AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಸಂತೆಗೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ಸಿದ್ದರಾಮಯ್ಯ ಭರವಸೆ

ಚಿತ್ರಕಲಾ ಪರಿಷತ್ ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು (ಜ.07) 21ನೇ ಚಿತ್ರಸಂತೆ ಆಯೋಜಿಸಿದೆ.ಈ ಬಾರಿ ಶಿವನಂದ ಸರ್ಕಲ್​​ನಿಂದ ಸ್ಟೀಲ್ ಬ್ರಿಡ್ಜ್ ಕೆಳಗಿನವರೆಗೆ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಚಿತ್ರಸಂತೆಯಲ್ಲಿ 100 ರೂ.ದಿಂದ ಆರಂಭವಾಗಿ ಲಕ್ಷದವರೆಗೂ ಚಿತ್ರಕಲೆಗಳು ಮಾರಾಟಕ್ಕೆ ಇರಲಿವೆ.

ಚಿತ್ರಸಂತೆಗೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ಸಿದ್ದರಾಮಯ್ಯ ಭರವಸೆ
ಸಿಎಂ ಸಿದ್ದರಾಮಯ್ಯ
Poornima Agali Nagaraj
Poornima Agali Nagaraj| Edited By: ವಿವೇಕ ಬಿರಾದಾರ|

Updated on: Jan 07, 2024 | 10:56 AM

Share

ಬೆಂಗಳೂರು, ಜನವರಿ 07: ಚಿತ್ರಕಲಾ ಪರಿಷತ್ (Chitrakala Parishatha) ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು (ಜ.07) 21ನೇ ಚಿತ್ರಸಂತೆ (Chitra Santhe 2024) ಆಯೋಜಿಸಿದೆ. ಈ ಚಿತ್ರಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, 1,500ಕ್ಕೂ ಹೆಚ್ಚು ಕಲಾವಿದರು ಚಿತ್ರಸಂತೆಯಲ್ಲಿ ಭಾಗವಹಿಸಿದ್ದಾರೆ. 24 ರಾಜ್ಯದ ಕಲಾವಿದರಿಗೆ ನನ್ನ ಕಡೆಯಿಂದ ಅಭಿನಂದನೆ. ಇನ್ಮುಂದೆ ಚಿತ್ರಸಂತೆಗೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ನೀಡುತ್ತೇನೆ ಎಂದರು.

ಅತ್ಯಂತ ಸಂತೋಷದಿಂದ ಚಿತ್ರಸಂತೆಯನ್ನ ಉದ್ಘಾಟನೆ ಮಾಡಿದ್ದೇನೆ. 3 ರಿಂದ 4 ಲಕ್ಷ ಜನರು ಬರುತ್ತಾರೆ. ಬಿಎಲ್ ಶಂಕರ್ ಅವರು ಅರ್ಟ್ ಗ್ಯಾಲರಿ ಬಗ್ಗೆ ಹೇಳಿದ್ದಾರೆ. ನಮ್ಮ ಸರ್ಕಾರ ಅದಕ್ಕೆ ಬೆಂಬಲಿಸಲಿದೆ. ನಮ್ಮ ಸರ್ಕಾರ ತೆರೆದ ಮನಸ್ಸಿನಲ್ಲಿದೆ. ಎಲ್ಲಾ ರೀತಿಯಾ ಸಹಕಾರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಮಾತನಾಡಿ, ಇಂದಿನ ಚಿತ್ರಸಂತೆಯನ್ನು ಇಸ್ರೋ ವಿಜ್ಞಾನಿಗಳಿಗೆ ಅರ್ಪಿಸಿದ್ದೇವೆ. ಈ ಬಾರಿ ಚಿತ್ರಸಂತೆಯಲ್ಲಿ 1680 ಕಲಾವಿದರು ಭಾಗಿಯಾಗಿದ್ದಾರೆ. 205 ವಿಶೇಷಚೇತನರು, ಹಿರಿಯ ಕಲಾವಿದರು ಭಾಗಿಯಾಗಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಚಿತ್ರಸಂತೆಗೆ ಬೆಂಗಳೂರು ಸಜ್ಜು: ವಿಶೇಷ ಮೆಟ್ರೋ ಫೀಡರ್​​ ಸೇವೆ, ಮಾರ್ಗ ಬದಲಾವಣೆ ಕುರಿತಾದ ಮಾಹಿತಿ ಇಲ್ಲಿದೆ

ಇನ್ನು ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್​.ಕೆ.ಪಾಟೀಲ್, ಎಂ.ಸಿ.ಸುಧಾಕರ್, ಶಾಸಕರಾದ ಅಜಯ್ ಸಿಂಗ್​, ರಿಜ್ವಾನ್ ಅರ್ಷದ್​ ಸೇರಿ ಹಲವರು ಭಾಗಿಯಾಗಿದ್ದರು.

ಕಲಾವಿದರಿಂದ ನೇರವಾಗಿ ಮಾರಾಟ

ಈ ಬಾರಿ ಶಿವನಂದ ಸರ್ಕಲ್​​ನಿಂದ ಸ್ಟೀಲ್ ಬ್ರಿಡ್ಜ್ ಕೆಳಗಿನವರೆಗೆ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಲಕ್ಷಂತರ‌ ಜನರು ಚಿತ್ರಸಂತೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಚಿತ್ರಸಂತೆಯಲ್ಲಿ 100 ರೂ.ದಿಂದ ಆರಂಭವಾಗಿ ಲಕ್ಷದವರೆಗೂ ಚಿತ್ರಕಲೆಗಳು ಮಾರಾಟಕ್ಕೆ ಇರಲಿವೆ. ಮೈಸೂರು ಶೈಲಿಯ ಕಲೆ, ತಂಜಾವೂರಿನ ಶೈಲಿ, ರಾಜಾಸ್ಥಾನಿ ಶೈಲಿ, ಮಧುಬನಿ ಶೈಲಿ, ತೈಲ‌ ಮತ್ತು ಜಲವರ್ಣಗಳಲ್ಲಿ ಚಿತ್ರಗಳನ್ನು ಬಿಡಸಲಾಗುತ್ತದೆ. ಅಲ್ಲದೇ ಆಕ್ರಿಕಲ್ , ಕೊಲಾಜ್, ಲಿಯೋಗ್ರಾಫ್, ಡೂಡಲ್ ಎಂಬೋಸಿಂಗ್ , ವಿಡಿಯೋ ಕಲೆ, ಗ್ರಾಫಿಕ್ ಕಲೆ , ಶಿಲ್ಪ ಕಲೆ, ಇನ್ ಸ್ಟಲೇಶನ್, ಫಾರ್ಮಾಮೆನ್ಸ್ ಸೇರಿದಂತೆ ಹಲವು ಪ್ರತಿಷ್ಠಾಪನ ಕಲೆಗಳಿಗೆ ಹೆಚ್ಚು ಒತ್ತು ನೀಡಲಾಗಿದೆ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ