AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Ibrahim: ದೇವೇಗೌಡ-ಕುಮಾರಸ್ವಾಮಿ ಜೊತೆ ಚರ್ಚೆ ಫಲಪ್ರದ, ಮಾತುಕತೆಯಿಂದ ಸಂತೋಷವಾಗಿದೆ ಎಂದ ಸಿ ಎಂ ಇಬ್ರಾಹಿಂ

HD Deve gowda: ನಾಳೆ ನಮ್ಮ ಸಮಾಜದ ಗುರುಗಳು ಮತ್ತು ಕೆಲವು ಪೀಠಾಧಿಪತಿಗಳ ಜೊತೆ ಚರ್ಚೆ ಮಾಡುವುದು ಇದೆ. ಅವರ ಜೊತೆ ಚರ್ಚೆ ಮಾಡಿ ಮುಂದಿನ ನಡೆ ಬಗ್ಗೆ ತೀರ್ಮಾನ ಮಾಡುತ್ತೇನೆ. ನಮ್ಮ ಸಮಾಜದ ಗುರುಗಳ ಅಪ್ಪಣೆ ಪಡೆಯಬೇಕಾಗುತ್ತದೆ. ಯಾವಾಗ ಜಾತ್ಯಾತೀತ ಜನತಾದಳ ಸೇರ್ಪಡೆ ಎಂಬ ಬಗ್ಗೆ ಇವತ್ತು ಚರ್ಚೆ ಮಾಡಿದ್ದೇವೆ -ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ

CM Ibrahim: ದೇವೇಗೌಡ-ಕುಮಾರಸ್ವಾಮಿ ಜೊತೆ ಚರ್ಚೆ ಫಲಪ್ರದ, ಮಾತುಕತೆಯಿಂದ ಸಂತೋಷವಾಗಿದೆ ಎಂದ ಸಿ ಎಂ ಇಬ್ರಾಹಿಂ
ದೇವೇಗೌಡ-ಕುಮಾರಸ್ವಾಮಿ ಜೊತೆಗಿನ ಚರ್ಚೆ ಫಲಪ್ರದ, ಮಾತುಕತೆಯಿಂದ ಸಂತೋಷವಾಗಿದೆ ಎಂದ ಸಿ ಎಂ ಇಬ್ರಾಹಿಂ
TV9 Web
| Edited By: |

Updated on:Mar 12, 2022 | 8:37 PM

Share

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ (JDS) ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರ (HD Deve gowda) ಜೊತೆ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರ ಜೊತೆ ಫಲಪ್ರದ ಚರ್ಚೆ ಮಾಡಿದ್ದೇನೆ. ಮಾತುಕತೆಯಿಂದ ನಾನು ಸಂತೋಷವಾಗಿದ್ದೇನೆ ಎಂದು ಇಂದು ಮಧ್ಯಾಹ್ನ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಿ.ಎಂ. ಇಬ್ರಾಹಿಂ (MLC CM Ibrahim) ಹೇಳಿದ್ದಾರೆ. ದೇವೇಗೌಡ ಮತ್ತು ಕುಮಾರಸ್ವಾಮಿ (HD Kumaraswamy) ಜೊತೆ ಪದ್ಮನಾಭನಗರ ನಿವಾಸದಲ್ಲಿ ಚರ್ಚೆ ನಡೆಸಿದ ಬಳಿಕ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಈ ಹೇಳಿಕೆ ನೀಡಿದ್ದಾರೆ.

ನಾಳೆ ನಮ್ಮ ಸಮಾಜದ ಗುರುಗಳು ಮತ್ತು ಕೆಲವು ಪೀಠಾಧಿಪತಿಗಳ ಜೊತೆ ಚರ್ಚೆ ಮಾಡುವುದು ಇದೆ. ಅವರ ಜೊತೆ ಚರ್ಚೆ ಮಾಡಿ ಮುಂದಿನ ನಡೆ ಬಗ್ಗೆ ತೀರ್ಮಾನ ಮಾಡುತ್ತೇನೆ. ನಮ್ಮ ಸಮಾಜದ ಗುರುಗಳ ಅಪ್ಪಣೆ ಪಡೆಯಬೇಕಾಗುತ್ತದೆ. ಯಾವಾಗ ಜಾತ್ಯಾತೀತ ಜನತಾದಳ ಸೇರ್ಪಡೆ ಎಂಬ ಬಗ್ಗೆ ಇವತ್ತು ಚರ್ಚೆ ಮಾಡಿದ್ದೇವೆ. ಸುತ್ತೂರು ಶ್ರೀ ಮತ್ತು ಇತರ ಕೆಲವು ಸ್ವಾಮೀಜಿಗಳ ಜೊತೆ ಚರ್ಚೆ ಮಾಡುತ್ತೇನೆ. ಅವರ ಜೊತೆ ಎಲ್ಲಾ ಚರ್ಚೆ ಮಾಡಿದ ಬಳಿಕ ಸೇರ್ಪಡೆ ದಿನಾಂಕ ನಿಗದಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಅದಕ್ಕೂ ಮೊದಲು ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರುಗಳನ್ನು ಬೆಂಗಳೂರಿನ ಪದ್ಮನಾಭನಗರದ ಹೆಚ್‌ಡಿಡಿ ನಿವಾಸದಲ್ಲಿ ಸಿ.ಎಂ.ಇಬ್ರಾಹಿಂ ಭೇಟಿಯಾದರು. ಇಂದು ಮಧ್ಯಾಹ್ನವಷ್ಟೇ ಕಾಂಗ್ರೆಸ್ ತೊರೆಯುವ ಬಗ್ಗೆ ಘೋಷಣೆ ಮಾಡಿದ್ದ ಇಬ್ರಾಹಿಂ ಜೆಡಿಎಸ್ ಸೇರ್ಪಡೆ ವಿಚಾರವಾಗಿ ದೇವೇಗೌಡರ ಜೊತೆ ಮಾತುಕತೆ ಸಲುವಾಗಿ ಭೇಟಿಯಾಗಿದ್ದರು.

C.M. Ibrahim : ಜೆಡಿಎಸ್ ಸೇರ್ಪಡೆ ವಿಚಾರ ಖಚಿತಪಡಿಸಿದ ಸಿ.ಎಂ.ಇಬ್ರಾಹಿಂ

Published On - 8:16 pm, Sat, 12 March 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು