Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಜೋರಾದ ಪೈಪೋಟಿ, ವಿಪಕ್ಷ ನಾಯಕ ಸ್ಥಾನ ನೀಡುವಂತೆ ಸಿದ್ದರಾಮಯ್ಯಗೆ ಸಿ.ಎಂ. ಇಬ್ರಾಹಿಂ ಮನವಿ

ಈ ಹಿಂದೆಯೇ ಸಿ.ಎಂ. ಇಬ್ರಾಹಿಂ, ತನಗೆ ವಿಪಕ್ಷ ನಾಯಕನ ಸ್ಥಾನ ನೀಡುವಂತೆ CLP ನಾಯಕ ಸಿದ್ದರಾಮಯ್ಯ ಬಳಿ ಬೇಡಿಕೆ ಇಟ್ಟಿದ್ದರು. ಕಾಂಗ್ರೆಸ್ ಪಕ್ಷ ಬಿಡುವ ಬಗ್ಗೆಯೂ ಚಿಂತಿಸಿದ್ದಾರೆ. ಸದ್ಯ ಈಗ ಸಿ.ಎಂ. ಇಬ್ರಾಹಿಂ ಸಿದ್ದರಾಮಯ್ಯ ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.

ಕಾಂಗ್ರೆಸ್​ನಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಜೋರಾದ ಪೈಪೋಟಿ, ವಿಪಕ್ಷ ನಾಯಕ ಸ್ಥಾನ ನೀಡುವಂತೆ ಸಿದ್ದರಾಮಯ್ಯಗೆ ಸಿ.ಎಂ. ಇಬ್ರಾಹಿಂ ಮನವಿ
ಸಿ.ಎಂ. ಇಬ್ರಾಹಿಂ
Follow us
TV9 Web
| Updated By: ಆಯೇಷಾ ಬಾನು

Updated on:Dec 12, 2021 | 1:05 PM

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್ನಲ್ಲಿ ಜಿದ್ದಾಜಿದ್ದು ಮತ್ತಷ್ಟು ಜೋರಾಗಿದೆ. ಕಾಂಗ್ರೆಸ್ನಲ್ಲಿ ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ವಿಪಕ್ಷ ನಾಯಕನ ಸ್ಥಾನ ನೀಡುವಂತೆ ಸಿ.ಎಂ. ಇಬ್ರಾಹಿಂ ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದಾರೆ.

ಈ ಹಿಂದೆಯೇ ಸಿ.ಎಂ. ಇಬ್ರಾಹಿಂ, ತನಗೆ ವಿಪಕ್ಷ ನಾಯಕನ ಸ್ಥಾನ ನೀಡುವಂತೆ CLP ನಾಯಕ ಸಿದ್ದರಾಮಯ್ಯ ಬಳಿ ಬೇಡಿಕೆ ಇಟ್ಟಿದ್ದರು. ಕಾಂಗ್ರೆಸ್ ಪಕ್ಷ ಬಿಡುವ ಬಗ್ಗೆಯೂ ಚಿಂತಿಸಿದ್ದಾರೆ. ಸದ್ಯ ಈಗ ಸಿ.ಎಂ. ಇಬ್ರಾಹಿಂ ಸಿದ್ದರಾಮಯ್ಯ ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ. ಇನ್ನೊಂದೆಡೆ ಇಬ್ರಾಹಿಂಗೆ ವಿಪಕ್ಷ ಸ್ಥಾನ ನೀಡಲು ಮೂಲ ಕಾಂಗ್ರೆಸ್ಸಿಗರ ಆಕ್ಷೇಪವಿದೆ. ವಿಧಾನ ಸಭೆ ಮತ್ತು ವಿಧಾನ ಪರಿಷತ್ ಎರಡೂ ಸ್ಥಾನ ಜನತಾ ಪರಿವಾರದ ಮೂಲದವರಿಗೆ ನೀಡಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಈ ಹಿನ್ನಲೆಯಲ್ಲಿ ಇಬ್ರಾಹಿಂಗೆ ಪರಿಷತ್ ವಿಪಕ್ಷ ನಾಯಕನ ಸ್ಥಾನ ನೀಡಬೇಡಿ ಎಂದು ಮೂಲ ಕಾಂಗ್ರೆಸ್ಸಿಗರು ನಿರಾಕರಿಸುತ್ತಿದ್ದಾರೆ.

ಸದ್ಯ ಈ ಜಟಾಪಟಿ ಬಗ್ಗೆ ಮಾತನಾಡಿರುವ ಸಿ.ಎಂ. ಇಬ್ರಾಹಿಂ, ಯೌವನ ತುಂಬಿದಾಗ ಮದುವೆ ಯಾರು ಯಾಕೆ ಬೇಡ ಅಂತಾರೆ? ವಿಧಾನ ಪರಿಷತ್ನಲ್ಲಿ ಈಗ ನನಗೆ ಯೌವನ ತುಂಬಿದೆ, ಹೈಕಮಾಂಡ್ ಏನು ಮಾಡತ್ತೆ ನೋಡೋಣ. ಕುಮಾರಸ್ವಾಮಿ, ದೇವೇಗೌಡರ ಹತ್ತಿರ ಈಗಲೂ ವಿಶ್ವಾಸವಿದೆ. ಅಡ್ವಾಣಿ ಹತ್ರವೂ ವಿಶ್ವಾಸವಿದೆ, ಈಗಲೂ ಅವರ ಮನೆಗೆ ಹೋಗ್ತೇನೆ. ಬಿಜೆಪಿ ಸಮಾನ ಮನಸ್ಕರಿಗೂ ನಾನು ಮನವಿ ಮಾಡ್ತೇನೆ ದೇಶ ಉಳಿಸಿ ಅಂತ ಎಂದರು.

ಇನ್ನು ವಿಧಾನ ಪರಿಷತ್​ನ ವಿರೋಧ ಪಕ್ಷ ನಾಯಕನ ಸ್ಥಾನ ವಿಚಾರಕ್ಕೆ ಸಂಬಂಧಿಸಿ CLP ನಾಯಕ ಸಿದ್ದರಾಮಯ್ಯರನ್ನು ಆಕಾಂಕ್ಷಿಗಳು ಭೇಟಿ ಮಾಡುತ್ತಿದ್ದಾರೆ. ಇಬ್ರಾಹಿಂ ಭೇಟಿ ಬೆನ್ನಲ್ಲೇ ಕೆಪಿಸಿಸಿ ಕಾಱಧ್ಯಕ್ಷ ಸಲೀಂ ಅಹ್ಮದ್, ಪರಿಷತ್​ನ ಹಿರಿಯ ಸದಸ್ಯ ಅಲ್ಲಂ ವೀರಭದ್ರಪ್ಪ ಕೂಡ ಭೇಟಿ ನೀಡಿದ್ದಾರೆ. ಸಲೀಂ ಅಹ್ಮದ್ ವಿಧಾನ ಪರಿಷತ್ ಪ್ರವೇಶಿಸುವ ವಿಶ್ವಾಸದಲ್ಲಿದ್ದಾರೆ. ಹಾಗೂ ಸಿ.ಎಂ. ಇಬ್ರಾಹಿಂ ವಿಪಕ್ಷ ನಾಯಕನ ಸ್ಥಾನ ನೀಡಿದರೆ ಪಕ್ಷದಲ್ಲೇ ಮುಂದುವರೆಯುವ ಚಿಂತನೆ ನಡೆಸಿದ್ದಾರೆ.

ಇದನ್ನೂ ಓದಿ: ಭುವಿಯಲ್ಲಿರುವ ಸಾಗರಗಳಿಗೆ ನೀರು ಬಂದಿದ್ದು ಎಲ್ಲಿಂದ?; ಇಲ್ಲಿದೆ ಕುತೂಹಲಕರ ಮಾಹಿತಿ

Published On - 12:07 pm, Sun, 12 December 21

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!