ಡಿಜಿ-ಐಜಿಪಿ ಜೊತೆ ಸಿಎಂ ಬೊಮ್ಮಾಯಿ ಸಭೆ; ಅಪರಾಧ ಕೃತ್ಯಗಳ ನಿಯಂತ್ರಿಸುವಂತೆ ಪೊಲೀಸರಿಗೆ ಪ್ರವೀಣ್ ಸೂದ್ ಖಡಕ್ ಎಚ್ಚರಿಕೆ

ಧರ್ಮ ವಿಚಾರದಲ್ಲಿ ಏನೇ ಸಂಘರ್ಷ ಆದ್ರೂ ನೀವೆ ಹೊಣೆ. ಯಾವುದೇ ಅಹಿತಕರ ಘಟನೆ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. ತಮ್ಮ ತಮ್ಮ‌ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿವಂತೆ  ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ. 

ಡಿಜಿ-ಐಜಿಪಿ ಜೊತೆ ಸಿಎಂ ಬೊಮ್ಮಾಯಿ ಸಭೆ; ಅಪರಾಧ ಕೃತ್ಯಗಳ ನಿಯಂತ್ರಿಸುವಂತೆ ಪೊಲೀಸರಿಗೆ ಪ್ರವೀಣ್ ಸೂದ್ ಖಡಕ್ ಎಚ್ಚರಿಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Updated By: ಗಂಗಾಧರ​ ಬ. ಸಾಬೋಜಿ

Updated on: Apr 11, 2022 | 8:01 PM

ಬೆಂಗಳೂರು: ಕೋಮು ಆಧರಿತ ಅಪರಾಧ ಕೃತ್ಯ (Criminal Activity) ಗಳನ್ನು ನಿಯಂತ್ರಿಸಿ ಎಂದು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಖಡಕ್ ಸೂಚನೆ ನೀಡಿದ್ದಾರೆ. ಕೋಮು ಗಲಭೆಗೆ ಕಾರಣವಾಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಹೇಳಿದ್ದಾರೆ. ಸಿಎಂ ಸೂಚನೆ ಬೆನ್ನಲ್ಲೇ ಅಧಿಕಾರಿಗಳ ಜತೆ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಎಲ್ಲಾ ಐಜಿಪಿ, ಎಸ್‌ಪಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಧರ್ಮ ವಿಚಾರದಲ್ಲಿ ಏನೇ ಸಂಘರ್ಷ ಆದ್ರೂ ನೀವೆ ಹೊಣೆ. ಯಾವುದೇ ಅಹಿತಕರ ಘಟನೆ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. ತಮ್ಮ ತಮ್ಮ‌ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿವಂತೆ  ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:

ಸುಸೂತ್ರವಾಗಿ ಮುಗಿಯಿತು ಎಸ್ಎಸ್ಎಲ್​ಸಿ ಪರೀಕ್ಷೆ; ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ, ಫಲಿತಾಂಶ ಯಾವಾಗ?
IPL 2022: ರಾಜಸ್ಥಾನ್ ಪಾಲಿಗೆ ವರ್ಕ್ ಆದ ಅಶ್ವಿನ್ ರಿಟೈರ್ಡ್ ಔಟ್ ಪ್ಲ್ಯಾನ್

Published On - 7:52 pm, Mon, 11 April 22