AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಯಂಗ್ ಇದ್ದಾರೆ ಅದಕ್ಕೆ ನಡೆದುಕೊಂಡು ಹೋದ್ರು, ನಿಮಗೆ ಸ್ವಲ್ಪ ವಯಸ್ಸಾಗಿದೆ ಅದಕ್ಕೆ ಬೋಟ್ ನಲ್ಲಿ ಹೋದ್ರಿ -ಸಿದ್ದು ಕಾಲೆಳೆದ ಲಿಂಬಾವಳಿ

ಪ್ಟೆಂಬರ್​ 8ರಂದು ಮಹದೇವಪುರ ಕ್ಷೇತ್ರದ ವ್ಯಾಪ್ತಿಯ ಎಪ್ಸಿಲಾನ್ ಲೇಔಟ್​​ಗೆ ಭೇಟಿ ನೀಡಿದ್ದೆ. ಎಪ್ಸಿಲಾನ್​ ಲೇಔಟ್​ಗೆ​​ ದಿನ ನಿತ್ಯ ಓಡಾಡುತ್ತಿದ್ದ ರಸ್ತೆಯಲ್ಲಿ ಬೋಟ್​ನಲ್ಲಿ ಹೋಗಿದ್ದೆ ಎಂದು ಸಿದ್ದರಾಮಯ್ಯ ಕಲಾಪದಲ್ಲಿ ಪ್ರಸ್ತಾಪಿಸಿದ್ರು.

ಸಿಎಂ ಯಂಗ್ ಇದ್ದಾರೆ ಅದಕ್ಕೆ ನಡೆದುಕೊಂಡು ಹೋದ್ರು, ನಿಮಗೆ ಸ್ವಲ್ಪ ವಯಸ್ಸಾಗಿದೆ ಅದಕ್ಕೆ ಬೋಟ್ ನಲ್ಲಿ ಹೋದ್ರಿ -ಸಿದ್ದು ಕಾಲೆಳೆದ ಲಿಂಬಾವಳಿ
ಅರವಿಂದ ಲಿಂಬಾವಳಿ
TV9 Web
| Edited By: |

Updated on:Sep 13, 2022 | 2:00 PM

Share

ಬೆಂಗಳೂರು: ಕೇಂದ್ರ ಹವಾಮಾನ ಇಲಾಖೆ ಅಧಿಕ ಮಳೆಯಾಗಲಿದೆ ಎಂದು ಸಂದೇಶ ನೀಡಿದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಮುಂಜಾಗ್ರತಾ ಕ್ರಮಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು.

ಮಳೆ, ಪ್ರವಾಹದಿಂದ ಹಾನಿಯಾದವರಿಗೆ ಪರಿಹಾರ ನೀಡಬೇಕು. ರಾಜ್ಯದಲ್ಲಿ ಆಗಿರುವ ನಷ್ಟದ ಬಗ್ಗೆ ಕೇಂದ್ರಕ್ಕೆ ವರದಿ ನೀಡಬೇಕು. ಆರ್ಥಿಕ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒಣ ಬರ, ಹಸಿ ಬರದ ಬಗ್ಗೆ ಸದನದಲ್ಲಿ ಸಿದ್ದರಾಮಯ್ಯ ವಿವರಿಸಿದ್ರು.

ಈ ವೇಳೆ ಸಿದ್ದರಾಮಯ್ಯ, ಸೆಪ್ಟೆಂಬರ್​ 8ರಂದು ಮಹದೇವಪುರ ಕ್ಷೇತ್ರದ ವ್ಯಾಪ್ತಿಯ ಎಪ್ಸಿಲಾನ್ ಲೇಔಟ್​​ಗೆ ಭೇಟಿ ನೀಡಿದ್ದೆ. ಎಪ್ಸಿಲಾನ್​ ಲೇಔಟ್​ಗೆ​​ ದಿನ ನಿತ್ಯ ಓಡಾಡುತ್ತಿದ್ದ ರಸ್ತೆಯಲ್ಲಿ ಬೋಟ್​ನಲ್ಲಿ ಹೋಗಿದ್ದೆ ಎಂದು ಸಿದ್ದರಾಮಯ್ಯ ಕಲಾಪದಲ್ಲಿ ಪ್ರಸ್ತಾಪಿಸಿದ್ರು. ಈ ವೇಳೆ ಮಹದೇವಪುರ ಕ್ಷೇತ್ರದ ಶಾಸಕ ಮಧ್ಯಪ್ರದೇಶಿಸಿ, ನಿಮ್ಮನ್ನು ದಾರಿ ತಪ್ಪಿಸಿದ್ದಾರೆ. ಅಲ್ಲಿಗೆ ಹೋಗಲು ಬೇರೆ ರಸ್ತೆ ಇತ್ತು ಎಂದರು. ಸಿಎಂ ಇನ್ನೂ ಯಂಗ್ ಇದ್ದಾರೆ ಅದಕ್ಕೆ ನಡೆದುಕೊಂಡು ಹೋದರು, ನಿಮಗೆ ಸ್ವಲ್ಪ ವಯಸ್ಸಾಗಿದೆಯಲ್ವಾ ಅದಕ್ಕೆ ಬೋಟ್ ನಲ್ಲಿ ಕರೆದುಕೊಂಡು ಹೋದರು ಎಂದು ಲಿಂಬಾವಳಿ ಸಿದ್ದು ಕಾಲೆಳೆದ್ರು.

ಈ ವೇಳೆ ಮಧ್ಯಪ್ರವೇಶಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಕೇವಲ ಒಂದೂವರೆ ಅಡಿ ನೀರಿನಲ್ಲಿ ಬೋಟ್​ ಕರೆದೊಯ್ದ ಪುಣ್ಯಾತ್ಮ ಯಾರು ಎಂದು ಪ್ರಶ್ನಿಸಿದರು. ಸಿಎಂ ಬೊಮ್ಮಾಯಿ ಮಾತಿಗೆ ಕೃಷ್ಣ ಭೈರೇಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ರು. ವಿಪಕ್ಷ ನಾಯಕರು ಭೇಟಿ ನೀಡಿದ್ದಾಗ 7-8 ಅಡಿ ನೀರು ನಿಂತಿತ್ತು. ಹಾಗಾಗಿ NDRF​ ಬೋಟ್​ನಲ್ಲಿ ತೆರಳಿದ್ದರು ಎಂದು ಕೃಷ್ಣ ಭೈರೇಗೌಡ ಸಿಎಂಗೆ ಕೌಂಟರ್ ಕೊಟ್ಟರು. ಜನರ ಬಳಕೆಗಾಗಿ ಬೋಟ್​ ಇಟ್ಟಿದ್ದೆವು ಎಂದು ಸಿಎಂ ಹೇಳಿದಂತೆ ಕೇವಲ ಒಂದೂವರೆ ಅಡಿಗಿಂತ ನೀರು ಹೆಚ್ಚಿತ್ತು. ಸುಮಾರು 4-5 ಅಡಿ ನೀರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ವಾದಕ್ಕಿಳಿದರು. ಭೇಟಿ ವೇಳೆ ಮನೆಗಳು, ಕಾರುಗಳು ಮುಳುಗಿದನ್ನು ಗಮನಿಸಿದೆ. ಕಾರು ಮುಳುಗಿದೆ ಎಂದರೆ ಸುಮಾರು 5 ಅಡಿ ನೀರು ಇರಬೇಕು. ಸಾಮಾನ್ಯಜ್ಞಾನ ಇರುವವರಿಗೆ ಇದು ಅರ್ಥವಾಗುತ್ತೆ. ಕೆಲವು ಸಲ ಕಣ್ಣಿಗೆ ಆಳ ಗೊತ್ತಾಗಲ್ಲ, ಸಿಎಂ ಎಪ್ಸಿಲಾನ್​ಗೆ ಹೋಗಿಲ್ಲ. ರೈವ್​ಬೋ ಡ್ರೈವ್ ಲೇಔಟ್​ಗೆ ಹೋಗಿರಬೇಕು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು.

Published On - 2:00 pm, Tue, 13 September 22

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ