿ ನನಗೆ ತಲುಪಿದೆ, ನಿಮ್ಮ ಕಳಕಳಿಯನ್ನ ಪ್ರಶಂಸಿಸುತ್ತೇನೆ: ರಾಹುಲ್‌ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ ಬೊಮ್ಮಾಯಿ

ನಾಗರಹೊಳೆ ಸಂರಕ್ಷಿತ ಕಾಡಿನಲ್ಲಿ ಗಾಯಾಳು ಮರಿ ಆನೆಯನ್ನು ಕಂಡು ರಾಹುಲ್ ಗಾಂಧಿ ಮರುಗಿದ್ದು, ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದರು. ಈಗ ಆ ಪತ್ರಕ್ಕೆ ಸಿಎಂ ಬೊಮ್ಮಾಯಿಗೆ ಮರು ಪತ್ರ ಬರೆದಿದ್ದಾರೆ.

ನಿಮ್ಮ ಮನವಿ ನನಗೆ ತಲುಪಿದೆ, ನಿಮ್ಮ ಕಳಕಳಿಯನ್ನ ಪ್ರಶಂಸಿಸುತ್ತೇನೆ: ರಾಹುಲ್‌ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ, ರಾಹುಲ್‌ ಗಾಂಧಿ
TV9 Web
| Edited By: |

Updated on:Oct 06, 2022 | 8:11 PM

Share

ಬೆಂಗಳೂರು: ನಿಮ್ಮ ಮನವಿ ನನಗೆ ತಲುಪಿದೆ, ನಿಮ್ಮ ಕಳಕಳಿಯನ್ನ ಪ್ರಶಂಸಿಸುತ್ತೇನೆ. ಈಗಾಗಲೇ ಅಧಿಕಾರಿಗಳು ಮರಿ ಆನೆಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ರಾಹುಲ್‌ಗಾಂಧಿ (Rahul Gandhi) ಮನವಿ ಪತ್ರಕ್ಕೆ ಸಿಎಂ ಬೊಮ್ಮಾಯಿ ಸ್ಪಂದಿಸಿದ್ದಾರೆ. ಕ್ರೂರ ಪ್ರಾಣಿಗಳ ದಾಳಿಗೆ ಒಳಗಾಗಿ ಮರಿ ಆನೆಗೆ ಗಾಯವಾಗಿದೆ. ಗಾಯಾಳು ಮರಿ ಆನೆ ಸದ್ಯ ತಾಯಿಯ ಹಾಲಿನ ಆರೈಕೆಯಲ್ಲಿದೆ. ಈ ಹಂತದಲ್ಲಿ ತಾಯಿಯನ್ನು ಬೇರ್ಪಡಿಸಿ ಚಿಕಿತ್ಸೆ ನೀಡುವುದು ಕಷ್ಟ. ಅಗತ್ಯ ಚಿಕಿತ್ಸೆ ನೀಡಿ ಆರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿರುವೆ. ತಾಯಿ ಜತೆ ಮರಿ ಆನೆಯನ್ನು ತೀವ್ರ ನಿಗಾವಹಿಸಿ ನೋಡಿಕೊಳುತ್ತಿದ್ದಾರೆ. ನಾಗರಹೊಳೆ ಸಂರಕ್ಷಿತ ಕಾಡಿನಲ್ಲಿ ಗಾಯಾಳು ಮರಿ ಆನೆ ನೋಡಿದ್ದರು. ಮರಿ ಆನೆ ಕಾಪಾಡಿ ಅಂತಾ ನಿನ್ನೆ ಸಿಎಂಗೆ ರಾಹುಲ್ ಪತ್ರ ಬರೆದಿದ್ದರು. ಜೊತೆಗೆ ಟ್ವಿಟರ್‌ನಲ್ಲೂ ಆನೆ ಫೋಟೋ ಪೋಸ್ಟ್ ಮಾಡಿದ್ದರು.

ಆನೆ ನರಳಾಟ ಕಂಡು ಮರುಗಿದ ರಾಹುಲ್:

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ನೇತೃತ್ವದ ಭಾರತ ಜೋಡೊ ಯಾತ್ರೆಗೆ ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಕೂಡ ಸಾಥ್​ ನೀಡಿದ್ದರು. ಭಾರತ ಜೋಡೊ ಯಾತ್ರೆಯನ್ನು 2 ದಿನಗಳ ಕಾಲ ಮೊಟಕುಗೊಳಸಲಾಗಿತ್ತು. ರಾಹುಲ್​ ಮತ್ತು ಸೋನಿಯಾ ಗಾಂಧಿ ಸೆ.04, 5ರಂದು ವಿಶ್ರಾಂತಿಯಲ್ಲಿದ್ದರು. ಈ ವೇಳೆ ರಾಹುಲ್​ ಗಾಂಧಿ ಮತ್ತು ಸೋನಿಯಾ ಗಾಂಧಿ ನಾಗರಹೊಳೆ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ಸಫಾರಿ ಮಾಡಿದ್ದಾರೆ.

ಈ ವೇಳೆ ಮರಿ ಆನೆ ಗಾಯವಾಗಿದ್ದನ್ನು ಕಂಡಿದ್ದಾರೆ. ಈ ಸಂಬಂಧ ರಾಹುಲ್​ ಗಾಂಧಿ ಮರಿ ಆನೆ ಕಾಪಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. “ನಾಗರಹೊಳೆ ಹುಲಿ ಸಂರಕ್ಷಿತ ಕಾಡಿನಲ್ಲಿ ಆನೆ ನೋಡಿದೆ. ತಾಯಿ ಆನೆ ಜೊತೆಗೆ ಗಾಯಗೊಂಡ ಮರಿ ಆನೆಯ ನರಳಾಟವನ್ನು ಕಂಡೆ. ನಾನು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಭೇಟಿ ವೇಳೆ ಸೊಂಡಿಲು ಹಾಗೂ ಬಾಲದ ಭಾಗದ ಗಾಯದಿಂದ ಮರಿ ಆನೆ ನರಳಾಡುತ್ತಿತ್ತು. ಕಾಡಿನಲ್ಲಿ ನರಳಿತ್ತಿರುವ ಮರಿ ಆನೆಗೆ ತುರ್ತಾಗಿ ಚಿಕಿತ್ಸೆ ಅಗತ್ಯ ಇದೆ. ನೀವು ಸಹಾನುಭೂತಿ ಮನೋಭಾವನೆಯಿಂದ ಮರಿ ಆನೆ ಉಳಿಸಬೇಕು ಸೂಕ್ತ ಚಿಕಿತ್ಸೆ ಸಿಕ್ಕರೆ ಮರಿ ಆನೆ ಉಳಿಯುತ್ತೆ.ಸಕಾಲದಲ್ಲಿ ನೆರವಾಗಿ ಮರಿ ಆನೆ ಜೀವ ಉಳಿಸುತ್ತೀರೆಂದು ನಂಬಿದ್ದೇನೆ ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಕುರಿತು ರಾಹುಲ್ ಗಾಂಧಿ ಟ್ವಿಟರ್​ನಲ್ಲಿ ಆನೆ ಫೋಟೋ ಪೋಸ್ಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:10 pm, Thu, 6 October 22

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ