AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಸಿಎಂ ಸಿದ್ದರಾಮಯ್ಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ್ದಕ್ಕೆ ವ್ಯಕ್ತಿಗೆ ಕಪಾಳಮೋಕ್ಷ

ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟರ್ ನೋಡಿ ಬೈಯ್ದಿದ್ದಾನೆ. ಇದನ್ನು ಕಂಡ ಸಿದ್ದರಾಮಯ್ಯ ಅಭಿಮಾನಿಗಳು ವ್ಯಕ್ತಿಗೆ ಕಪಾಳಮೋಕ್ಷ ಮಾಡಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

Bengaluru News: ಸಿಎಂ ಸಿದ್ದರಾಮಯ್ಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ್ದಕ್ಕೆ ವ್ಯಕ್ತಿಗೆ ಕಪಾಳಮೋಕ್ಷ
ಸಿಎಂ ಸಿದ್ದರಾಮಯ್ಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ್ದಕ್ಕೆ ವ್ಯಕ್ತಿಗೆ ಕಪಾಳಮೋಕ್ಷ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 04, 2023 | 10:49 AM

Share

ಬೆಂಗಳೂರು: ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಪ್ರದರ್ಶನ ಹೆಚ್ಚಾಗುತ್ತಿದೆ. ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಬಗ್ಗೆ ಅವಾಚ್ಯವಾಗಿ ಮಾತನಾಡಿದ ಎಂಬ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಕೆಲ ಯುವಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟರ್ ನೋಡಿ ಬೈಯ್ದಿದ್ದಾನೆ. ಇದನ್ನು ಕಂಡ ಸಿದ್ದರಾಮಯ್ಯ ಅಭಿಮಾನಿಗಳು(Siddaramaiah Fans) ವ್ಯಕ್ತಿಗೆ ಕಪಾಳಮೋಕ್ಷ(Slap) ಮಾಡಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ವ್ಯಕ್ತಿಯನ್ನು ಸಿದ್ದರಾಮಯ್ಯ ಪೋಸ್ಟರ್ ಬಳಿ ಎಳೆ ತಂದು ಕ್ಷಮೆ ಕೇಳುವಂತೆ ಕೆನ್ನೆಗೆ ಬಾರಿಸಿದ್ದಾರೆ.​​ ಸಿದ್ದರಾಮಯ್ಯ ಅಲ್ಲದೇ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರ ಬಗ್ಗೆಯೂ ಈ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ತಿಳಿದು ಬಂದಿದೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದ ಸಿದ್ದರಾಮಯ್ಯ

ಕಳೆದ ಮಾರ್ಚ್ ತಿಂಗಳಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್​ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದರು. ಅದು ದೊಡ್ಡ ಮಟ್ಟಿಗೆ ಸುದ್ದಿಯಾಗಿತ್ತು. ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದರು. ಶಾಸಕ ರಾಮಪ್ಪ ಅವರಿಗೆ ಟಿಕೆಟ್​ ನೀಡಬೇಕೆಂದು ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತರು ಮಾರ್ಚ್ 24ರಂದು ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಆಗ್ರಹಿಸಿದರು. ಆ ವೇಳೆ ತಳ್ಳಾಟ ನೂಕಾಟದಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಕಾರ್ಯಕರ್ತನ ಕೆನ್ನೆಗೆ ಬಾರಿಸಿದ್ದರು. ವಿಡಿಯೋ ಫುಲ್​ ವೈರಲ್ ಆಗಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ