AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಸಂತೆಗೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ಸಿದ್ದರಾಮಯ್ಯ ಭರವಸೆ

ಚಿತ್ರಕಲಾ ಪರಿಷತ್ ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು (ಜ.07) 21ನೇ ಚಿತ್ರಸಂತೆ ಆಯೋಜಿಸಿದೆ.ಈ ಬಾರಿ ಶಿವನಂದ ಸರ್ಕಲ್​​ನಿಂದ ಸ್ಟೀಲ್ ಬ್ರಿಡ್ಜ್ ಕೆಳಗಿನವರೆಗೆ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಚಿತ್ರಸಂತೆಯಲ್ಲಿ 100 ರೂ.ದಿಂದ ಆರಂಭವಾಗಿ ಲಕ್ಷದವರೆಗೂ ಚಿತ್ರಕಲೆಗಳು ಮಾರಾಟಕ್ಕೆ ಇರಲಿವೆ.

ಚಿತ್ರಸಂತೆಗೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ಸಿದ್ದರಾಮಯ್ಯ ಭರವಸೆ
ಸಿಎಂ ಸಿದ್ದರಾಮಯ್ಯ
Poornima Agali Nagaraj
| Edited By: |

Updated on: Jan 07, 2024 | 10:56 AM

Share

ಬೆಂಗಳೂರು, ಜನವರಿ 07: ಚಿತ್ರಕಲಾ ಪರಿಷತ್ (Chitrakala Parishatha) ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು (ಜ.07) 21ನೇ ಚಿತ್ರಸಂತೆ (Chitra Santhe 2024) ಆಯೋಜಿಸಿದೆ. ಈ ಚಿತ್ರಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, 1,500ಕ್ಕೂ ಹೆಚ್ಚು ಕಲಾವಿದರು ಚಿತ್ರಸಂತೆಯಲ್ಲಿ ಭಾಗವಹಿಸಿದ್ದಾರೆ. 24 ರಾಜ್ಯದ ಕಲಾವಿದರಿಗೆ ನನ್ನ ಕಡೆಯಿಂದ ಅಭಿನಂದನೆ. ಇನ್ಮುಂದೆ ಚಿತ್ರಸಂತೆಗೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ನೀಡುತ್ತೇನೆ ಎಂದರು.

ಅತ್ಯಂತ ಸಂತೋಷದಿಂದ ಚಿತ್ರಸಂತೆಯನ್ನ ಉದ್ಘಾಟನೆ ಮಾಡಿದ್ದೇನೆ. 3 ರಿಂದ 4 ಲಕ್ಷ ಜನರು ಬರುತ್ತಾರೆ. ಬಿಎಲ್ ಶಂಕರ್ ಅವರು ಅರ್ಟ್ ಗ್ಯಾಲರಿ ಬಗ್ಗೆ ಹೇಳಿದ್ದಾರೆ. ನಮ್ಮ ಸರ್ಕಾರ ಅದಕ್ಕೆ ಬೆಂಬಲಿಸಲಿದೆ. ನಮ್ಮ ಸರ್ಕಾರ ತೆರೆದ ಮನಸ್ಸಿನಲ್ಲಿದೆ. ಎಲ್ಲಾ ರೀತಿಯಾ ಸಹಕಾರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಮಾತನಾಡಿ, ಇಂದಿನ ಚಿತ್ರಸಂತೆಯನ್ನು ಇಸ್ರೋ ವಿಜ್ಞಾನಿಗಳಿಗೆ ಅರ್ಪಿಸಿದ್ದೇವೆ. ಈ ಬಾರಿ ಚಿತ್ರಸಂತೆಯಲ್ಲಿ 1680 ಕಲಾವಿದರು ಭಾಗಿಯಾಗಿದ್ದಾರೆ. 205 ವಿಶೇಷಚೇತನರು, ಹಿರಿಯ ಕಲಾವಿದರು ಭಾಗಿಯಾಗಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಚಿತ್ರಸಂತೆಗೆ ಬೆಂಗಳೂರು ಸಜ್ಜು: ವಿಶೇಷ ಮೆಟ್ರೋ ಫೀಡರ್​​ ಸೇವೆ, ಮಾರ್ಗ ಬದಲಾವಣೆ ಕುರಿತಾದ ಮಾಹಿತಿ ಇಲ್ಲಿದೆ

ಇನ್ನು ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್​.ಕೆ.ಪಾಟೀಲ್, ಎಂ.ಸಿ.ಸುಧಾಕರ್, ಶಾಸಕರಾದ ಅಜಯ್ ಸಿಂಗ್​, ರಿಜ್ವಾನ್ ಅರ್ಷದ್​ ಸೇರಿ ಹಲವರು ಭಾಗಿಯಾಗಿದ್ದರು.

ಕಲಾವಿದರಿಂದ ನೇರವಾಗಿ ಮಾರಾಟ

ಈ ಬಾರಿ ಶಿವನಂದ ಸರ್ಕಲ್​​ನಿಂದ ಸ್ಟೀಲ್ ಬ್ರಿಡ್ಜ್ ಕೆಳಗಿನವರೆಗೆ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಲಕ್ಷಂತರ‌ ಜನರು ಚಿತ್ರಸಂತೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಚಿತ್ರಸಂತೆಯಲ್ಲಿ 100 ರೂ.ದಿಂದ ಆರಂಭವಾಗಿ ಲಕ್ಷದವರೆಗೂ ಚಿತ್ರಕಲೆಗಳು ಮಾರಾಟಕ್ಕೆ ಇರಲಿವೆ. ಮೈಸೂರು ಶೈಲಿಯ ಕಲೆ, ತಂಜಾವೂರಿನ ಶೈಲಿ, ರಾಜಾಸ್ಥಾನಿ ಶೈಲಿ, ಮಧುಬನಿ ಶೈಲಿ, ತೈಲ‌ ಮತ್ತು ಜಲವರ್ಣಗಳಲ್ಲಿ ಚಿತ್ರಗಳನ್ನು ಬಿಡಸಲಾಗುತ್ತದೆ. ಅಲ್ಲದೇ ಆಕ್ರಿಕಲ್ , ಕೊಲಾಜ್, ಲಿಯೋಗ್ರಾಫ್, ಡೂಡಲ್ ಎಂಬೋಸಿಂಗ್ , ವಿಡಿಯೋ ಕಲೆ, ಗ್ರಾಫಿಕ್ ಕಲೆ , ಶಿಲ್ಪ ಕಲೆ, ಇನ್ ಸ್ಟಲೇಶನ್, ಫಾರ್ಮಾಮೆನ್ಸ್ ಸೇರಿದಂತೆ ಹಲವು ಪ್ರತಿಷ್ಠಾಪನ ಕಲೆಗಳಿಗೆ ಹೆಚ್ಚು ಒತ್ತು ನೀಡಲಾಗಿದೆ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ