AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ ರೈಲು ದುರಂತದ ಬಗ್ಗೆ ವರದಿ ಸಲ್ಲಿಸುವಂತೆ ಸಿಎಸ್ ವಂದಿತಾ ಶರ್ಮಾಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಒಡಿಶಾದ ಬಹನಾಗ ನಿಲ್ದಾಣದ ಬಳಿ 3 ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಅಪಘಾತ ನಡೆದ ಸಂಬಂಧ ವರದಿ ಸಲ್ಲಿಸುವಂತೆ ಸಿಎಸ್​​ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಒಡಿಶಾ ರೈಲು ದುರಂತದ ಬಗ್ಗೆ ವರದಿ ಸಲ್ಲಿಸುವಂತೆ ಸಿಎಸ್ ವಂದಿತಾ ಶರ್ಮಾಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಿದ್ದರಾಮಯ್ಯ, ಮುಖ್ಯಮಂತ್ರಿ
ಆಯೇಷಾ ಬಾನು
|

Updated on: Jun 03, 2023 | 1:31 PM

Share

ಬೆಂಗಳೂರು: ಒಡಿಶಾದ ಬಹನಾಗ ನಿಲ್ದಾಣದ ಬಳಿ 3 ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಅಪಘಾತ(Odisha Train Accident) ನಡೆದ ಸಂಬಂಧ ಸಿಎಸ್ ವಂದಿತಾ ಶರ್ಮಾ(Vandita Sharma) ಅವರು ಸಿಎಂ ಸಿದ್ದರಾಮಯ್ಯನವರನ್ನು(Siddaramaiah) ಭೇಟಿ ಮಾಡಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಕರ್ನಾಟಕದ ಎಷ್ಟು ಪ್ರಯಾಣಿಕರು ದುರಂತ ನಡೆದ ರೈಲಿನಲ್ಲಿದ್ದರು. ರೈಲು ದುರಂತದಿಂದ ನಮ್ಮ ರಾಜ್ಯದವರಿಗೆ ಏನಾದರು ಆಗಿದೆಯಾ? ಎಂಬ ಬಗ್ಗೆ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಇನ್ನು ಈ ಸಂಬಂಧ ವರದಿ ಸಲ್ಲಿಸುವಂತೆ ಸಿಎಸ್​​ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇನ್ನು ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅವರಿಗೆ ಅಗತ್ಯ ನೆರವನ್ನು ಒದಗಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ಸಂಪೂರ್ಣ ನೆರವು ನೀಡಲಾಗುವುದು. “ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ” ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಮಧ್ಯಾಹ್ನ 2.30ಕ್ಕೆ ಭುವನೇಶ್ವರಕ್ಕೆ ತೆರಳುವ ಸಂತೋಷ್ ಲಾಡ್

ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಧ್ಯಾಹ್ನ 2.30 ಕ್ಕೆ ಅಧಿಕಾರಿಗಳೊಂದಿಗೆ ಬೆಂಗಳೂರಿನಿಂದ ಭುವನೇಶ್ವರಕ್ಕೆ ತೆರಳಲಿದ್ದಾರೆ. ಚಾರ್ಟರ್ಡ್ ಫ್ಲೈಟ್ ಮೂಲಕ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ತಂಡದ ಜೊತೆ ತೆರಳುತ್ತಿದ್ದು ಕನ್ನಡಿಗರ ಸುರಕ್ಷತೆ ಬಗ್ಗೆ ರೈಲ್ವೇ ಡಿಐಜಿಯಿಂದ ಮಾಹಿತಿ ಪಡೆಯಲಿದ್ದಾರೆ. ಸದ್ಯ ದೂರವಾಣಿ ಮೂಲಕ ರೈಲ್ವೆ ಡಿಐಜಿ ಶಶಿಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ.

ಇನ್ನು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಶೇಷ ವಿಮಾನದ ಮೂಲಕ ಒಡಿಶಾದ ಭುವನೇಶ್ವರಕ್ಕೆ ತೆರಳ್ತಿದ್ದೇನೆ. ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ಜೊತೆ ಹೋಗುತ್ತಿದ್ದೇನೆ. ಭುವನೇಶ್ವರದಿಂದ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ತೆರಳಬೇಕಾಗಿದೆ. ಸುರಕ್ಷಿತವಾಗಿ ಕನ್ನಡಿಗರನ್ನು ಕರೆತರುವುದು ನಮ್ಮ ಜವಾಬ್ದಾರಿ ಆಗಿದೆ. ಕನ್ನಡಿಗರಿಗೆ ಯಾವುದೇ ತೊಂದರೆ ಇದ್ದರೆ ಚಿಕಿತ್ಸೆ ಕೊಡಿಸಲು ಕ್ರಮ ಕೈಗೊಳ್ಳಲಾಗುತ್ತೆ. ಪ್ರಾಥಮಿಕ ಮಾಹಿತಿ ಪ್ರಕಾರ ಕನ್ನಡಿಗರಿಗೆ ಯಾವ ಸಮಸ್ಯೆ ಆಗಿಲ್ಲ. ದುರಂತ ಸ್ಥಳದಲ್ಲಿರುವ ಕನ್ನಡಿಗರು ನನಗೆ ಕರೆ ಮಾಡಬಹುದು. ನನ್ನ ಮೊಬೈಲ್ ಸಂಖ್ಯೆ 9845739999ಗೆ ಸಂಪರ್ಕಿಸಬಹುದು. ಕನ್ನಡಿಗರನ್ನು ಕರೆತರುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ