AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೀನ್ ಕುಟುಂಬಕ್ಕೆ ಪರಿಹಾರವನ್ನು ನೀಡುತ್ತೇವೆ, ಯುದ್ಧದಿಂದ ಮೃತದೇಹ ತರಲು ಕಷ್ಟ; ಸಿಎಂ ಬೊಮ್ಮಾಯಿ

ಯುದ್ಧ ನೆಲೆಯಿಂದ ಕನ್ನಡಿಗರನ್ನು ಕರೆತರುತ್ತೇವೆ ಎಂದು ಬೆಂಗಳೂರಿನಲ್ಲಿ ಮಾತನಾಡಿದ ಬೊಮ್ಮಾಯಿ, ನವೀನ್ ಜತೆಗಿದ್ದ ಸ್ನೇಹಿತರ ಮಾಹಿತಿ ಕಲೆಹಾಕುತ್ತಿದ್ದೇವೆ. ಇಂತಹ ವಿಚಾರದಲ್ಲೂ ರಾಜಕೀಯ ಮಾಡಬಾರದು.

ನವೀನ್ ಕುಟುಂಬಕ್ಕೆ ಪರಿಹಾರವನ್ನು ನೀಡುತ್ತೇವೆ, ಯುದ್ಧದಿಂದ ಮೃತದೇಹ ತರಲು ಕಷ್ಟ; ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Mar 02, 2022 | 1:04 PM

Share

ಬೆಂಗಳೂರು: ಉಕ್ರೇನ್ಗೆ (Ukraine) ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ನವೀನ್ ರಷ್ಯಾ ದಾಳಿಗೆ ಬಲಿಯಾಗಿದ್ದಾರೆ. ಕನ್ನಡಿಗ ನವೀನ್ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ ಅಂತ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. ನವೀನ್ ಮೃತದೇಹ ಹೋಲುವ ಕೆಲ ಫೋಟೋ ಬಂದಿದೆ. ನವೀನ್ ಸ್ನೇಹಿತರು ಫೋಟೋಗಳನ್ನು ಕಳುಹಿಸಿದ್ದಾರೆ. ಈ ಬಗ್ಗೆ ಭಾರತದ ರಾಯಭಾರ ಕಚೇರಿ ಜತೆ ಚರ್ಚೆ ಮಾಡುತ್ತೇನೆ. ಮೃತದೇಹವನ್ನು ಭಾರತಕ್ಕೆ ತರಲು ಪ್ರಯತ್ನಿಸುತ್ತೇವೆ. ಯುದ್ಧ ನಡೆಯುತ್ತಿರುವ ಹಿನ್ನೆಲೆ ಸ್ವಲ್ಪ ಕಷ್ಟವಾಗುತ್ತಿದೆ ಅಂತ ಬೊಮ್ಮಾಯಿ ತಿಳಿಸಿದರು.

ಯುದ್ಧ ನೆಲೆಯಿಂದ ಕನ್ನಡಿಗರನ್ನು ಕರೆತರುತ್ತೇವೆ ಎಂದು ಬೆಂಗಳೂರಿನಲ್ಲಿ ಮಾತನಾಡಿದ ಬೊಮ್ಮಾಯಿ, ನವೀನ್ ಜತೆಗಿದ್ದ ಸ್ನೇಹಿತರ ಮಾಹಿತಿ ಕಲೆಹಾಕುತ್ತಿದ್ದೇವೆ. ಇಂತಹ ವಿಚಾರದಲ್ಲೂ ರಾಜಕೀಯ ಮಾಡಬಾರದು. ಯುದ್ಧದ ಸಮಯದಲ್ಲಿ ಕಾಂಗ್ರೆಸ್ ರಾಜಕಾರಣ ಮಾತನಾಡುತ್ತದೆ. ಅಂದರೆ ಕಾಂಗ್ರೆಸ್ ಎಷ್ಟು ತಳ ಮಟ್ಟಕ್ಕೆ ಹೋಗಿದೆ ಅನ್ನೋದು ಗೊತ್ತಾಗುತ್ತದೆ. ಈ ಹಿಂದೆ ಯುದ್ಧ ನಡೆದಾಗ ಒಬ್ಬರನ್ನು ಕರೆತರಲಿಲ್ಲ. ಈಗ ರಾಜಕಾರಣ ಮತನಾಡುತ್ತಿದ್ದಾರೆ ಅಂತ ಹೇಳಿದರು.

ಮೃತ ನವೀನ್ ಪಾರ್ಥಿವ ಶರೀರವನ್ನ ಭಾರತಕ್ಕೆ ತರುವ ಕೆಲಸ ಅಷ್ಟು ಸುಲಭವಲ್ಲ. ಯುದ್ಧದ ವಾತಾವರಣ ಸಂದರ್ಭದಲ್ಲಿ ಪಾರ್ಥಿವ ಶರೀರ ಹಸ್ತಾಂತರ ಮಾಡಲು ಕಷ್ಟ. ಪ್ರಯತ್ನಪಟ್ಟರೆ ಪಾರ್ಥಿವ ಶರೀರ ತರಬಹುದು ಅಂತ ಮೇಜರ್ ರಘುರಾಮ್ ಹೇಳಿದ್ದಾರೆ.

ನವೀನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ: ನವೀನ್ ಓದಿದ ನಂಜನಗೂಡಿನ ಯೂನಿಟಿ ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳಿಂದ ನವೀನ್​ಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಇದನ್ನೂ ಓದಿ

ದ್ವಿತೀಯ ಪಿಯು ಪರೀಕ್ಷೆ ವೇಳೆಯೇ JEE ಮುಖ್ಯ ಪರೀಕ್ಷೆ! ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕ ವಿದ್ಯಾರ್ಥಿಗಳು

‘ನಾನು ಪ್ಯಾನ್​ ಇಂಡಿಯಾ ನಟಿ ಆಗಬೇಕು’; ರಶ್ಮಿಕಾ ಮಂದಣ್ಣ ಹೀಗೆ ಹೇಳಲು ಇದೆ ಒಂದು ಮುಖ್ಯ ಕಾರಣ

Published On - 11:15 am, Wed, 2 March 22

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?