AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು ಮಳೆ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು, ‘ಬೆಂಗಳೂರು ನಗರದಲ್ಲಿ ಕಂಟ್ರೋಲ್‌ ರೂಂ ಗಳನ್ನು ಗುರುತಿಸಲಾಗಿದೆ. ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು. ಜೊತೆಗೆ ಕೋಡಿಗೆ ಗೇಟ್‌ ಅಳವಡಿಸುವ ಮೂಲಕ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ ತಡೆಗಟ್ಟಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ  ಸಿಎಂ ಖಡಕ್ ಸೂಚನೆ
ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಸಿಎಂ ಖಡಕ್ ಸೂಚನೆ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Aug 16, 2024 | 8:59 PM

Share

ಬೆಂಗಳೂರು, ಆ.16: ಬೆಂಗಳೂರು ಮಳೆ(Bengaluru Rain) ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು, ‘ ಬೆಂಗಳೂರು ನಗರದಲ್ಲಿ ಕಂಟ್ರೋಲ್‌ ರೂಂ ಗಳನ್ನು ಗುರುತಿಸಲಾಗಿದೆ. ದೊಡ್ಡ ಚರಂಡಿಗಳು ಓಪನ್‌ ಇರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್‌ ಮಾಡಲಾಗಿದೆ. ಇದರಿಂದ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನು ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು. ಜೊತೆಗೆ ಕೋಡಿಗೆ ಗೇಟ್‌ ಅಳವಡಿಸುವ ಮೂಲಕ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ ತಡೆಗಟ್ಟಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು, ಪ್ರತಿದಿನ ನಗರದ ಪರಿಸ್ಥಿತಿ ಕುರಿತು ಸಭೆ ನಡೆಸಿ ಪರಿಶೀಲಿಸಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಿದರು. ಇದೇ ವೇಳೆ ವಲಯ ಆಯುಕ್ತರ ಸಭೆ ನಡೆಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹಾಗೂ ಎಂಜಿನಿಯರ್​ಗಳಿಗೆ ಜವಾಬ್ದಾರಿ ನಿಗದಿ ಪಡಿಸಿ. ಕರ್ತವ್ಯಲೋಪ ಎಸಗಿದರೆ, ಮುಲಾಜಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ಕೊಟ್ಟರು. ಅಲ್ಲದೆ, ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಸಂಸ್ಥೆಗಳಾದ ಬಿಡಿಎ, ಬಿಡಬ್ಲ್ಯುಎಸ್​ಎಸ್​ಬಿ, ಬಿಎಂಆರ್​ಸಿಎಲ್‌, ಬಿಬಿಎಂಪಿ ಮೊದಲಾದವುಗಳ ನಡುವೆ ಸಮನ್ವಯ ವಹಿಸಲು ಹೇಳಿದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ: ವಾಹನ ಸವಾರರು ಪರದಾಟ, ಆಟೋ ಮೇಲೆ ಬಿದ್ದ ಮರ

ಇನ್ನು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಅಧೀನದಲ್ಲಿರುವ ಅಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು. ನಗರ ಮತ್ತು ಪಟ್ಟಣಗಳಲ್ಲಿ ಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಚರಂಡಿಗಳ ಸ್ವಚ್ಚತೆಯನ್ನು ನಿರಂತರವಾಗಿ ಮಾಡಬೇಕು. 210 ಕೋಟಿ ರೂಪಾಯಿಯನ್ನು ರಾಜ್ಯ ಹೆದ್ದಾರಿಗಳ ದುರಸ್ತಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದರು.

ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ

ಪ್ರವಾಹದ ವೇಳೆ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಈಗಾಗಲೇ ಡೆಂಗ್ಯು ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಚಿಕುನ್‌ಗುನ್ಯಾ, ಮಲೇರಿಯಾ ರೋಗ ಹರಡದಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ವಹಿಸಿ ಎಂದರು. ಜೊತೆಗೆ ಪ್ರವಾಹ, ಭಾರಿ ಮಳೆ ಸಂದರ್ಭದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡರೆ, ಕೂಡಲೇ ಸರಿಪಡಿಸಲು ಸಿದ್ಧತೆ ಮಾಡಿಕೊಳ್ಳಲು ಅಗತ್ಯವಿರುವ ಟ್ರಾನ್ಸ್‌ಫಾರ್ಮರ್‌ಗಳು, ಕಂಬಗಳನ್ನು ಲಭ್ಯಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:56 pm, Fri, 16 August 24

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ