AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಮೂರ್ತಿ ಬಿ ವೀರಪ್ಪರಿಗೆ ಬೀಳ್ಕೊಡುಗೆ: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಭಾಗಿ

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಸೇವೆಸಲ್ಲಿದ್ದ ಬಿ. ವೀರಪ್ಪ ಅವರಿಗೆ ಇಂದು ಸನ್ಮಾನಿಸಿ ಬೀಳ್ಕೊಡಲಾಯಿತು.

ಗಂಗಾಧರ​ ಬ. ಸಾಬೋಜಿ
|

Updated on:May 31, 2023 | 9:00 PM

Share

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಸೇವೆಸಲ್ಲಿದ್ದ ಬಿ. ವೀರಪ್ಪ (B Veerappa) ಅವರಿಗೆ ಇಂದು ಸನ್ಮಾನಿಸಿ ಬೀಳ್ಕೊಡಲಾಯಿತು. ಬೆಂಗಳೂರು ವಕೀಲ ಸಂಘದಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬಿ. ವೀರಪ್ಪ ಅವರಿಗೆ ಮೈಸೂರು ಪೇಟ ತೊಡಿಸಿ, ಕಂಚಿನ ವೆಂಕಟೇಶ್ವರ ಮೂರ್ತಿ ನೀಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸನ್ಮಾನಿಸಿದರು. ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಲೆ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಭಾಗಿ ಆಗಿದ್ದರು.

ನನ್ನ ಕರ್ತವ್ಯವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇನೆ ಅಷ್ಟೇ: ನ್ಯಾಯಮೂರ್ತಿ ಬಿ.ವೀರಪ್ಪ 

ಸಮಾರಂಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ಮಾತನಾಡಿ, ನನ್ನ ಕರ್ತವ್ಯವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇನೆ ಅಷ್ಟೇ. ನ್ಯಾಯಮೂರ್ತಿ ಆದಾಗ ಆದ ಖುಷಿಗಿಂತ ಈಗ ಹೆಚ್ಚು ಖುಷಿ ಆಗ್ತಿದೆ. ಚಿಕ್ಕವನಿದ್ದಾಗ ತಂಬೂರಿಯವನು ನಮ್ಮ ತಾಯಿ ಬಳಿ ಭವಿಷ್ಯ ಹೇಳಿದ್ದ. ನಿನ್ನ ಮಗ ಬಹಳ ತಲೆಹರಟೆ ಇದ್ದಾನೆ, ಮುಂದೆ ಕಷ್ಟ ಅಂತ ಹೇಳಿದ್ದ. ಆಗ ತಂಬೂರಿ ಮಾತು ಕೇಳಿ ನನ್ನ ತಾಯಿ ಕಣ್ಣೀರು ಹಾಕಿದ್ರು.

ಇದನ್ನೂ ಓದಿ: ‘ಗ್ಯಾರಂಟಿ’ಗೆ ಸಾಂಕೇತಿಕ ಚಾಲನೆ ನೀಡಲು ಬೃಹತ್ ಕಾರ್ಯಕ್ರಮ ಆಯೋಜನೆಗೆ ಚಿಂತನೆ

ನಾನು ತಂಬೂರಿ ಒಡೆದು ಹಾಕಿದ್ದೆ. 40 ವರ್ಷದ ಹಿಂದೆ ಬೆಂಗಳೂರಿಗೆ ಬಂದಾಗ ನಾನು ಅಪರಿಚಿತ. ಇಂದು 7 ಕೋಟಿ ಕನ್ನಡಿಗರು ನನ್ನವರು ಎಂದು ಹೇಳಿದರು.

ದುರ್ಬಲ ವರ್ಗದವರಿಗೆ ನ್ಯಾಯ ಕೊಡಿಸುವ ಕೆಲಸ ನ್ಯಾ.ಬಿ.ವೀರಪ್ಪ ಮಾಡಿದ್ದಾರೆ: ಸಿಎಂ

ಸಿಎಂ ಸಿದ್ದರಾಮಯ್ಯ ಮಾತನಾಡಿ, ನ್ಯಾಯಮೂರ್ತಿಯಾಗಿ ಬಿ.ವೀರಪ್ಪ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ನಾನು ಸಿಎಂ ಆಗಿದ್ದಾಗ ವೀರಪ್ಪ ಹೈಕೋರ್ಟ್ ನ್ಯಾಯಮೂರ್ತಿ ಆದರು. ಇಂದು ಸಿಎಂ ಆಗಿದ್ದೇನೆ, ನಿವೃತ್ತಿ ಹೊಂದುತ್ತಿದ್ದಾರೆ, ಇದು ಕಾಕತಾಳೀಯ. ವ್ಯವಸ್ಥೆಯಲ್ಲಿ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಸವಲತ್ತುಗಳು ಸಿಗಬೇಕು ಎಂದರು.

ಇದನ್ನೂ ಓದಿ: ರೋಹಿತ್ ಚಕ್ರತೀರ್ಥಗೆ ಸಂಕಷ್ಟ, ದೂರು ದಾಖಲಿಸುವಂತೆ ಸಿಎಂಗೆ ಸಮಾನ ಮನಸ್ಕರ ಒಕ್ಕೂಟ ಮನವಿ

ನ್ಯಾಯಮೂರ್ತಿ ಬಿ.ವೀರಪ್ಪನವರು ಗ್ರಾಮೀಣ ಭಾಗದಿಂದ ಬಂದವರು. ದುರ್ಬಲ ವರ್ಗದ ಜನರ ಕಷ್ಟ ವೀರಪ್ಪನವರಿಗೆ ಚೆನ್ನಾಗಿ ಗೊತ್ತಿರುತ್ತದೆ. ದುರ್ಬಲ ವರ್ಗದ ಜನ ಪ್ರಬಲ ವರ್ಗದವರ ವಿರುದ್ಧ ಹೋಗಲು ಆಗಲ್ಲ. ಕೋರ್ಟ್​ಗಳಿಗೆ ಹೋಗಲು ಸಾಧ್ಯವಾಗದ ಸಾಕಷ್ಟು ಉದಾಹರಣೆ ಇವೆ. ಅಂಥವರಿಗೆ ನ್ಯಾಯ ಕೊಡಿಸುವ ಕೆಲಸ ನ್ಯಾ.ಬಿ.ವೀರಪ್ಪ ಮಾಡಿದ್ದಾರೆ. ನ್ಯಾ.ಬಿ.ವೀರಪ್ಪ ಸತತ 8 ವರ್ಷ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ನಿವೃತ್ತಿಯ ನಂತರವೂ ಅವರು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಹೇಳಿದರು.

ನ್ಯಾ.ಬಿ.ವೀರಪ್ಪ ತಮ್ಮ ಕೆಲಸದ ಮೂಲಕ ರಾಜ್ಯದ ಹೃದಯ ಗೆದ್ದಿದ್ದಾರೆ: ಡಿಸಿಎಂ 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗ ದೊಡ್ಡ ಸ್ಥಾನದಲ್ಲಿದೆ. ನ್ಯಾಬಿ.ವೀರಪ್ಪನವರ ಕಾರ್ಯದಿಂದ ರಾಜಕಾರಣಿ ಕಲಿಯುವುದು ಸಾಕಷ್ಟಿದೆ. ತಮ್ಮ ಕೆಲಸದ ಮೂಲಕ ರಾಜ್ಯದ ಹೃದಯ ಗೆದ್ದಿದ್ದಾರೆ. ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:52 pm, Wed, 31 May 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!