ಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಕರವೇ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಏನಂದ್ರು ಗೊತ್ತಾ?

ಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಆಗ್ರಹಿಸಿ ಇಂದು (ಡಿ.27) ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಕೋಲಾರ(Kolar)ದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah)ನವರು, ಕಾನೂನು ಕೈಗೆ ತೆಗೆದುಕೊಂಡರೆ ಅಂಥವರ ವಿರುದ್ಧಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರಂತೆ.

ಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಕರವೇ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಏನಂದ್ರು ಗೊತ್ತಾ?
ಸಿದ್ದರಾಮಯ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 27, 2023 | 6:25 PM

ಬೆಂಗಳೂರು, ಡಿ.27: ಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಆಗ್ರಹಿಸಿ ಇಂದು (ಡಿ.27) ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಕೋಲಾರ(Kolar)ದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah)ನವರು ‘ನಾರಾಯಣಗೌಡ ಬಣದವರು ಕನ್ನಡ ನಾಮಫಲಕ ಹಾಕುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಈ ವೇಳೆ ಕಾನೂನು ಕೈಗೆ ತೆಗೆದುಕೊಂಡರೆ ಅಂಥವರ ವಿರುದ್ಧಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಇನ್ನು ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮಾತನಾಡಿ ‘ ಯಾವುದೇ ಹೋರಾಟಗಾರರು ಕಾನೂನು ಕೈಗೆತ್ತಿಕೊಳ್ಳುವುದು ಬೇಡ. ಪ್ರತಿಭಟನಾಕಾರರು ಮತ್ತೊಬ್ಬರಿಗೆ ತೊಂದರೆ ನೀಡಬಾರದು ಎಂದರು. ಕಡ್ಡಾಯ ಕನ್ನಡ ನಾಮ ಫಲಕ ಹಾಕಲು, ಕಾನೂನು ತರಲು ಅಧಿವೇಶನದಲ್ಲಿ ಬಿಲ್ ಪಾಸ್ ಮಾಡಿದ್ದೇವೆ. ಕನ್ನಡ ಪರ ಸಂಘಟನೆಗಳಂತೆ ನಮ್ಮ ಇಲಾಖೆ ಕೆಲಸ ಮಾಡಲಿದೆ. ಇಲ್ಲಿ ಬಂದವರಿಗೆ ಕನ್ನಡ ಕಲಿಸಬೇಕು. ಇದಕ್ಕೋಸ್ಕರ ಕಾನೂನು ಮಾಡಿದ್ರೆ ಪಾಲಿಸುತ್ತಾರೆ. ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಮಹಿಷಿ ವರದಿ ಜಾರಿಗೆ ಈಗಾಗಲೇ ಮೂರು ಸಭೆಗಳನ್ನು ನಡೆಸಿದ್ದೇವೆ ಎಂದು ಬೆಂಗಳೂರಿನಲ್ಲಿ ಹೇಳಿದರು.

ಇದನ್ನೂ ಓದಿ:ರಾಜ್ಯದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ‌ ಕಡ್ಡಾಯ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ-ಶ್ರೀನಿವಾಸ್​ ಪೂಜಾರಿ

ಪರಿಷತ್ ವಿಪಕ್ಷ ನಾಯಕ ಶ್ರೀನಿವಾಸ್​​ ಪೂಜಾರಿ ಮಾತನಾಡಿ ‘ಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಕರವೇ ಜನಜಾಗೃತಿ ಮಾಡುತ್ತಿದ್ದು, ಯಾವುದೇ ಹಿಂಸಾತ್ಮಕ ಕೃತ್ಯಗಳಿಗೆ ಅವಕಾಶ ಕೊಡಬಾರದು. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ರಾಜ್ಯ ಸರ್ಕಾರ ಕನ್ನಡ ಫಲಕ ಹಾಕಿಸುವ ಕೆಲಸ ಮಾಡಬೇಕು ಎಂದರು.

ಬೋರ್ಡ್​ಗಳಲ್ಲಿ ಕನ್ನಡ ಬಳಕೆ ಕಡ್ಡಾಯಕ್ಕೆ ಆಗ್ರಹಿಸಿ ಧರಣಿ

ಬೆಂಗಳೂರಿನ ಮಾಲ್ ಆಫ್ ಏಷ್ಯಾ ಬಳಿ ಕರವೇ ಕಾರ್ಯಕರ್ತರು ಬೋರ್ಡ್​ಗಳಲ್ಲಿ ಕನ್ನಡ ಬಳಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾಲ್​ನ ಹಿಂಬದಿ ಗೇಟ್​ನಿಂದ ಒಳಗೆ ನುಗ್ಗಲು ಪ್ರಯತ್ನಿಸಿದರು. ಈ ಹಿನ್ನಲೆ ಎಚ್ಚೆತ್ತ ಪೊಲೀಸರು ಕಾರ್ಯಕರ್ತರನ್ನ ವಶಕ್ಕೆ ಪಡೆದಿದ್ದಾರೆ.

ಫೆಬ್ರವರಿ 28ರೊಳಗೆ ಮಾಡ್ತೇವೆ ಎಂದ ಮಾಲ್ ಆಫ್ ಏಷ್ಯಾ ಆಡಳಿತ ಮಂಡಳಿ

ಈ ಕುರಿತು ಮಾತನಾಡಿದ ಮಾಲ್ ಆಫ್ ಏಷ್ಯಾ ಆಡಳಿತ ಮಂಡಳಿಯು ‘ನಾವು ಪಾಲಿಕೆ ಆದೇಶ ಕೊಟ್ಟಿರುವ ಹಾಗೇ ಫೆಬ್ರವರಿ 28ರೊಳಗೆ ಚೇಂಜ್​ ಮಾಡುತ್ತೇವೆ. ಕಮಿಷನರ್ ಅವರ ಹತ್ತಿರ ಟೈಮ್ ತಗೊಂಡಿದ್ದೇವೆ.‘ ಅಷ್ಟರಲ್ಲಿ ಮಾಡಿಸುತ್ತೇವೆ ಎಂದು ಉಡಾಫೆ ಉತ್ತರ ನೀಡಿದ್ದಾರೆ.60% ರೂಲ್ಸ್ ನಂತೆ ಬೋರ್ಡ್ ಹಾಕುತ್ತೇವೆ. ಇಲ್ಲಿ ಕನ್ನಡದವರು ಇದ್ದೇವೆ, ಕನ್ನಡದವರಿಗೇ ಕೆಲಸ ಕೊಟ್ಟಿದ್ದೇವೆ. ನಮಗೆ ಮೇಲಗಡೆಯಿಂದ ಆದೇಶ ಬರಬೇಕಿತ್ತು. ಈಗ ಅನುಮತಿ ಕೊಟ್ಟಿದ್ದಾರೆ. ಆದಷ್ಟು ಬೇಗ ಹಾಕುತ್ತೇವೆ ಎಂದು ಆಡಳಿತ ಮಂಡಳಿ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ