AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಸಂತೆಗೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ಸಿದ್ದರಾಮಯ್ಯ ಭರವಸೆ

ಚಿತ್ರಕಲಾ ಪರಿಷತ್ ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು (ಜ.07) 21ನೇ ಚಿತ್ರಸಂತೆ ಆಯೋಜಿಸಿದೆ.ಈ ಬಾರಿ ಶಿವನಂದ ಸರ್ಕಲ್​​ನಿಂದ ಸ್ಟೀಲ್ ಬ್ರಿಡ್ಜ್ ಕೆಳಗಿನವರೆಗೆ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಚಿತ್ರಸಂತೆಯಲ್ಲಿ 100 ರೂ.ದಿಂದ ಆರಂಭವಾಗಿ ಲಕ್ಷದವರೆಗೂ ಚಿತ್ರಕಲೆಗಳು ಮಾರಾಟಕ್ಕೆ ಇರಲಿವೆ.

ಚಿತ್ರಸಂತೆಗೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ಸಿದ್ದರಾಮಯ್ಯ ಭರವಸೆ
ಸಿಎಂ ಸಿದ್ದರಾಮಯ್ಯ
Poornima Agali Nagaraj
Poornima Agali Nagaraj| Edited By: ವಿವೇಕ ಬಿರಾದಾರ|

Updated on: Jan 07, 2024 | 10:56 AM

Share

ಬೆಂಗಳೂರು, ಜನವರಿ 07: ಚಿತ್ರಕಲಾ ಪರಿಷತ್ (Chitrakala Parishatha) ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು (ಜ.07) 21ನೇ ಚಿತ್ರಸಂತೆ (Chitra Santhe 2024) ಆಯೋಜಿಸಿದೆ. ಈ ಚಿತ್ರಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, 1,500ಕ್ಕೂ ಹೆಚ್ಚು ಕಲಾವಿದರು ಚಿತ್ರಸಂತೆಯಲ್ಲಿ ಭಾಗವಹಿಸಿದ್ದಾರೆ. 24 ರಾಜ್ಯದ ಕಲಾವಿದರಿಗೆ ನನ್ನ ಕಡೆಯಿಂದ ಅಭಿನಂದನೆ. ಇನ್ಮುಂದೆ ಚಿತ್ರಸಂತೆಗೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ನೀಡುತ್ತೇನೆ ಎಂದರು.

ಅತ್ಯಂತ ಸಂತೋಷದಿಂದ ಚಿತ್ರಸಂತೆಯನ್ನ ಉದ್ಘಾಟನೆ ಮಾಡಿದ್ದೇನೆ. 3 ರಿಂದ 4 ಲಕ್ಷ ಜನರು ಬರುತ್ತಾರೆ. ಬಿಎಲ್ ಶಂಕರ್ ಅವರು ಅರ್ಟ್ ಗ್ಯಾಲರಿ ಬಗ್ಗೆ ಹೇಳಿದ್ದಾರೆ. ನಮ್ಮ ಸರ್ಕಾರ ಅದಕ್ಕೆ ಬೆಂಬಲಿಸಲಿದೆ. ನಮ್ಮ ಸರ್ಕಾರ ತೆರೆದ ಮನಸ್ಸಿನಲ್ಲಿದೆ. ಎಲ್ಲಾ ರೀತಿಯಾ ಸಹಕಾರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಮಾತನಾಡಿ, ಇಂದಿನ ಚಿತ್ರಸಂತೆಯನ್ನು ಇಸ್ರೋ ವಿಜ್ಞಾನಿಗಳಿಗೆ ಅರ್ಪಿಸಿದ್ದೇವೆ. ಈ ಬಾರಿ ಚಿತ್ರಸಂತೆಯಲ್ಲಿ 1680 ಕಲಾವಿದರು ಭಾಗಿಯಾಗಿದ್ದಾರೆ. 205 ವಿಶೇಷಚೇತನರು, ಹಿರಿಯ ಕಲಾವಿದರು ಭಾಗಿಯಾಗಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಚಿತ್ರಸಂತೆಗೆ ಬೆಂಗಳೂರು ಸಜ್ಜು: ವಿಶೇಷ ಮೆಟ್ರೋ ಫೀಡರ್​​ ಸೇವೆ, ಮಾರ್ಗ ಬದಲಾವಣೆ ಕುರಿತಾದ ಮಾಹಿತಿ ಇಲ್ಲಿದೆ

ಇನ್ನು ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್​.ಕೆ.ಪಾಟೀಲ್, ಎಂ.ಸಿ.ಸುಧಾಕರ್, ಶಾಸಕರಾದ ಅಜಯ್ ಸಿಂಗ್​, ರಿಜ್ವಾನ್ ಅರ್ಷದ್​ ಸೇರಿ ಹಲವರು ಭಾಗಿಯಾಗಿದ್ದರು.

ಕಲಾವಿದರಿಂದ ನೇರವಾಗಿ ಮಾರಾಟ

ಈ ಬಾರಿ ಶಿವನಂದ ಸರ್ಕಲ್​​ನಿಂದ ಸ್ಟೀಲ್ ಬ್ರಿಡ್ಜ್ ಕೆಳಗಿನವರೆಗೆ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಲಕ್ಷಂತರ‌ ಜನರು ಚಿತ್ರಸಂತೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಚಿತ್ರಸಂತೆಯಲ್ಲಿ 100 ರೂ.ದಿಂದ ಆರಂಭವಾಗಿ ಲಕ್ಷದವರೆಗೂ ಚಿತ್ರಕಲೆಗಳು ಮಾರಾಟಕ್ಕೆ ಇರಲಿವೆ. ಮೈಸೂರು ಶೈಲಿಯ ಕಲೆ, ತಂಜಾವೂರಿನ ಶೈಲಿ, ರಾಜಾಸ್ಥಾನಿ ಶೈಲಿ, ಮಧುಬನಿ ಶೈಲಿ, ತೈಲ‌ ಮತ್ತು ಜಲವರ್ಣಗಳಲ್ಲಿ ಚಿತ್ರಗಳನ್ನು ಬಿಡಸಲಾಗುತ್ತದೆ. ಅಲ್ಲದೇ ಆಕ್ರಿಕಲ್ , ಕೊಲಾಜ್, ಲಿಯೋಗ್ರಾಫ್, ಡೂಡಲ್ ಎಂಬೋಸಿಂಗ್ , ವಿಡಿಯೋ ಕಲೆ, ಗ್ರಾಫಿಕ್ ಕಲೆ , ಶಿಲ್ಪ ಕಲೆ, ಇನ್ ಸ್ಟಲೇಶನ್, ಫಾರ್ಮಾಮೆನ್ಸ್ ಸೇರಿದಂತೆ ಹಲವು ಪ್ರತಿಷ್ಠಾಪನ ಕಲೆಗಳಿಗೆ ಹೆಚ್ಚು ಒತ್ತು ನೀಡಲಾಗಿದೆ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!