AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ.8ರಂದು‌ ಸಿಎಂ 2ನೇ ಹಂತದ ಜನಸ್ಪಂದನಾ ಕಾರ್ಯಕ್ರಮ: ಮೆಜೆಸ್ಟಿಕ್​ನಿಂದ ವಿಧಾನಸೌಧಕ್ಕೆ ಬಸ್ ಸೌಲಭ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.08 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ (Janaspandana) ಕಾರ್ಯಕ್ರಮವನ್ನು ನಡೆಸಲಿದ್ದು, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದರು.

ಫೆ.8ರಂದು‌ ಸಿಎಂ 2ನೇ ಹಂತದ ಜನಸ್ಪಂದನಾ ಕಾರ್ಯಕ್ರಮ: ಮೆಜೆಸ್ಟಿಕ್​ನಿಂದ ವಿಧಾನಸೌಧಕ್ಕೆ ಬಸ್ ಸೌಲಭ್ಯ
ಸಿಎಂ ಸಿದ್ದರಾಮಯ್ಯ ಜನಸ್ಪಂದನ
Follow us
Anil Kalkere
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 24, 2024 | 9:27 PM

ಬೆಂಗಳೂರು, ಜ.24: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.08 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ(Janaspandana) ಕಾರ್ಯಕ್ರಮವನ್ನು ನಡೆಸಲಿದ್ದು, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ(CM Siddaramaiah) ಅವರು ‘ವ್ಯವಸ್ಥಿತ, ಶಿಸ್ತುಬದ್ದ, ಪರಿಣಾಮಕಾರಿ ಜನಸ್ಪಂದನೆಗೆ ಸಕಲ ತಯಾರಿಯ ಜೊತೆಗೆ ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲು ಸಿಎಂ ಸೂಚಿಸಿದ್ದಾರೆ.

ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್‌ ವ್ಯವಸ್ಥೆ

ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್‌ ವ್ಯವಸ್ಥೆ ಮಾಡಲು ಸೂಚಿಸಿದ್ದು, ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪನೆ ಮಾಡಲಾಗುವುದು. ಜೊತೆಗೆ ಅಗತ್ಯವಿರುವ ಎಲ್ಲ ಉಪಕರಣಗಳನ್ನೂ ಒದಗಿಸಲು ಹಾಗೂ ಸಿಬ್ಬಂದಿಯನ್ನೂ ನಿಯೋಜಿಸಲು ಇ-ಆಡಳಿತ ಇಲಾಖೆಗೆ ಸೂಚನೆ ನಿಡಿದರು. ಮನವಿದಾರರ ದೂರುಗಳನ್ನು ಪರಿಶೀಲಿಸಿ, ನಿಗದಿತ ಕೌಂಟರುಗಳಿಗೆ ತೆರಳಲು ಸೂಕ್ತ ಮಾರ್ಗದರ್ಶನ ನೀಡಲು ಪ್ರವೇಶ ದ್ವಾರದಲ್ಲಿಯೇ ಅಧಿಕಾರಿ, ಸಿಬ್ಬಂದಿಗಳ ಫೆಸಿಲಿಟೇಷನ್‌ ತಂಡವನ್ನು ನಿಯೋಜಿಸುವಂತೆ ನಿರ್ದೇಶನ ನೀಡಿದರು.

ಇದನ್ನೂ ಓದಿ:ಜನಸ್ಪಂದನಾ ಕಾರ್ಯಕ್ರಮದಲ್ಲಿ ದೂರು ಸಲ್ಲಿಸಿದ ಮಹಿಳೆ ಜಮೀರ್ ನಿಂದ ತೊಂದರೆ ಅಂದಾಗ ಶಿವಕುಮಾರ್ ಹುಬ್ಬೇರಿಸಿದರು!

ಇನ್ನು ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಈ ವೇಳೆ ಹಾಜರಿರಲಿದ್ದಾರೆ. ವಿಶೇಷ ಆಸಕ್ತಿವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕು. ವಿಶೇಷ ಚೇತನರು ಹಾಗೂ ಹಿರಿಯನಾಗರಿಕರಿಗೆ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ನೀರು, ಲಘು ಉಪಾಹಾರ, ಊಟದ ವ್ಯವಸ್ಥೆ ಮಾಡುವ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಳೆದ ಬಾರಿಯ ಜನಸ್ಪಂದನದಲ್ಲಿ ಸ್ವೀಕರಿಸಿದ ಅರ್ಜಿಗಳ ತ್ವರಿತ ವಿಲೇವಾರಿ ಮಾಡುವ ಬಗ್ಗೆ ಎಲ್ಲ ಇಲಾಖೆಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು ‘ಕೆಡಿಪಿ ಸಭೆಯಲ್ಲಿಯೂ ಜನಸ್ಪಂದನ ಅರ್ಜಿ ವಿಲೇವಾರಿ ಪ್ರಗತಿ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್