AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜು ಕಾಗೆ NWKRTC ಅಧ್ಯಕ್ಷ ಸ್ಥಾನ ಭದ್ರ: AICC ಪಟ್ಟಿಗೇ ಸಿಎಂ ಸರ್ಜರಿ

ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಅಧಿಕೃತ ಮುದ್ರೆ ಹಾಕಿದ್ದಾರೆ. ಎಐಸಿಸಿ ನೀಡಿದ್ದ ಪಟ್ಟಿಗೆ ತಮ್ಮದೇ ಆದ ಸರ್ಜರಿಯನ್ನ ಮುಖ್ಯಮಂತ್ರಿಗಳು ಮಾಡಿದ್ದು, ಹೈಕಮಾಂಡ್​ ಪಟ್ಟಿಯಲ್ಲಿ ಹೆಸರಿರದ ಇಬ್ಬರಿಗೆ ಜವಾಬ್ದಾರಿ ನೀಡಿದ್ದಾರೆ. NWKRTC ಅಧ್ಯಕ್ಷರಾಗಿ ರಾಜು ಕಾಗೆಯವರನ್ನ ಮುಂದುವರಿಸಿದ್ದು, ಅರುಣ್ ಕುಮಾರ್ ಪಾಟೀಲ್ ರನ್ನ KKRTC ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ರಾಜು ಕಾಗೆ NWKRTC ಅಧ್ಯಕ್ಷ ಸ್ಥಾನ ಭದ್ರ: AICC ಪಟ್ಟಿಗೇ ಸಿಎಂ ಸರ್ಜರಿ
ರಾಜು ಕಾಗೆ NWKRTC ಅಧ್ಯಕ್ಷ ಸ್ಥಾನ ಭದ್ರ
ಪ್ರಸನ್ನ ಗಾಂವ್ಕರ್​
| Edited By: |

Updated on: Sep 26, 2025 | 4:24 PM

Share

ಬೆಂಗಳೂರು, ಸೆಪ್ಟೆಂಬರ್​​ 26: ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತ ಮುದ್ರೆ ಹಾಕುವ ಮೂಲಕ ಎಲ್ಲ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ (Siddaramaiah) ತೆರೆ ಎಳೆದಿದ್ದಾರೆ. ಎಐಸಿಸಿ ಪಟ್ಟಿಯಲ್ಲಾಗಿದ್ದ ಗೊಂದಲವನ್ನ ಸಿಎಂ ಸರಿಪಡಿಸಿದ್ದು, NWKRTC ಅಧ್ಯಕ್ಷರಾಗಿ ಕಾಗವಾಡ ಕ್ಷೇತ್ರದ ಕಾಂಗ್ರೆಸ್​​​ ಶಾಸಕ ರಾಜು ಕಾಗೆ ಅವರನ್ನೇ ಮುಂದುವರಿಸಲಾಗಿದೆ. KKRTC ಅಧ್ಯಕ್ಷರಾಗಿ ಅರುಣ್ ಕುಮಾರ್ ಪಾಟೀಲ್ ರನ್ನ ನೇಮಕ ಮಾಡಲಾಗಿದೆ.

AICC ನೀಡಿದ್ದ ಪಟ್ಟಿಗೆ ಸಿಎಂ ಸರ್ಜರಿ

AICC ನೀಡಿದ್ದ ಪಟ್ಟಿ ಪ್ರಕಾರ ನೀಲಕಂಠ ಮುಳಗೆಗೆ ಹಂಚಿಕೆಯಾಗಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಗಮದ ಅಧ್ಯಕ್ಷ ಸ್ಥಾನವನ್ನು ಅರುಣ್‌ ಕುಮಾರ್ ಪಾಟೀಲ್ ಗೆ ನೀಡಲಾಗಿದೆ. ಮೈಸೂರು ಪೇಂಟ್ಸ್, ವಾರ್ನಿಶ್ ಲಿಮಿಟೆಡ್ ನಿಗಮಕ್ಕೆ ಹೆಚ್‌.ಡಿ ಗಣೇಶ್ ಮತ್ತು BMTC ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯರನ್ನ ನೇಮಿಸಲಾಗಿದೆ. AICC ಪಟ್ಟಿಯಲ್ಲಿ ಹೆಚ್.ಡಿ. ಗಣೇಶ್ ಮತ್ತು ನಿಕೇತ್ ರಾಜ್ ಇಬ್ಬರ ಹೆಸರು ಇಲ್ಲದಿದ್ದರೂ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಆ ಮೂಲಕ ಎಐಸಿಸಿ ಪಟ್ಟಿಗೆ ಸಿಎಂ ಸಿದ್ದರಾಮಯ್ಯ ತಮ್ಮದೇ ಸರ್ಜರಿ ಮಾಡಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ಇಲಾಖೆಗಳಿಗೆ ಪಟ್ಟಿ ರವಾನೆಯಾಗಿದೆ.

ಇದನ್ನೂ ಓದಿ: ಸಿಎಂ ಜಾತಿಗಣತಿ ಸಭೆ:ಈವರೆಗೆ ಎಷ್ಟು ಸಮೀಕ್ಷೆಯಾಗಿದೆ? ಒಟ್ಟು ಎಷ್ಟು ಆಗ್ಬೇಕು? ಇಲ್ಲಿದೆ ವಿವರ

ಕೊಟ್ಟ ಮಾತು ಉಳಿಸಿಕೊಂಡ ಸಿಎಂ

ಎಐಸಿಸಿ ಕಳಿಸಿದ್ದ ಪಟ್ಟಿಯಲ್ಲಿ NWKRTC ಅಧ್ಯಕ್ಷರಾಗಿ ಅರುಣ್ ಪಾಟೀಲ್ ಹೆಸರು ಉಲ್ಲೇಖ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಕಾಗವಾಡ ಕ್ಷೇತ್ರದ ಕಾಂಗ್ರೆಸ್​​​ ಶಾಸಕ ರಾಜು ಕಾಗೆ ಭೇಟಿಯಾಗಿದ್ದರು. ನಿಮ್ಮನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ ಕೈಬಿಟ್ಟಿಲ್ಲ ಎಂದು ಈ ವೇಳೆ ತಿಳಿಸಿದ್ದ ಮುಖ್ಯಮಂತ್ರಿಗಳು, ಪ್ರಿಂಟ್​ ಮಿಸ್ಟೇಕ್​​ ಆಗಿದೆ. ಅದನ್ನು ಹೊರತುಪಡಿಸಿ ಯಾವ ಸಮಸ್ಯೆ ಇಲ್ಲ. ನಿಮ್ಮನ್ನೇ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸೋದಾಗಿ ರಾಜು ಕಾಗೆ ಅವರಿಗೆ ತಿಳಿಸಿದ್ದರು. ಕೊಟ್ಟ ಮಾತಿನಂತೆಯೇ ರಾಜು ಕಾಗೆ ಅವರನ್ನ NWKRTC ಅಧ್ಯಕ್ಷ ಸ್ಥಾನದಲ್ಲಿ ಮಂದುವರಿಸಲಾಗಿದೆ.

ಎಐಸಿಸಿ ರವಾನಿಸಿದ್ದ ಪಟ್ಟಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಅರುಣ್ ಪಾಟೀಲ್ ಹೆಸರನ್ನು ಉಲ್ಲೇಖಿಸಲಾಗಿತ್ತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್​ ಸಿಎಂಗೆ ರವಾನಿಸಿದ್ದ ಪಟ್ಟಿಯಲ್ಲಿಯೇ ಮಾಹಿತಿ ಹೀಗಿದ್ದ ಕಾರಣ ಕಾಗವಾಡ ಕ್ಷೇತ್ರದ ಕಾಂಗ್ರೆಸ್​​​ ಶಾಸಕ ರಾಜು ಕಾಗೆ ಅವರನ್ನ NWKRTC ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂಬ ಸುದ್ದಿ ಹರಿದಾಡಿ ಗೊಂದಲ ಉಂಟಾಗಿತ್ತು. ಅಂತಿಮವಾಗಿ ಅವಕ್ಕೆಲ್ಲ ಈಗ ತೆರೆ ಬಿದ್ದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?