AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಮೂರ್ತಿ ಬಿ ವೀರಪ್ಪರಿಗೆ ಬೀಳ್ಕೊಡುಗೆ: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಭಾಗಿ

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಸೇವೆಸಲ್ಲಿದ್ದ ಬಿ. ವೀರಪ್ಪ ಅವರಿಗೆ ಇಂದು ಸನ್ಮಾನಿಸಿ ಬೀಳ್ಕೊಡಲಾಯಿತು.

ಗಂಗಾಧರ​ ಬ. ಸಾಬೋಜಿ
|

Updated on:May 31, 2023 | 9:00 PM

Share

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಸೇವೆಸಲ್ಲಿದ್ದ ಬಿ. ವೀರಪ್ಪ (B Veerappa) ಅವರಿಗೆ ಇಂದು ಸನ್ಮಾನಿಸಿ ಬೀಳ್ಕೊಡಲಾಯಿತು. ಬೆಂಗಳೂರು ವಕೀಲ ಸಂಘದಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬಿ. ವೀರಪ್ಪ ಅವರಿಗೆ ಮೈಸೂರು ಪೇಟ ತೊಡಿಸಿ, ಕಂಚಿನ ವೆಂಕಟೇಶ್ವರ ಮೂರ್ತಿ ನೀಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸನ್ಮಾನಿಸಿದರು. ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಲೆ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಭಾಗಿ ಆಗಿದ್ದರು.

ನನ್ನ ಕರ್ತವ್ಯವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇನೆ ಅಷ್ಟೇ: ನ್ಯಾಯಮೂರ್ತಿ ಬಿ.ವೀರಪ್ಪ 

ಸಮಾರಂಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ಮಾತನಾಡಿ, ನನ್ನ ಕರ್ತವ್ಯವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇನೆ ಅಷ್ಟೇ. ನ್ಯಾಯಮೂರ್ತಿ ಆದಾಗ ಆದ ಖುಷಿಗಿಂತ ಈಗ ಹೆಚ್ಚು ಖುಷಿ ಆಗ್ತಿದೆ. ಚಿಕ್ಕವನಿದ್ದಾಗ ತಂಬೂರಿಯವನು ನಮ್ಮ ತಾಯಿ ಬಳಿ ಭವಿಷ್ಯ ಹೇಳಿದ್ದ. ನಿನ್ನ ಮಗ ಬಹಳ ತಲೆಹರಟೆ ಇದ್ದಾನೆ, ಮುಂದೆ ಕಷ್ಟ ಅಂತ ಹೇಳಿದ್ದ. ಆಗ ತಂಬೂರಿ ಮಾತು ಕೇಳಿ ನನ್ನ ತಾಯಿ ಕಣ್ಣೀರು ಹಾಕಿದ್ರು.

ಇದನ್ನೂ ಓದಿ: ‘ಗ್ಯಾರಂಟಿ’ಗೆ ಸಾಂಕೇತಿಕ ಚಾಲನೆ ನೀಡಲು ಬೃಹತ್ ಕಾರ್ಯಕ್ರಮ ಆಯೋಜನೆಗೆ ಚಿಂತನೆ

ನಾನು ತಂಬೂರಿ ಒಡೆದು ಹಾಕಿದ್ದೆ. 40 ವರ್ಷದ ಹಿಂದೆ ಬೆಂಗಳೂರಿಗೆ ಬಂದಾಗ ನಾನು ಅಪರಿಚಿತ. ಇಂದು 7 ಕೋಟಿ ಕನ್ನಡಿಗರು ನನ್ನವರು ಎಂದು ಹೇಳಿದರು.

ದುರ್ಬಲ ವರ್ಗದವರಿಗೆ ನ್ಯಾಯ ಕೊಡಿಸುವ ಕೆಲಸ ನ್ಯಾ.ಬಿ.ವೀರಪ್ಪ ಮಾಡಿದ್ದಾರೆ: ಸಿಎಂ

ಸಿಎಂ ಸಿದ್ದರಾಮಯ್ಯ ಮಾತನಾಡಿ, ನ್ಯಾಯಮೂರ್ತಿಯಾಗಿ ಬಿ.ವೀರಪ್ಪ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ನಾನು ಸಿಎಂ ಆಗಿದ್ದಾಗ ವೀರಪ್ಪ ಹೈಕೋರ್ಟ್ ನ್ಯಾಯಮೂರ್ತಿ ಆದರು. ಇಂದು ಸಿಎಂ ಆಗಿದ್ದೇನೆ, ನಿವೃತ್ತಿ ಹೊಂದುತ್ತಿದ್ದಾರೆ, ಇದು ಕಾಕತಾಳೀಯ. ವ್ಯವಸ್ಥೆಯಲ್ಲಿ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಸವಲತ್ತುಗಳು ಸಿಗಬೇಕು ಎಂದರು.

ಇದನ್ನೂ ಓದಿ: ರೋಹಿತ್ ಚಕ್ರತೀರ್ಥಗೆ ಸಂಕಷ್ಟ, ದೂರು ದಾಖಲಿಸುವಂತೆ ಸಿಎಂಗೆ ಸಮಾನ ಮನಸ್ಕರ ಒಕ್ಕೂಟ ಮನವಿ

ನ್ಯಾಯಮೂರ್ತಿ ಬಿ.ವೀರಪ್ಪನವರು ಗ್ರಾಮೀಣ ಭಾಗದಿಂದ ಬಂದವರು. ದುರ್ಬಲ ವರ್ಗದ ಜನರ ಕಷ್ಟ ವೀರಪ್ಪನವರಿಗೆ ಚೆನ್ನಾಗಿ ಗೊತ್ತಿರುತ್ತದೆ. ದುರ್ಬಲ ವರ್ಗದ ಜನ ಪ್ರಬಲ ವರ್ಗದವರ ವಿರುದ್ಧ ಹೋಗಲು ಆಗಲ್ಲ. ಕೋರ್ಟ್​ಗಳಿಗೆ ಹೋಗಲು ಸಾಧ್ಯವಾಗದ ಸಾಕಷ್ಟು ಉದಾಹರಣೆ ಇವೆ. ಅಂಥವರಿಗೆ ನ್ಯಾಯ ಕೊಡಿಸುವ ಕೆಲಸ ನ್ಯಾ.ಬಿ.ವೀರಪ್ಪ ಮಾಡಿದ್ದಾರೆ. ನ್ಯಾ.ಬಿ.ವೀರಪ್ಪ ಸತತ 8 ವರ್ಷ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ನಿವೃತ್ತಿಯ ನಂತರವೂ ಅವರು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಹೇಳಿದರು.

ನ್ಯಾ.ಬಿ.ವೀರಪ್ಪ ತಮ್ಮ ಕೆಲಸದ ಮೂಲಕ ರಾಜ್ಯದ ಹೃದಯ ಗೆದ್ದಿದ್ದಾರೆ: ಡಿಸಿಎಂ 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗ ದೊಡ್ಡ ಸ್ಥಾನದಲ್ಲಿದೆ. ನ್ಯಾಬಿ.ವೀರಪ್ಪನವರ ಕಾರ್ಯದಿಂದ ರಾಜಕಾರಣಿ ಕಲಿಯುವುದು ಸಾಕಷ್ಟಿದೆ. ತಮ್ಮ ಕೆಲಸದ ಮೂಲಕ ರಾಜ್ಯದ ಹೃದಯ ಗೆದ್ದಿದ್ದಾರೆ. ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:52 pm, Wed, 31 May 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ