AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮಾಜಿ, ಹಾಲಿ ಸಿಎಂಗಳ ನಡುವೆ ಮುನಿಸು ವಿಚಾರ: ಯಡಿಯೂರಪ್ಪ ಮುಕ್ತ ಬಿಜೆಪಿ ಎಂದು ಕಾಂಗ್ರೆಸ್ ವ್ಯಂಗ್ಯ

ಸಿಎಂ ಬೊಮ್ಮಾಯಿ, ಯಡಿಯೂರಪ್ಪ ನಡುವೆ ಮುನಿಸು ವಿಚಾರವಾಗಿ ಕಾಂಗ್ರೆಸ್ ವ್ಯಂಗ್ಯವಾಡಿದ್ದು, ಯಡಿಯೂರಪ್ಪ ಮುಕ್ತ ಬಿಜೆಪಿ ಎಂದು ಟ್ವೀಟ್ ಮೂಲಕ ಬಿಜೆಪಿ ಕಾಲೆಳೆದ ರಾಜ್ಯ ಕಾಂಗ್ರೆಸ್ ಘಟಕ.

ಬಿಜೆಪಿ ಮಾಜಿ, ಹಾಲಿ ಸಿಎಂಗಳ ನಡುವೆ ಮುನಿಸು ವಿಚಾರ: ಯಡಿಯೂರಪ್ಪ ಮುಕ್ತ ಬಿಜೆಪಿ ಎಂದು ಕಾಂಗ್ರೆಸ್ ವ್ಯಂಗ್ಯ
ಯಡಿಯೂರಪ್ಪ, ಕಾಂಗ್ರೆಸ್, ಬಸವರಾಜ್ ಬೊಮ್ಮಾಯಿ
TV9 Web
| Edited By: |

Updated on:Dec 15, 2022 | 8:59 PM

Share

ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ. ಎಸ್​ ಯಡಿಯೂರಪ್ಪ (Yediyurappa) ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ (Cm Bommai) ಇತ್ತೀಚೆಗೆ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಮತ್ತು ಇಬ್ಬರ ಮಧ್ಯೆಯೂ ಮುನಿಸುಂಟಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸದ್ಯ ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್ ಯಡಿಯೂರಪ್ಪ ಮುಕ್ತ ಬಿಜೆಪಿ ಎಂದು ಟ್ವೀಟ್ ಮೂಲಕ ಬಿಜೆಪಿ ಕಾಲೆಳೆದ ರಾಜ್ಯ ಕಾಂಗ್ರೆಸ್ ಘಟಕ ವ್ಯಂಗ್ಯವಾಡಿದೆ. ಒಬ್ಬ ಲಿಂಗಾಯತ ನಾಯಕನನ್ನು ಮುಗಿಸಲು ಮತ್ತೊಬ್ಬ ಲಿಂಗಾಯತ. ಮತ್ತೊಬ್ಬರನ್ನು ಮುಂದೆ ಬಿಡುವುದು ಸಂಘದ ಕುತ್ಸಿತ ಕಾರ್ಯತಂತ್ರ. ಅದರಂತೆಯೇ ಯಡಿಯೂರಪ್ಪರನ್ನು ಮೂಲೆಗುಂಪು ಮಾಡುವ ಟಾಸ್ಕ್‌ನ್ನು RSS ಸಿಎಂ ಹೆಗಲಿಗೇರಿಸಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಹರಿಹಾಯ್ದಿದೆ.

ಕುರ್ಚಿ ಉಳಿಸಿಕೊಳ್ಳಲು ಸಿಎಂ ಗುರುವಿಗೆ ತಿರುಮಂತ್ರ ಹಾಕುತ್ತಿದ್ದಾರೆ. ಯಡಿಯೂರಪ್ಪ ಕೃಪೆಯಿಂದ ಸಿಎಂ ಹುದ್ದೆಗೇರಿದ ಸಿಎಂ ಬೊಮ್ಮಾಯಿ. ಗುರುವನ್ನೇ ಮೂಲೆಗೆ ತಳ್ಳಲು ‘ಮೀರ್ ಸಾದಿಕ್’ ಪಾತ್ರ. ಸಿಎಂ ಸ್ಥಾನ ಗಟ್ಟಿಯಾಗುವವರೆಗೆ ವಾರಕ್ಕೊಮ್ಮೆ ದವಳಗಿರಿಗೆ ಹೋಗಿಬರುತ್ತಿದ್ದವರು ಈಗ ಕೇಶವ ಕೃಪಾಗೆ ಹೋಗ್ತಿದಾರೆ. ಬಿ.ಎಲ್ ಸಂತೋಷ್ ಅವರ ಯಡಿಯೂರಪ್ಪ ಮುಕ್ತ ಅಭಿಯಾನಕ್ಕೆ ಬೊಮ್ಮಾಯಿಯವರೂ ಕೈಜೋಡಿಸಿದ್ದಾರೆ.

ಅನೈತಿಕ ಮಾರ್ಗದಲ್ಲಿಯಾದರೂ ಬಿಜೆಪಿಗೆ ಅಧಿಕಾರದ ರುಚಿ ತೋರಿಸಿದ್ದು ಯಡಿಯೂರಪ್ಪ. ಆದರೆ ಅದೇ ಯಡಿಯೂರಪ್ಪಗೆ ಬಿಜೆಪಿ ಸಲ್ಲಿಸಿದ ಕೊಡುಗೆ ಜೈಲು, ಕಣ್ಣೀರು, ದ್ರೋಹ. ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ ಬಿಎಸ್‌ವೈ ಅವರನ್ನು ಬಿಡುವುದೇ ಎಂದು ಪ್ರಶ್ನಿಸಿದೆ. ಹತ್ತಿದ ಏಣಿಯನ್ನು ಒಡೆಯುವುದು, ತಿಂದ ತಟ್ಟೆಗೆ ಮಣ್ಣು ಹಾಕುವುದು ಬಿಜೆಪಿಯ ಹುಟ್ಟುಗುಣ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಕಿಡಿಕಾರಿದೆ.

ನಮ್ಮಲ್ಲಿ ಯಾವುದೇ ಸಮಸ್ಯೆಯಿಲ್ಲ ಎಲ್ಲರೂ ಒಗ್ಗಟ್ಟಾಗಿದ್ದೇವೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ 

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, ನಮ್ಮಲ್ಲಿ ಯಾವುದೇ ಸಮಸ್ಯೆಯಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಸಿಎಂ‌ ಜೊತೆ ಒಟ್ಟಾಗಿ ಪ್ರಚಾರಕ್ಕೆ ಹೋಗುತ್ತೇವೆ. ರಾಜ್ಯದಲ್ಲಿ ವಾತಾವರಣ ನಮ್ಮ ಪರವಾಗಿದೆ. ರಾಜ್ಯದಲ್ಲಿ ಪ್ರಚಾರಕ್ಕೆ ಪ್ರಧಾನಿ ಮೋದಿ ಐದಾರು ಭಾರಿ ರಾಜ್ಯಕ್ಕೆ ಬರಲಿದ್ದಾರೆ. ಅಮಿತ್ ಶಾ ಕೂಡಾ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದರು. ಕಾಂಗ್ರೆಸ್ ನಾಯಕರು ಹಗಲು ಕನಸು ಕಾಣುತ್ತಿದ್ದಾರೆ ಅವರದ್ದು ತಿರುಕನ ಕನಸು.

ಇದನ್ನೂ ಓದಿ: ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿಗೆ 140 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ

ಮಂಗಳೂರು ಬ್ಲಾಸ್ಟ್ ಪ್ರಕರಣ ಕಾಂಗ್ರೆಸ್ ನಾಯಕರಿಗೆ ಹಗರುವಾಗಿ ಮಾತನಾಡುವುದು ಅವರ ಅಭ್ಯಾಸವಾಗಿದೆ. ಬೇಜವಾಬ್ದಾರಿಯಿಂದ ಮಾತನಾಡುವುದು ಹವ್ಯಾಸವಾಗಿದೆ. ಅಂಜನಾದ್ರಿ ಬೆಟ್ಟ ಅಭಿವೃದ್ಧಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಎನೆಲ್ಲಾ ಅಭಿವೃದ್ಧಿ ಕಾರ್ಯ ಏನೂ ಮಾಡಬೇಕು ಅದನ್ನ ಮಾಡುತ್ತೇವೆ. ತೀರ್ಥ ಕ್ಷೇತ್ರಗಳನ್ನ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:58 pm, Thu, 15 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?