AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಡಿ ಪಲ್ಲವಿ ಸೇರಿ ಕಲಾವಿದರ ನಾಟಕಕ್ಕೆ ಪೊಲೀಸ್​ ಅಡ್ಡಿ: ಸ್ಪಷ್ಟನೆ ನೀಡಿದ ಸಿಎಂ‌ ಸಿದ್ದರಾಮಯ್ಯ

md pallavi: ರಂಗಶಂಕರದಲ್ಲಿ ಪ್ಯಾಲೆಸ್ಟಿನ್ ಪರವಾಗಿ ಆಯೋಜನೆಯಾಗಿದ ಕಿರು ನಾಟಕ ಮತ್ತು ಕವನ ವಾಚನಕ್ಕೆ ಖ್ಯಾತ ರಂಗಭೂಮಿ ಕಲಾವಿದೆ, ಗಾಯಕಿ ಎಂಡಿ ಪಲ್ಲವಿ ಸೇರಿದಂತೆ ಹಲವು ಕಲಾವಿದರ ಕಾರ್ಯಕ್ರಮಕ್ಕೆ ಪೊಲೀಸರು ನಿರಾಕರಿಸಿದ್ದಾರೆ. ಸದ್ಯ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡುವ ಮೂಲಕ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನಿಡಿದ್ದಾರೆ.

ಎಂಡಿ ಪಲ್ಲವಿ ಸೇರಿ ಕಲಾವಿದರ ನಾಟಕಕ್ಕೆ ಪೊಲೀಸ್​ ಅಡ್ಡಿ: ಸ್ಪಷ್ಟನೆ ನೀಡಿದ ಸಿಎಂ‌ ಸಿದ್ದರಾಮಯ್ಯ
ಎಂಡಿ ಪಲ್ಲವಿ, ಸಿಎಂ ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on: Dec 01, 2023 | 3:20 PM

Share

ಬೆಂಗಳೂರು, ಡಿಸೆಂಬರ್​​​​ 01: ಬುಧವಾರ ರಂಗಶಂಕರದಲ್ಲಿ ಪ್ಯಾಲೆಸ್ಟಿನ್ ಪರವಾಗಿ ಆಯೋಜನೆಯಾಗಿದ ಕಿರು ನಾಟಕ ಮತ್ತು ಕವನ ವಾಚನಕ್ಕೆ ಖ್ಯಾತ ರಂಗಭೂಮಿ ಕಲಾವಿದೆ, ಗಾಯಕಿ ಎಂಡಿ ಪಲ್ಲವಿ (md pallavi) ಸೇರಿದಂತೆ ಹಲವು ಕಲಾವಿದರ ಕಾರ್ಯಕ್ರಮಕ್ಕೆ ಪೊಲೀಸರು ನಿರಾಕರಿಸಿದ್ದಾರೆ. ಪೊಲೀಸ್ ಅನುಮತಿ ನಿರಾಕರಣೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಬಳಿಕ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಆದರೆ ಸದ್ಯ ಈ ವಿಚಾರವಾಗಿ ಪೊಲೀಸರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸಿಟ್ಟಾಗಿದ್ದು, ಸ್ಪಷ್ಟನೆ ನೀಡಿದ್ದಾರೆ.

ಸ್ಪಷ್ಟನೆ ನೀಡಿದ ಸಿಎಂ‌ ಸಿದ್ದರಾಮಯ್ಯ

ಈ ಕುರಿತಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರವು ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಯಾವುದೇ ಕೆಲಸವನ್ನು ಮಾಡುವುದಿಲ್ಲ. ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ತಡೆಯುವ ಕೆಲಸವನ್ನು ಮಾಡುವುದಿಲ್ಲ.

ಎಂಡಿ ಪಲ್ಲವಿ ಫೇಸ್ಬುಕ್ ಪೋಸ್ಟ್​​

ನಾವು ಸಂವಿಧಾನದ ಮೂಲಸ್ಫೂರ್ತಿಗೆ ವಿರುದ್ಧವಾಗದಂತೆ ನಡೆಯುವ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ. ಕೆಳಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳಿವಳಿಕೆಯ ಕಾರಣಕ್ಕೆ ಒಂದೆರಡು ಅನಾವಶ್ಯಕವಾದ ಗೊಂದಲಗಳು ನಿರ್ಮಾಣವಾಗಿವೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಯಾವುದೇ ಗೊಂದಲಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕೆಂದು ನಾನು ಪೊಲೀಸ್ ಮಹಾನಿರ್ದೇಶಕರಿಗೆ ಸೂಕ್ತ ಸೂಚನೆಗಳನ್ನು ನೀಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಜಾರಿ, ವಿದ್ಯಾರ್ಥಿಗಳ ಪರದಾಟ: ಗದಗನಲ್ಲಿ ಎಬಿವಿಪಿ ಪ್ರತಿಭಟನೆ

ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರ್ಕಾರವು ಸದಾ ನಿಲ್ಲುತ್ತದೆ ಎಂಬುದನ್ನು ತಿಳಿಸಬಯಸುತ್ತೇನೆ. ಆದ್ದರಿಂದ ಯಾವುದೇ ರೀತಿಯ ಗೊಂದಲಗಳನ್ನು ಸೃಷ್ಟಿಸಬಾರದೆಂದು, ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತರಾಗಬಾರದೆಂದು ಸಿಎಂ ಸಿದ್ದರಾಮಯ್ಯ ವಿನಂತಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!